ಬಿಜೆಪಿ ಪಾದಯಾತ್ರೆಯ ನಿಜ ಉದ್ದೇಶ ತಿಳಿಸಿದ ಸಿಟಿ ರವಿ

Krishnaveni K
ಸೋಮವಾರ, 29 ಜುಲೈ 2024 (15:06 IST)
ಬೆಂಗಳೂರು: ಜನರಿಗೆ ಸತ್ಯವನ್ನು ಹೇಳುವುದೇ ಪಾದಯಾತ್ರೆಯ ಉದ್ದೇಶ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ತಿಳಿಸಿದರು.

ನಗರದಲ್ಲಿ ಇಂದು ನಡೆದ ಮೈಸೂರು ಪಾದಯಾತ್ರೆಯ ಪೂರ್ವ ತಯಾರಿ ಸಭೆಯ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಪ್ರಜಾಪ್ರಭುತ್ವದಲ್ಲಿ ಪ್ರಜೆಗಳೇ ಪ್ರಭುಗಳು. ಅವರಿಗೆ ಸತ್ಯದ ಮನವರಿಕೆ ಮಾಡಿಕೊಡುವ ದೃಷ್ಟಿಯಿಂದ ಬೆಂಗಳೂರಿನಿಂದ ಮೈಸೂರುವರೆಗೆ ಎನ್‍ಡಿಎ ವತಿಯಿಂದ ಪಾದಯಾತ್ರೆ ಮಾಡುತ್ತೇವೆ ಎಂದು ವಿವರ ನೀಡಿದರು.

ವಿವಿಧ ಹಗರಣಗಳ ಕುರಿತು ಸರಕಾರವು ನಮಗೆ ವಿಧಾನಮಂಡಲದಲ್ಲಿ ಚರ್ಚೆ ನಡೆಸಲು ಅವಕಾಶ ಕೊಟ್ಟಿಲ್ಲ. ಸರಕಾರಕ್ಕೆ ಸತ್ಯವನ್ನು ಎದುರಿಸುವ ಧಮ್ ಇದ್ದಿದ್ದರೆ ಅವರು ವಿಧಾನಮಂಡಲದಲ್ಲಿ ಚರ್ಚೆಗೆ ಅವಕಾಶ ಕೊಡುತ್ತಿದ್ದರು ಎಂದು ವಿಶ್ಲೇಷಿಸಿದರು.

ಮೂಡ ಹಗರಣ, ಮಹರ್ಷಿ ವಾಲ್ಮೀಕಿ ನಿಗಮದ ಹಗರಣ ಸೇರಿ ಎಲ್ಲ ಅವ್ಯವಹಾರಗಳನ್ನು ಜನರಿಗೆ ತಿಳಿಸುತ್ತೇವೆ ಎಂದ ಅವರು, ಭ್ರಷ್ಟಾಚಾರದ ಹಗರಣಗಳನ್ನು ಬಯಲಿಗೆಳೆಯುವ ಉದ್ದೇಶದಿಂದ ಪಾದಯಾತ್ರೆ ನಡೆಸಲಾಗುತ್ತಿದೆ ಎಂದು ಅವರು ಪ್ರಶ್ನೆಗೆ ಉತ್ತರ ಕೊಟ್ಟರು.
 
 
 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊನೆಗೂ ಯುಜಿಸಿ ಹೊಸ ನಿಯಮಕ್ಕೆ ಬ್ರೇಕ್ ಹಾಕಿದ ಸುಪ್ರೀಂಕೋರ್ಟ್

ಕಾಂಗ್ರೆಸ್ಸಿನವರಿಗೆ ಮಹಾತ್ಮ ಗಾಂಧಿಯವರ ಬಗ್ಗೆ ಮಾತನಾಡುವ ಯಾವುದೇ ಯೋಗ್ಯತೆ ಇಲ್ಲ: ವಿಜಯೇಂದ್ರ

ಪತ್ರಿಕೆಗಳಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಸುಳ್ಳು ಜಾಹೀರಾತು: ಸಿಟಿ ರವಿ ಆಕ್ರೋಶ

ಅನಂತ ಸುಬ್ಬರಾವ್ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

ಯುಜಿಸಿ ಹೊಸ ನಿಯಮ ಎಂದರೇನು, ಇದರ ವಿರುದ್ಧ ಪ್ರತಿಭಟನೆಗಳು ಯಾಕಾಗ್ತಿವೆ

ಮುಂದಿನ ಸುದ್ದಿ
Show comments