Webdunia - Bharat's app for daily news and videos

Install App

ಹನುಮನ ಚಿಹ್ನೆಯಿದ್ದರೆ ಸಮಸ್ಯೆ, ಬೆಳಿಗ್ಗೆಯೇ ಮೈಕ್ ಹಾಕಿ ಕೂಗಿದರೆ ಸಮಸ್ಯೆಯಿಲ್ವೇ: ಸಿಟಿ ರವಿ

Krishnaveni K
ಶುಕ್ರವಾರ, 30 ಆಗಸ್ಟ್ 2024 (12:25 IST)
ಬೆಂಗಳೂರು: ಅಂಜನಾದ್ರಿ ಬೆಟ್ಟದ ಬಳಿ ವಿದ್ಯುತ್ ದೀಪಗಳು ತ್ರಿಶೂಲ-ತಿಲಕದ ಆಕಾರದಲ್ಲಿರುವುದರಿಂದ ಧಾರ್ಮಿಕ ಭಾವನೆಗೆ ಧಕ್ಕೆ ಬರುತ್ತಿದೆ ಎಂದು ತೆಗೆಸಿದ್ದ ಜಿಲ್ಲಾಡಳಿತದ ವಿರುದ್ಧ ಶಾಸಕ ಸಿಟಿ ರವಿ ಗರಂ ಆಗಿದ್ದಾರೆ.

ಹನುಮನ ಜನ್ಮಸ್ಥಳ ಅಂಜನಾದ್ರಿ ಬೆಟ್ಟದ ಬಳಿ ವಿದ್ಯುತ್ ದೀಪಗಳಿಗೆ ತ್ರಿಶೂಲ, ತಿಲಕದ ನಾಮದ ಆಕಾರವಿದ್ದರೆ ಅದು ಧಾರ್ಮಿಕ ಭಾವನೆಗೆ ಅಡ್ಡಿ. ಅದೇ ದಿನ ಬೆಳಗಾದರೆ ಊರಿಗಿಡೀ ಕೇಳುವಂತೆ ಮೈಕ್ ಹಾಕಿ ಕಿರುಚಾಡಿ ತೊಂದರೆ ಮಾಡಿದರೆ ಧಕ್ಕೆಯಾಗುವುದಿಲ್ಲವೇ ಎಂದು ಸಿಟಿ ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗೆ ಅಂಜನಾದ್ರಿ ಬೆಟ್ಟದ ಸಮೀಪದ ವಿದ್ಯುತ್ ದೀಪಗಳಿಗೆ ತ್ರಿಶೂಲ, ತಿಲಕದ ಆಕಾರವಿರುವುದರಿಂದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಬರುತ್ತದೆ ಎಂದು ತಹಶೀಲ್ದಾರ್ ಇಂತಹ ದೀಪಗಳನ್ನು ತೆರವುಗೊಳಿಸಲು ಆದೇಶ ನೀಡಿದ್ದರು. ಇದೀಗ ಆ ತಹಶೀಲ್ದಾರ್ ರನ್ನು ಅಮಾನತ್ತುಗೊಳಿಸುವಂತೆ ಸಿಟಿ ರವಿ ಆಗ್ರಹಿಸಿದ್ದಾರೆ.

ಹಿಂದೂ ವಿರೋಧಿ ನಿರ್ಣಯ ಕೈಗೊಂಡಿರುವ ಗಂಗಾವತಿಯ ತಹಶೀಲ್ದಾರ್ ನನ್ನು ತಕ್ಷಣವೇ ಅಮಾನತು ಮಾಡಬೇಕು. ಇಲ್ಲದೇ ಹೋದರೆ ಗಂಗಾವತಿಗೆ ನಾವೇ ಬಂದು ವಿದ್ಯುತ್ ದೀಪ ಅಳವಡಿಸಬೇಕಾಗುತ್ತದೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಸಿಟಿ ರವಿ ಎಚ್ಚರಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bakrid: ಅಲ್ಲಾಹನಿಗಾಗಿ ಕತ್ತು ಸೀಳಿಕೊಂಡು ದೇಹತ್ಯಾಗ ಮಾಡಿದ ವ್ಯಕ್ತಿ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ, ಆರೋಪಿಗಳ ಬಾಯಿಂದ್ದ ಬೆಚ್ಚಿಬೀಳಿಸುವ ಮಾಹಿತಿ ಹೊರಕ್ಕೆ

Covid 19: ದೇಶದಲ್ಲಿ ಏರುತ್ತಲೇ ಇದೆ ಕೋವಿಡ್ 19 ಪ್ರಕರಣಗಳು, ಸಕ್ರಿಯ ಪ್ರಕರಣಗಳ ಸಂಖ್ಯೆ ಹೀಗಿದೆ

Chitradurga Renukaswamy: ಹತ್ಯೆಯಾಗಿ ಇಂದಿಗೆ ಒಂದು ವರ್ಷ, ಪೂಜೆ ಸಲ್ಲಿಸಿದ ಕುಟುಂಬಸ್ಥರು

Rajastan: ನಿದ್ರಾಜನಕ ಔಷಧಿ ನೀಡಿ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಮೇಲೆ ರೇಪ್‌

ಮುಂದಿನ ಸುದ್ದಿ
Show comments