Webdunia - Bharat's app for daily news and videos

Install App

ಪಂಚಮಸಾಲಿ ಪ್ರತಿಭಟನಾಕಾರರ ಜೊತೆ ಅಮಾನವೀಯ ವರ್ತನೆ: ಸಿಟಿ ರವಿ ಆಕ್ರೋಶ

Krishnaveni K
ಬುಧವಾರ, 11 ಡಿಸೆಂಬರ್ 2024 (15:13 IST)
ಬೆಂಗಳೂರು: ಪಂಚಮಸಾಲಿ ಸಮಾಜದ ಶಾಂತಿಯುತ ಪ್ರತಿಭಟನೆ, ಹೋರಾಟಗಾರರ ಮೇಲೆ ಸರಕಾರವು ಲಾಠಿಚಾರ್ಜ್ ನಡೆಸಿ ಅಮಾನವೀಯವಾಗಿ ವರ್ತಿಸಿದೆ ಎಂದು ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಆಕ್ಷೇಪಿಸಿದ್ದಾರೆ. 

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಮಾಜಿಕ ನ್ಯಾಯದಡಿ ಪಂಚಮಸಾಲಿಗಳಿಗೆ ನ್ಯಾಯ ಕೊಡುವ ಕೆಲಸ ಮಾಡಿ ಎಂದು ಆಗ್ರಹಿಸಿದರು. ನಿನ್ನೆ ನಡೆದ ಲಾಠಿಚಾರ್ಜ್ ಸಂಬಂಧ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ
ನ್ಯಾಯಾಂಗ ತನಿಖೆ ಮಾಡಿಸುವಂತೆ ಒತ್ತಾಯವನ್ನು ಮುಂದಿಟ್ಟರು.

ಬೆಳಗಾವಿಯಲ್ಲಿ ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿತ್ತು. ಆಗ ನಡೆಸಿದ ಲಾಠಿಚಾರ್ಜ್‍ನಿಂದ ಹೋರಾಟದಲ್ಲಿ ಪಾಲ್ಗೊಂಡಿದ್ದ ನೂರಾರು ಜನ ಲಿಂಗಾಯತ ಸಮುದಾಯಕ್ಕೆ ಸೇರಿದ ಪಂಚಮಸಾಲಿ ರೈತರು ಗಾಯಗೊಂಡಿದ್ದಾರೆ. ಸರಕಾರದ್ದು ಸರ್ವಾಧಿಕಾರಿ ನಡೆ, ಪ್ರಜಾಪ್ರಭುತ್ವ ವಿರೋಧಿ ನಡೆ ಎಂದು ಖಂಡಿಸಿದರು.

ಪಂಚಮಸಾಲಿ ಸಮುದಾಯದ ಬೇಡಿಕೆ ಇವತ್ತು ನಿನ್ನೆಯದಲ್ಲ; 2 ಎ ಮೀಸಲಾತಿ ಸಂಬಂಧ ಈ ಸರಕಾರ ಬಂದ ಆರಂಭದಿಂದ ಅವರ ಬೇಡಿಕೆಗಳನ್ನು ಪುನರುಚ್ಚಾರ ಮಾಡುತ್ತಿದ್ದಾರೆ. ಬಿಜೆಪಿ ಸರಕಾರ ಇದ್ದಾಗ 2 ಸಿ, 2 ಡಿ ಅಡಿ ಎರಡು ರೀತಿ ಮೀಸಲಾತಿ ಕೊಟ್ಟು, ಅದರಡಿಯಲ್ಲಿ ವಿವಿಧ ಸಮುದಾಯಗಳನ್ನು ಒಟ್ಟು ಸೇರಿಸಿ ಮೀಸಲಾತಿ ಹೆಚ್ಚಿಸುವ ಕೆಲಸ ಮಾಡಿತ್ತು ಎಂದು ವಿವರಿಸಿದರು.
 
2 ಸಿಗೆ ಶೇ 4 ಮೀಸಲಾತಿ ಇದ್ದುದನ್ನು ಶೇ 6 ಮಾಡಿದ್ದು, 2 ಡಿ ಅಡಿ ಶೇ 5 ಇದ್ದುದನ್ನು ಶೇ 7 ಮಾಡಿದ್ದರು. ಪಂಚಮಸಾಲಿಗಳನ್ನೂ 2 ಡಿ ವ್ಯಾಪ್ತಿ ಒಳಗಡೆ ತರುವ ಕೆಲಸ ಮಾಡಲಾಗಿತ್ತು. ಅದನ್ನು ಈ ಕಾಂಗ್ರೆಸ್ ಸರಕಾರ ಅನುಷ್ಠಾನ ಮಾಡಿಲ್ಲ. 2 ಎ ಮೀಸಲಾತಿ ಬಗ್ಗೆಯೂ ಸರಿಯಾಗಿ ಸ್ಪಂದಿಸಿಲ್ಲ; ಈ ಮೂಲಕ ಹೋರಾಟಕ್ಕಿಳಿಯುವ ಅನಿವಾರ್ಯತೆಯನ್ನು ಸೃಷ್ಟಿ ಮಾಡಿದ್ದೇ ಆಳುವ ಕಾಂಗ್ರೆಸ್ ಸರಕಾರ ಎಂದು ಆಕ್ಷೇಪ ವ್ಯಕ್ತಪಡಿಸಿದರು.
 
ರಾಜೀನಾಮೆ ಕೊಡುವವರು ಎಲ್ಲಿ ಹೋಗಿದ್ದಾರೆ?
ಕಾಂಗ್ರೆಸ್ಸಿಗರು ವಿಪಕ್ಷದಲ್ಲಿದ್ದಾಗ ಪಂಚಮಸಾಲಿ ಸಮಾಜದ ಹೋರಾಟಕ್ಕೆ ಸಂಬಂಧಿಸಿ ಮೊಸಳೆ ಕಣ್ಣೀರು ಸುರಿಸಿದ್ದರು. ಇವರ ಪಕ್ಷದ ಮುಖಂಡರು ರಾಜೀನಾಮೆ ಕೊಡುವ ಮಾತನಾಡಿದ್ದರು. ಲಾಠಿಚಾರ್ಜ್ ಆಗಿದೆ; ಸ್ವಾಮೀಜಿಗಳನ್ನು ಬಂಧಿಸಿದ್ದೀರಿ. ಲಕ್ಷ್ಮಿ ಹೆಬ್ಬಾಳ್ಕರ್ ಸೇರಿ ರಾಜೀನಾಮೆ ಕೊಡುವವರೆಲ್ಲ ಎಲ್ಲಿ ಬಿಲ ಸೇರಿಕೊಂಡಿದ್ದೀರಿ? ಎಂದು ಸಿ.ಟಿ. ರವಿ ಅವರು ಪ್ರಶ್ನಿಸಿದರು.
ಇವರೆಲ್ಲ ಯಾವ ಮುಖ ಇಟ್ಟುಕೊಂಡು ಜನರಿಗೆ ಮುಖ ತೋರಿಸುತ್ತಾರೆ ಎಂದು ಕೇಳಿದರು. ಮನವಿ ಸ್ವೀಕರಿಸಲು ಸಾಧ್ಯವಾಗದಷ್ಟು ಮುಖ್ಯಮಂತ್ರಿಗಳು ಸರ್ವಾಧಿಕಾರಿ ಆಗಿಬಿಟ್ಟರೇ ಎಂದು ಪ್ರಶ್ನೆಯನ್ನು ಮುಂದಿಟ್ಟರು. ಲಾಠಿಚಾರ್ಜ್ ಮಾಡಿಸುವುದೇ ಸಮಾಜವಾದವೇ ಎಂದರು.
 
ಧರ್ಮಾಧಾರಿತ ಮೀಸಲಾತಿಯನ್ನು ನಮ್ಮ ಸಂವಿಧಾನವೂ ನಿರಾಕರಿಸಿದೆ. ಆಂಧ್ರ, ಪಶ್ಚಿಮ ಬಂಗಾಲ ಸರಕಾರಗಳು ಧರ್ಮಾಧಾರಿತ ಮೀಸಲಾತಿ ಕೊಡುವುದನ್ನು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಅದು ಸಂವಿಧಾನಬಾಹಿರ ಎಂದು ತಿಳಿಸಿದೆ. ಹಾಗಾಗಿ ನೀವು ಬಿಜೆಪಿ ಸರಕಾರ ಜಾರಿಗೊಳಿಸಿದ್ದ 2 ಸಿ, 2ಡಿ ಯನ್ನಾದರೂ ಅನುಷ್ಠಾನಕ್ಕೆ ತನ್ನಿ ಎಂದು ಒತ್ತಾಯಿಸಿದರು. ಅಥವಾ 2 ಎ ಅಡಿ ಪಂಚಮಸಾಲಿಗಳಿಗೂ ಮೀಸಲಾತಿ ಕೊಡಿ ಎಂದು ಆಗ್ರಹಿಸಿದರು.

ನಮ್ಮ ಪಕ್ಷವು ಈ ಸಂಬಂಧ ವಿಧಾನಸಭೆ ಒಳಗಡೆಯೂ ಹೋರಾಟ ಮಾಡಲಿದೆ ಎಂದ ಅವರು, ಮುಖ್ಯಮಂತ್ರಿಗಳ ನಡವಳಿಕೆ ಪರಿಪಕ್ವವಾಗಿಲ್ಲ; ಪ್ರಜಾಪ್ರಭುತ್ವಕ್ಕೆ ತಕ್ಕದಾದ ನಡೆಯಲ್ಲ ಎಂದು ಖಂಡಿಸಿದರು. ಕಾಂಗ್ರೆಸ್ಸಿಗರು ತಪ್ಪಾಗಿದೆ; ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳುವುದಾಗಿ ಒಂದು ಮಾತನ್ನೂ ಆಡಿಲ್ಲ; ಕ್ಷಮೆ ಕೇಳುವ ಔದಾರ್ಯವನ್ನೂ ಪ್ರದರ್ಶಿಸಿಲ್ಲ ಎಂದು ಟೀಕಿಸಿದರು.
 
 
ಕರ್ನಾಟಕದ ಎತ್ತಿನಹೊಳೆ ಸಂಬಂಧ ಬೇಲೂರಿನ ವಡ್ಡರಹಳ್ಳಿಯ ರೈತ ರಂಗಸ್ವಾಮಿ ಅವರು ಎತ್ತಿನಹೊಳೆಯ ಪರಿಹಾರ ಬಂದಿಲ್ಲ ಎಂದು ಅಲೆದಲೆದು ಸಾಕಾಗಿ, ಲಂಚ ಕೇಳಿದ ಅಧಿಕಾರಿಯ ನಡೆಯಿಂದ ಬೇಸತ್ತು ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಾಸನದಲ್ಲಿ ಸಮಾವೇಶ ಮಾಡಿದ ನೀವು ಎತ್ತಿನಹೊಳೆ ದುರ್ಘಟನೆ, ಸರಣಿ ರೀತಿಯಲ್ಲಿ ಬಾಣಂತಿಯರ- ಹಸುಗೂಸುಗಳ ಸಾವು ಬಗ್ಗೆ ತೋರಿಸದ ಮಾನವೀಯ ಕಳಕಳಿ ವಯನಾಡಿಗೆ ಸೀಮಿತವಾದ ಮರ್ಮವೇನು ಎಂದು ಕೇಳಿದರು.
 
 
 
 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

Video, ನಿನ್ನ ಗುರುತೇ ಸಿಗದ ಹಾಗೇ ಮಾಡುತ್ತೇನೆ: ಗ್ಯಾಸ್ ಸ್ಟೇಷನ್ ಸಿಬ್ಬಂದಿಗೆ ಮಹಿಳೆ ಗನ್ ಪಾಯಿಂಟ್‌

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಮುಂದಿನ ಸುದ್ದಿ
Show comments