ನೀವು ತೊಡೆ ತಟ್ಟಿದರೆ ನಾವು ತೊಡೆ ಮುರಿಯುತ್ತೇವೆ: ಸಿಟಿ ರವಿ ಎಚ್ಚರಿಕೆ

Krishnaveni K
ಬುಧವಾರ, 10 ಸೆಪ್ಟಂಬರ್ 2025 (13:43 IST)
ಮಂಡ್ಯ: ಮದ್ದೂರಿನಲ್ಲಿ ನಡೆದ ಗಣೇಶೋತ್ಸವ ಮೆರವಣಿಗೆ ಗಲಾಟೆ ಬಗ್ಗೆ ಬಿಜೆಪಿ ಎಂಎಲ್ ಸಿ ಸಿಟಿ ರವಿ ಪ್ರತಿಕ್ರಿಯಿಸಿದ್ದು ನೀವು ತೊಡೆ ತಟ್ಟಿದರೆ ನಾವು ತೊಡೆ ಮುರಿಯಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಮುಸ್ಲಿಂ ಸಮುದಾಯಕ್ಕೆ ಸೇರಿದ ಕಿಡಿಗೇಡಿಗಳು ಗಣೇಶ ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆಸಿದ್ದರಿಂದ ಹಿಂಸಾಚಾರ ಭುಗಿಲೆದ್ದಿತ್ತು. ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಮೈಸೂರು ಸಂಸದ ಯದುವೀರ್ ಒಡೆಯರ್ ನೇತೃತ್ವದಲ್ಲಿ ಬಿಜೆಪಿ ನಾಯಕರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 ಈ ಸಂದರ್ಭದಲ್ಲಿ ಮಾತನಾಡಿರುವ ಅವರು ನಾವು ಹಿಂದೂ ವಿಚಾರವನ್ನು ರಾಜಕೀಯಕ್ಕೆ ಬಳಸಲ್ಲ. ಆದರೆ ನೀವು ತೊಡೆ ತಟ್ಟಿದರೆ ನಾವು ತೊಡೆ ಮುರಿಯಬೇಕಾಗುತ್ತದೆ. ತಲೆ ತೆಗೆಯಬೇಕಾಗುತ್ತದೆ ಎಂದು ಕಿಡಿ ಹೊತ್ತಿಸುವ ಮಾತುಗಳನ್ನಾಡಿದ್ದಾರೆ.

ಅಷ್ಟೇ ಅಲ್ಲದೆ, ಈ ಬಗ್ಗೆ ಟ್ವೀಟ್ ಮಾಡಿರುವ ಅವರು ‘ಶತಮಾನಗಳ ಹಿಂದೆ ಹಿಂದೂ ಸಮಾಜ ಮರೆತ "ಶಾಸ್ತ್ರಾಭ್ಯಾಸ" ಹಾಗು "ಶಸ್ತ್ರಾಭ್ಯಾಸ" ಎರಡನ್ನೂ ಮತ್ತೆ ನೆನಪಿಸಿಕೊಂಡು ಕಲಿಯಬೇಕಾದ ಅತ್ಯಂತ ಸಂಕೀರ್ಣ ಕಾಲಘಟ್ಟದಲ್ಲಿ ನಾವಿದ್ದೇವೆ. ಇಂದು ಇದು "ಅಗತ್ಯ" ಅಷ್ಟೆ ಅಲ್ಲಾ ಬದಲಾಗಿ "ಅನಿವಾರ್ಯ" ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾತ್ರಿ ಡ್ಯೂಟಿಯಲ್ಲಿದ್ದ ಪೊಲೀಸರ ಮೇಲೆ ದಾಳಿ, ಇಬ್ಬರು ಅರೆಸ್ಟ್‌

ನಿಂತಿದ್ದ ಲಾರಿಗೆ ಬೊಲೆರೋ ಡಿಕ್ಕಿ, ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವು

ನಾಳೆ ಸಿದ್ದರಾಮಯ್ಯ ರಾಜೀನಾಮೆ ವದಂತಿ: ಸಿಎಂ ನಿವಾಸದ ಬಳಿ ಶಾಸಕರು, ಸಚಿರ ದೌಡು

ಬಕ್ರೀದ್‌ ಹಬ್ಬ: ಗೋಹತ್ಯೆ, ಅಕ್ರಮ ಮಾಂಸ ಮಾರಾಟ ತಡೆಗೆ ಕಟ್ಟುನಿಟ್ಟಿನ ಕ್ರಮ

ರಾಜ್ಯದಲ್ಲಿ ಎಬೋಲಾ ಪ್ರಕರಣದ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ಸಚಿವ ದಿನೇಶ್ ಗುಂಡೂರಾವ್‌

ಮುಂದಿನ ಸುದ್ದಿ
Show comments