Select Your Language

Notifications

webdunia
webdunia
webdunia
webdunia

ಕೊರೊನಾದಿಂದ ಎಲ್ರೂ ಗುಣಮುಖ : ಸಚಿವರಿಗೆ ಫುಲ್ ನೆಮ್ಮದಿ

ಕೊರೊನಾದಿಂದ ಎಲ್ರೂ ಗುಣಮುಖ : ಸಚಿವರಿಗೆ ಫುಲ್ ನೆಮ್ಮದಿ
ಗದಗ , ಭಾನುವಾರ, 10 ಮೇ 2020 (22:27 IST)
ಚಿಕಿತ್ಸೆಗೆ ಒಳಗಾಗಿದ್ದ ಕೋವಿಡ್-19 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿರುವುದು ಸಚಿವರೊಬ್ಬರಿಗೆ ನೆಮ್ಮದಿ ನೀಡಿದೆ.

ಕೋವಿಡ್-19 ಸೋಂಕು ತಡೆ ಕುರಿತು ಗದಗ ಜಿಲ್ಲೆಯ ಸಾರ್ವಜನಿಕರು, ಯುವಜನರ ಮತ್ತು ಅಧಿಕಾರಿ ಸಿಬ್ಬಂದಿಯಾದಿಯಾಗಿ ಸರ್ವರೂ ಹೆಚ್ಚಿನ ಜವಾಬ್ದಾರಿಯಿಂದ ಜೀವನ ನಡೆಸಬೇಕಾದ ಅಗತ್ಯವಿದೆ ಎಂದು ರಾಜ್ಯದ ಗಣಿ ಭೂವಿಜ್ಞಾನ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ತಿಳಿಸಿದ್ದಾರೆ.

ಕೋವಿಡ್-19 ಸೋಂಕಿನ  ತಡೆ ಮತ್ತು ನಿಯಂತ್ರಣ ಕುರಿತು ಎಲ್ಲರೂ  ಸಾಮಾಜಿಕ ಅಂತರ ಕಾಯ್ದುಕೊಳ್ಳುವ, ಅನವಶ್ಯಕ ಓಡಾಟ, ಪ್ರಯಾಣ ನಿಲ್ಲಿಸುವ, ಮುಖಕ್ಕೆ ಮಾಸ್ಕ, ಸ್ಯಾನಿಟೈಜರ್ ಉಪಯೋಗ , ಆಗಾಗ  ಕೈಗಳನ್ನು ಚೆನ್ನಾಗಿ ತೊಳೆದುಕೊಳ್ಳುವದು ನಮ್ಮ ನಿತ್ಯದ ಅಭ್ಯಾಸವಾಗಬೇಕು.

ಎಲ್ಲರೂ ಈ ಮುಂಜಾಗ್ರತಾ ಮುನ್ನೆಚ್ಚರಿಕೆ ಕ್ರಮಗಳನ್ನು ತಪ್ಪದೇ ಪಾಲಿಸಿದಲ್ಲಿ ಮಾತ್ರ ಕೊವಿಡ್-19 ಸೋಂಕನ್ನು ಯಶಸ್ವಿಯಾಗಿ ತಡೆಗಟ್ಟಬಹುದು ಎಂದಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯದಿಂದ ಬಿಹಾರ್, ಉತ್ತರ ಪ್ರದೇಶಕ್ಕೆ ಹೊರಟ ರೈಲು