Webdunia - Bharat's app for daily news and videos

Install App

ನೋಟ್ ಬ್ಯಾನ್ ಒಂದು ರಾಜಕೀಯ ಗಿಮಿಕ್: ಸಚಿವ ಖಾದರ್

Webdunia
ಗುರುವಾರ, 17 ನವೆಂಬರ್ 2016 (18:57 IST)
ಕೇಂದ್ರ ಸರಕಾರ ಬಡವರ ಸಾಲ ಮನ್ನಾ ಮಾಡಿಲ್ಲ. ಆದರೆ, ಶ್ರೀಮಂತರ ಸಾಲವನ್ನು ಮನ್ನಾ ಮಾಡುತ್ತಿದೆ. ಕೇವಲ ಕೈಗಾರಿಕೆ ಕ್ಷೇತ್ರದ ಸಾಲ ಮನ್ನಾ ಮಾಡುತ್ತಿರುವುದು ಏಕೆ? ವಿದ್ಯಾರ್ಥಿಗಳ ಸಾಲವನ್ನು ಮನ್ನಾ ಮಾಡಿ. ಕೇವಲ ಶ್ರೀಮಂತರ ಸಾಲ ಮನ್ನಾ ಮಾಡುತ್ತಿರುವುದನ್ನು ಗಮನಿಸಿದರೆ ನೋಟ್ ಬ್ಯಾನ್ ಒಂದು ರಾಜಕೀಯ ಗಿಮಿಕ್ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ಆಕ್ರೋಶ ವ್ಯಕ್ತಪಡಿಸಿದರು. 
 
ನಿಮ್ಮ ಬ್ಯಾಂಕ್ ಖಾತೆಗೆ 2.5 ಲಕ್ಷ ರೂಪಾಯಿ ಜಮೆ ಮಾಡಿದರೆ ಟ್ಯಾಕ್ಸ್ ಬೀಳುತ್ತೆ. ಟ್ಯಾಕ್ಸ್ ಬಿದ್ದರೆ ಬಿಪಿಎಲ್ ಕಾರ್ಡ್ ರದ್ದಾಗುತ್ತದೆ ಎಂದು ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಎಚ್ಚರಿಕೆ ನೀಡಿದ್ದಾರೆ.
 
ವಿಕಾಸಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಪಿಎಲ್ ಕಾರ್ಡ್ ಹೊಂದಿರುವವರು ಆದಾಯ ತೆರಿಗೆ ಮಾಡುವಂತಿಲ್ಲ. ಸ್ವಂತ ಕಾರು ಹಾಗೂ ನಗರ ಪ್ರದೇಶದಲ್ಲಿ ಸ್ವಂತ ಮನೆ ಹೊಂದುವಂತಿಲ್ಲ. ತಮ್ಮ ಖಾತೆಗೆ 2.5 ಲಕ್ಷ ಹಣ ಜಮೆ ಮಾಡಿದರೆ ಟ್ಯಾಕ್ಸ್ ಬೀಳುತ್ತೆ. ಹೀಗಾಗಿ ನಿಮ್ಮ ಬಿಪಿಎಲ್ ಕಾರ್ಡ್ ರದ್ದಾಗುತ್ತದೆ ಎಂದರು.
 
ಏಕಾಏಕಿ ನೋಟು ನಿಷೇಧ ಮಾಡಿರುವುದರಿಂದ ಜನಸಾಮಾನ್ಯರಿಗೆ ತೊಂದರೆಯಾಗುತ್ತಿದೆ. ಹೀಗಾಗಿ ಜನತೆಗೆ ತೊಂದರೆ ಆಗದಿರಲಿ ಎಂದು ಸಾಲದ ರೂಪದಲ್ಲಿ ಪಡಿತರವನ್ನು ನೀಡಲು ನಿರ್ಧರಿಸಿದ್ದೇವೆ. ಇದರಿಂದ ರಾಜ್ಯ ಸರಕಾರದ ಬೊಕ್ಕಸಕ್ಕೆ 40 ಕೋಟಿ ಹೊರೆಯಾಗಲಿದೆ. ಸಾಲದ ರೂಪದಲ್ಲಿ ಪಡೆದ ಪಡಿತರವನ್ನು ಡಿಸೆಂಬರ್ ನಂತರ ಮರುಪಾವತಿಸಬೇಕು ಎಂದು ಆಹಾರ ಖಾತೆ ಸಚಿವ ಯು.ಟಿ.ಖಾದರ್ ಹೇಳಿದರು.
 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments