ಪ್ರಯಾಣಿಕರ ಸೋಗಿನಲ್ಲಿ ಚಿನ್ನ ಸಾಗಿಸುತ್ತಿದ್ದ ಇಬ್ಬರನ್ನು ಬಂಧಿಸಿರುವ ಕಸ್ಟಮ್ಸ್ ಅಧಿಕಾರಿಗಳು

Webdunia
ಶುಕ್ರವಾರ, 8 ಅಕ್ಟೋಬರ್ 2021 (20:21 IST)
ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಪ್ರಯಾಣಿಕರ ಸೋಗಿನಲ್ಲಿ ಚಿನ್ನ ಸಾಗಿಸುತ್ತಿದ್ದ ಇಬ್ಬರನ್ನು ಬಂಧಿಸಿರುವ ಕಸ್ಟಮ್ಸ್ ಅಧಿಕಾರಿಗಳು, ಅವರಿಂದ 420 ಗ್ರಾಂ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ. 
ಆರೋಪಿಗಳು ಚಿನ್ನವನ್ನು ಪ್ಯಾಂಟ್‍ಗಳಲ್ಲಿ, ಒಳ ಉಡುಪುಗಳಲ್ಲಿ  ಮತ್ತು ಅವರ ಚೆಕ್-ಇನ್ ಬ್ಯಾಗ್‍ನಲ್ಲಿ  ಕದ್ದು ತಂದಿದ್ದರು. ಬುಧವಾರ ನಸುಕಿನ ಜಾವ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು, ಏರ್ ಅರೇಬಿಯಾ ವಿಮಾನದಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರುತ್ತಿದ್ದ ಪ್ರಯಾಣಿಕರಿಂದ ಚಿನ್ನದ ಪುಡಿ, ಬಳೆ ಮತ್ತು ಚಿನ್ನದ ಬಿಸ್ಕತ್ತುಗಳು ಸೇರಿ  ನಾನಾ ಮಾದರಿಯ 421.45 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. 
ಶಾರ್ಜಾದಿಂದ ಬೆಂಗಳೂರಿಗೆ ಬರುತ್ತಿದ್ದ 47 ವರ್ಷದ ಆಂಧ್ರಪ್ರದೇಶದ ಕಡಪ ಮೂಲದ ಪ್ರಯಾಣಿಕ 116.48 ಗ್ರಾಂ ತೂಕದ ಚಿನ್ನದ ಬಿಸ್ಕತ್ತುಗಳು ಮತ್ತು 126.88 ಗ್ರಾಂ ತೂಕದ 3 ಬಳೆಗಳನ್ನು ಪ್ಲಾಸ್ಟಿಕ್ ಚೆಕ್ ಇನ್ ಬ್ಯಾಗ್ ಒಳಗೆ ಮತ್ತು ಪ್ಯಾಂಟ್ ನ ಜೇಬಿನಲ್ಲಿ ಅಡಗಿಸಿಟ್ಟಿಕೊಂಡಿದ್ದರು. ಇವರನ್ನು ಅನುಮಾನಸ್ಪದವಾಗಿ ಹಿಡಿದು ಅವರ ಬ್ಯಾಗೇಜ್ ಅನ್ನು ಸ್ಕ್ಯಾನ್ ಮಾಡಿದಾಗ ಚಿನ್ನಾಭರಣ ಪತ್ತೆಯಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದರು. 
ಮತ್ತೊಂದು ಪ್ರಕರಣದಲ್ಲಿ ತಮಿಳುನಾಡಿನ ತಿರುಚಿರಾಪಳ್ಳಿಯ 52 ವರ್ಷದ ಪ್ರಯಾಣಿಕ ತನ್ನ ಚೆಕ್-ಇನ್ ಬ್ಯಾಗ್‍ನಲ್ಲಿ  ತುಂಬಿದ್ದ ಒಳ ಉಡುಪುಗಳ ಹಾಕಿರುವ ಬಾಕ್ಸ್‍ನಲ್ಲಿ  ಪೇಪರ್‍ಫಾಯಿಲ್‍ಗಳ ನಡುವೆ ಬಂಗಾರದ ಪುಡಿಯನ್ನು ಸಾಗಿಸುತ್ತಿದ್ದ. ಈತನ ಬ್ಯಾಗ್ ಅನ್ನು ಪರೀಕ್ಷೆಗೊಳಪಡಿಸಿದಾಗ 178.09 ಗ್ರಾಂ ಚಿನ್ನ  ಹಾಗೂ ಚಿನ್ನದ ಪುಡಿ ಪತ್ತೆಯಾಗಿದೆ ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಬೈಲ್‌ನಲ್ಲಿ ಸಂಚಾರ ಸಾಥಿ ಆ್ಯಪ್‌ ಇನ್‌ಸ್ಟಾಲ್‌: ವಿವಾದ ಬೆನ್ನಲ್ಲೇ ಯೂಟರ್ನ್‌ ಹೊಡೆದ ಕೇಂದ್ರ ಸರ್ಕಾರ

ಸೂರಜ್‌ ಬೆನ್ನಲ್ಲೇ ಪ್ರಜ್ವಲ್ ರೇವಣ್ಣಗೂ ಬಿಗ್‌ಶಾಕ್: ಶಿಕ್ಷೆ ಅಮಾನತು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಬಂದೋಬಸ್ತ್ ನಡುವೆ ದೆಹಲಿಯ ಎರಡು ಕಾಲೇಜಿಗೆ ಬಾಂಬ್ ಬೆದರಿಕೆ

ಭಿನ್ನಾಭಿಪ್ರಾಯ ಬಗೆಹರಿದಿದೆ: ಸಿಎಂ ಕುರ್ಚಿ ಗುದ್ದಾಟಕ್ಕೆ ಪರಮೇಶ್ವರ್ ಪ್ರತಿಕ್ರಿಯೆ

ಯಾವತ್ತಾದ್ರೂ ಬಿಟ್ಟು ಕೊಡಲೇ ಬೇಕಾಲ್ವ, ಸಿಎಂ ಆಪ್ತ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಮುಂದಿನ ಸುದ್ದಿ
Show comments