Webdunia - Bharat's app for daily news and videos

Install App

ಸೈಬರ್ ಭದ್ರತೆ ಎನ್ನುವುದು ಈಗ ಜಾಗತಿಕ ಅಗತ್ಯ: ಡಾ.ಸಿ.ಎನ್. ಅಶ್ವತ್ಥನಾರಾಯಣ

Webdunia
ಬುಧವಾರ, 1 ಸೆಪ್ಟಂಬರ್ 2021 (21:01 IST)
ಬೆಂಗಳೂರು: ಡಿಜಿಟಲ್ ಕಲಿಕೆಗೆ ಒತ್ತು ನೀಡುತ್ತಿರುವ ರಾಜ್ಯ ಸರಕಾರವು ಸೈಬರ್ ಭದ್ರತೆ ಅತಿ ಹೆಚ್ಚು ಪ್ರಾಮುಖ್ಯತೆ ನೀಡುತ್ತಿದೆ ಎಂದು ಉನ್ನತ ಶಿಕ್ಷಣ, ಐಟಿ-ಬಿಟಿ ಹಾಗೂ ವಿಜ್ಞಾನ-ತಂತ್ರಜ್ಞಾನ ಖಾತೆ ಸಚಿವರಾದ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.
 
ನಗರದ ಸರಕಾರಿ ರಾಮನಾರಾಯಣ್ ಚೆಲ್ಲಾರಾಂ ವಾಣಿಜ್ಯ ಮತ್ತು ಮ್ಯಾನೇಜ್ಮೆಂಟ್ ಕಾಲೇಜ್ (ಆರ್.ಸಿ.ಕಾಲೇಜ್) ಹಮ್ಮಿಕೊಂಡಿದ್ದ ಸಿಬ್ಬಂದಿ ಅಭಿವೃದ್ಧಿ ಯೋಜನೆ ಕಾರ್ಯಕ್ರಮದಲ್ಲಿ ʼಡಿಜಿಟಲ್ ಯುಗದಲ್ಲಿ ಕಾನೂನು, ನೈತಿಕತೆ ಹಾಗೂ ಸಾಮಾಜಿಕ ಅಂಶಗಳುʼ ಕುರಿತ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು.
 
ಸೈಬರ್ ಭದ್ರತೆ ಎನ್ನುವುದು ಈಗ ಜಾಗತಿಕ ಅಗತ್ಯ. ಅಪರಾಧಗಳ ಸ್ವರೂಪ ಬದಲಾದಂತೆಲ್ಲ ಈ ಭದ್ರತೆಯ ಅಗತ್ಯವೂ ಹೆಚ್ಚಾಗುತ್ತಿದೆ ಎಂದ ಸಚಿವರು, ಸಮಾಜದ ಪ್ರತಿ ಹಂತದಲ್ಲೂ ಈಗ ಡಿಜಿಟಲ್ ವ್ಯವಹಾರ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಸೈಬರ್ ಭದ್ರತೆಗೆ ಸರಕಾರ ಒತ್ತು ಕೊಡುತ್ತಿದೆ. ಈ ಹಿನ್ನೆಲೆ ಪಾಲಿಟೆಕ್ನಿಕ್ ಕಲಿಕೆಯಲ್ಲಿ ಹೊಸದಾಗಿ ʼಸೈಬರ್ ಭದ್ರತೆʼ ವಿಷಯವನ್ನೂ ಪರಿಚಯಿಸಲಾಗಿದೆ ಎಂದು ಸಚಿವರು ಹೇಳಿದರು.
 
ಡಿಜಿಟಲ್ ವೇದಿಕೆಗಳಲ್ಲಿ ನಡೆಯುವ ವಂಚನೆಗಳನ್ನು ತಡೆಯಲು ಸೈಬರ್ ಕಾನೂನು ಹಾಗೂ ಸೈಬರ್ ಭದ್ರತೆಯನ್ನು ಮತ್ತಷ್ಟು ಗಟ್ಟಿಗೊಳಿಸುವುದರ ಜತೆಗೆ, ಸಾಮಾಜಿಕ ಸಮಸ್ಯೆಗಳನ್ನು ನಿವಾರಿಸಿಕೊಳ್ಳುವಲ್ಲಿ ನೈತಿಕ ಬದ್ಧತೆಯೂ ಬಹಳ ಮುಖ್ಯ ಪಾತ್ರ ವಹಿಸುತ್ತದೆ ಎಂದು ಅವರು ಪ್ರತಿಪಾದಿಸಿದರು.
 
 
ಸಿಐಡಿ ಪೊಲೀಸ್ ವಿಭಾಗದ ವರಿಷ್ಠಾಧಿಕಾರಿ ಎಂ.ಡಿ.ಶರತ್ ಅವರು, ಸೈಬರ್ ಅಪರಾಧಗಳ ಸ್ವರೂಪ ಹಾಗೂ ಅವುಗಳನ್ನು ಹತ್ತಿಕ್ಕುವ, ಅವುಗಳ ಸುಳಿಗೆ ಸಿಕ್ಕಿಕೊಳ್ಳದಿರುವ ಮಾರ್ಗಗಗಳ ಬಗ್ಗೆ ಕೂಲಂಕಶವಾಗಿ ಮಾತನಾಡಿದರು.
 
ಕಾಲೇಜಿನ ಪ್ರಾಂಶುಪಾಲ ಡಾ.ಬಿ.ಚಂದ್ರಶೇಖರ ಪ್ರಾಸ್ತಾವಿಕವಾಗಿ ಮಾತನಾಡಿದರು. ವಾಣಿಜ್ಯ ವಿಭಾಗದ ಮುಖ್ಯಸ್ಥ ಪ್ರೊ.ಲಕ್ಷಣ್ ಕುಲಗೋಡ್ ವಿಶೇಷ ಭಾಷಣ ಮಾಡಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments