Webdunia - Bharat's app for daily news and videos

Install App

ನಗರದಲ್ಲಿ ಸೈಬರ್ ವಂಚಕರು..!

Webdunia
ಭಾನುವಾರ, 15 ಆಗಸ್ಟ್ 2021 (21:32 IST)
ಪೆಟ್ರೋಲ್ ಬಂಕ್‍ನ ಪರವಾನಗಿ ಕೊಡಿಸುವುದಾಗಿ ನಂಬಿಸಿ ನಗರದ ಅರ್ಜಿದಾರರ ಬಳಿ ಸೈಬರ್ ವಂಚಕರು ಬರೋಬ್ಬರಿ 55.43 ಲಕ್ಷ ರೂ. ಪಡೆದು ವಂಚಿಸಿದ್ದಾರೆ.
ಜಯನಗರದ ನಿವೇದಿತಾ ಪಿ. ಕಬಾಡಿ ಎಂಬುವರು ವಂಚನೆಗೊಳಗಾಗಿದ್ದು, ಈ ಸಂಬಂಧ ಸೈಬರ್ ಕ್ರೈಂ ಪೆÇಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪೆಟ್ರೋಲ್ ಬಂಕ್ ತೆರೆಯುವ ಉದ್ದೇಶದಿಂದ ದೂರುದಾರರು ಇಂಡಿಯನ್ ಆಯಿಲ್ ಕಾಪೆರ್Çರೇಷನ್ ಪ್ರೈ.ಲಿ. ವೆಬ್‍ಸೈಟ್ ಹುಡುಕಿ ಅದರಲ್ಲಿದ್ದ ಇ-ಮೇಲ್ ಐಡಿಗೆ ಅರ್ಜಿಯನ್ನು ಭರ್ತಿ ಮಾಡಿ ಅಪ್‍ಲೋಡ್ ಮಾಡಿದ್ದರು.
ಆ ನಂತರ ಕೆಲ ದಿನಗಳ ಬಳಿಕ ಅಪರಿಚಿತ ವ್ಯಕ್ತಿ, ನಿವೇದಿತಾ ಅವರಿಗೆ ಕರೆ ಮಾಡಿ ಪೆಟ್ರೋಲ್ ಬಂಕ್‍ಗೆ ಪರವಾನಗಿ ಕೊಡಿಸುತ್ತೇವೆ. ಅದಕ್ಕೆ ಶುಲ್ಕ ಪಾವತಿ ಮಾಡಬೇಕೆಂದು ಹೇಳಿದ್ದಾನೆ. ಅದಕ್ಕೆ ಒಪ್ಪಿದ ದೂರುದಾರರಿಂದ ಆರಂಭದಲ್ಲಿ ಕಡಿಮೆ ಹಣವನ್ನು ಆನ್‍ಲೈನ್‍ನಲ್ಲಿ ವರ್ಗಾವಣೆ ಮಾಡಿಸಿಕೊಂಡಿದ್ದಾರೆ.
ಅರ್ಜಿ ಸ್ವೀಕರಿಸಿ ಮುಂದಿನ ಹಂತಕ್ಕೆ ರವಾನೆ ಮಾಡಿರುವುದಾಗಿ ಹೇಳಿದ ವಂಚಕರು, ಹಂತ- ಹಂತವಾಗಿ ವಿವಿಧ ಬ್ಯಾಂಕ್ ಖಾತೆಗಳಿಗೆ 55.43 ಲಕ್ಷ ರೂ. ವರ್ಗಾವಣೆ ಮಾಡಿಸಿಕೊಂಡು ಮತ್ತೆ ಹಣಕ್ಕೆ ಬೇಡಿಕೆವೊಡ್ಡಿದ್ದಾರೆ. ಅನುಮಾನ ಬಂದು ಹಣ ವಾಪಸ್ ಕೇಳಿದಾಗ ಸಂಪರ್ಕ ಕಡಿತ ಮಾಡಿಕೊಂಡಿದ್ದಾನೆ. ದಿಕ್ಕು ತೋಚದ ದೂರುದಾರರು, ದಕ್ಷಿಣ ವಿಭಾಗದ ಸಿಇಎನ್ ಠಾಣೆಗೆ ದೂರು ನೀಡಿದ್ದಾರೆ. ನಿವೇದಿತಾ ನೀಡಿದ ದೂರಿನ ಮೇರೆಗೆ ತನಿಖೆ ಮುಂದುವರಿದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಷನ್ ಸುದರ್ಶನ್ ಘೋಷಿಸಿದ ಪ್ರಧಾನಿ ಮೋದಿ: ಹೀಗಂದರೆ ಏನು ಇಲ್ಲಿದೆ ವಿವರ

ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾಡಿದವರ ವಿರುದ್ಧ ಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್

ಸ್ವಾತಂತ್ರ್ಯೋತ್ಸವದಂದು ಡಿಸಿಎಂ ಡಿಕೆ ಶಿವಕುಮಾರ್ ಪಂಚ ಪ್ರತಿಜ್ಞೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಅತಿಯಾದ ಡಯಟ್ ಹೃದಯಾಘಾತಕ್ಕೆ ಕಾರಣವಾಗುತ್ತಾ, ಡಾ ಸಿಎನ್ ಮಂಜುನಾಥ್ ಟಿಪ್ಸ್

ಮುಂದಿನ ಸುದ್ದಿ
Show comments