Webdunia - Bharat's app for daily news and videos

Install App

ಸೈಬರ್ ಭದ್ರತೆ ಎನ್ನುವುದು ಈಗ ಜಾಗತಿಕ ಅಗತ್ಯ: ಡಾ.ಸಿ.ಎನ್. ಅಶ್ವತ್ಥನಾರಾಯಣ

Webdunia
ಬುಧವಾರ, 1 ಸೆಪ್ಟಂಬರ್ 2021 (21:01 IST)
ಬೆಂಗಳೂರು: ಡಿಜಿಟಲ್ ಕಲಿಕೆಗೆ ಒತ್ತು ನೀಡುತ್ತಿರುವ ರಾಜ್ಯ ಸರಕಾರವು ಸೈಬರ್ ಭದ್ರತೆ ಅತಿ ಹೆಚ್ಚು ಪ್ರಾಮುಖ್ಯತೆ ನೀಡುತ್ತಿದೆ ಎಂದು ಉನ್ನತ ಶಿಕ್ಷಣ, ಐಟಿ-ಬಿಟಿ ಹಾಗೂ ವಿಜ್ಞಾನ-ತಂತ್ರಜ್ಞಾನ ಖಾತೆ ಸಚಿವರಾದ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.
 
ನಗರದ ಸರಕಾರಿ ರಾಮನಾರಾಯಣ್ ಚೆಲ್ಲಾರಾಂ ವಾಣಿಜ್ಯ ಮತ್ತು ಮ್ಯಾನೇಜ್ಮೆಂಟ್ ಕಾಲೇಜ್ (ಆರ್.ಸಿ.ಕಾಲೇಜ್) ಹಮ್ಮಿಕೊಂಡಿದ್ದ ಸಿಬ್ಬಂದಿ ಅಭಿವೃದ್ಧಿ ಯೋಜನೆ ಕಾರ್ಯಕ್ರಮದಲ್ಲಿ ʼಡಿಜಿಟಲ್ ಯುಗದಲ್ಲಿ ಕಾನೂನು, ನೈತಿಕತೆ ಹಾಗೂ ಸಾಮಾಜಿಕ ಅಂಶಗಳುʼ ಕುರಿತ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು.
 
ಸೈಬರ್ ಭದ್ರತೆ ಎನ್ನುವುದು ಈಗ ಜಾಗತಿಕ ಅಗತ್ಯ. ಅಪರಾಧಗಳ ಸ್ವರೂಪ ಬದಲಾದಂತೆಲ್ಲ ಈ ಭದ್ರತೆಯ ಅಗತ್ಯವೂ ಹೆಚ್ಚಾಗುತ್ತಿದೆ ಎಂದ ಸಚಿವರು, ಸಮಾಜದ ಪ್ರತಿ ಹಂತದಲ್ಲೂ ಈಗ ಡಿಜಿಟಲ್ ವ್ಯವಹಾರ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಸೈಬರ್ ಭದ್ರತೆಗೆ ಸರಕಾರ ಒತ್ತು ಕೊಡುತ್ತಿದೆ. ಈ ಹಿನ್ನೆಲೆ ಪಾಲಿಟೆಕ್ನಿಕ್ ಕಲಿಕೆಯಲ್ಲಿ ಹೊಸದಾಗಿ ʼಸೈಬರ್ ಭದ್ರತೆʼ ವಿಷಯವನ್ನೂ ಪರಿಚಯಿಸಲಾಗಿದೆ ಎಂದು ಸಚಿವರು ಹೇಳಿದರು.
 
ಡಿಜಿಟಲ್ ವೇದಿಕೆಗಳಲ್ಲಿ ನಡೆಯುವ ವಂಚನೆಗಳನ್ನು ತಡೆಯಲು ಸೈಬರ್ ಕಾನೂನು ಹಾಗೂ ಸೈಬರ್ ಭದ್ರತೆಯನ್ನು ಮತ್ತಷ್ಟು ಗಟ್ಟಿಗೊಳಿಸುವುದರ ಜತೆಗೆ, ಸಾಮಾಜಿಕ ಸಮಸ್ಯೆಗಳನ್ನು ನಿವಾರಿಸಿಕೊಳ್ಳುವಲ್ಲಿ ನೈತಿಕ ಬದ್ಧತೆಯೂ ಬಹಳ ಮುಖ್ಯ ಪಾತ್ರ ವಹಿಸುತ್ತದೆ ಎಂದು ಅವರು ಪ್ರತಿಪಾದಿಸಿದರು.
 
 
ಸಿಐಡಿ ಪೊಲೀಸ್ ವಿಭಾಗದ ವರಿಷ್ಠಾಧಿಕಾರಿ ಎಂ.ಡಿ.ಶರತ್ ಅವರು, ಸೈಬರ್ ಅಪರಾಧಗಳ ಸ್ವರೂಪ ಹಾಗೂ ಅವುಗಳನ್ನು ಹತ್ತಿಕ್ಕುವ, ಅವುಗಳ ಸುಳಿಗೆ ಸಿಕ್ಕಿಕೊಳ್ಳದಿರುವ ಮಾರ್ಗಗಗಳ ಬಗ್ಗೆ ಕೂಲಂಕಶವಾಗಿ ಮಾತನಾಡಿದರು.
 
ಕಾಲೇಜಿನ ಪ್ರಾಂಶುಪಾಲ ಡಾ.ಬಿ.ಚಂದ್ರಶೇಖರ ಪ್ರಾಸ್ತಾವಿಕವಾಗಿ ಮಾತನಾಡಿದರು. ವಾಣಿಜ್ಯ ವಿಭಾಗದ ಮುಖ್ಯಸ್ಥ ಪ್ರೊ.ಲಕ್ಷಣ್ ಕುಲಗೋಡ್ ವಿಶೇಷ ಭಾಷಣ ಮಾಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ
Show comments