Webdunia - Bharat's app for daily news and videos

Install App

ವೃದ್ಧನಿಗೆ ಸೈಬರ್​ ಕಳ್ಳರ ಮಹಾ ದೋಖಾ

Webdunia
ಶನಿವಾರ, 8 ಜುಲೈ 2023 (18:07 IST)
ಗೃಹಜ್ಯೋತಿ ಯೋಜನೆಗೆ ಆರಂಭದ ವೇಳೆಯೇ ಸೈಬರ್ ಕಳ್ಳರ ಕಾಟ ಹೆಚ್ಚಾಗಿದೆ. ಬೆಸ್ಕಾಂ ಬಿಲ್ ಕಟ್ಟಿಲ್ಲ ಎಂದು ಸೈಬರ್​ ಕಳ್ಳರು ಜನರಿಗೆ ವಂಚನೆ ಮಾಡಿದ್ದಾರೆ. ಕಾಡುಗೋಡಿ ನಿವಾಸಿ ನಾರಾಯಣ್ ಪ್ರಸಾದ್ 53 ಸಾವಿರ ಹಣ ಕಳೆದುಕೊಂಡಿದ್ದಾರೆ. ಮೊದಲಿಗೆ ನಾರಾಯಣ್ ಮೊಬೈಲ್ ನಂಬರ್​​ಗೆ ವಂಚಕರು ಲಿಂಕ್ ಕಳಿಸಿದ್ದಾರೆ. ಬಳಿಕ ಕರೆ ಮಾಡಿ ಬೆಸ್ಕಾಂ ಬಿಲ್ ಬಾಕಿ ಇದೆ ಎಂದು ಹೇಳಿದ್ದಾರೆ. ನೀವು ಇಂದೇ ಬೆಸ್ಕಾಂ ಬಿಲ್ ಕಟ್ಟಿಲ್ಲ ಎಂದರೆ ಕನೆಕ್ಷನ್ ಕಟ್ ಆಗುತ್ತೆ ಎಂದು ಸೂಚನೆ ನೀಡಿದ್ದಾರೆ.. ಇದರಿಂದ ಗಾಬರಿಯಾಗಿದ್ದ ವೃದ್ಧ ನಾರಾಯಣ್ ಪ್ರಸಾದ್ ಲಿಂಕ್​ ಮೇಲೆ ಕ್ಲಿಕ್​ ಮಾಡಿದ್ದಾರೆ. ಲಿಂಕ್​ ಮೇಲೆ ಕ್ಲಿಕ್​ ಮಾಡುತ್ತಿದ್ದಂತೆ ನಾರಾಯಣ್​ ಪ್ರಸಾದ್​ ಅವರ ಅಕೌಂಟ್​ನಿಂದ 53 ಸಾವಿರ ಹಣ ಕಟ್ ಆಗಿದೆ.. ಕಾಡುಗೋಡಿ ಪೊಲೀಸ್ ಠಾಣೆಗೆ ವೃದ್ಧ ನಾರಾಯಣ್​ ದೂರು ಸಲ್ಲಿಸಿದ್ದಾರೆ. ಪೊಲೀಸರು ವಂಚನೆ ಕೇಸ್ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ಸ್ಪೋಟ: 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಧರ್ಮಸ್ಥಳದ ವಿಷಯದಲ್ಲಿ ಹಿನ್ನೆಲೆಯ ವ್ಯಕ್ತಿಗಳ ತನಿಖೆ: ಡಾ.ಸಿ.ಎನ್.ಅಶ್ವತ್ಥನಾರಾಯಣ್ ಒತ್ತಾಯ

ಸ್ವಾತಂತ್ರ್ಯೋತ್ಸವ ದಿನವೇ ಬೆಂಗಳೂರಿನಲ್ಲಿ ಅನುಮಾನಸ್ಪದ ಸ್ಪೋಟ: ಓರ್ವ ಸಾವು

ಮೋದಿಜೀ ಅವರಿಂದ ಯುವಜನತೆಗೆ ಸ್ವಾತಂತ್ರ್ಯದ ಮಹತ್ವ ಮನವರಿಕೆ ಮಾಡುವ ಕೆಲಸ: ಛಲವಾದಿ ನಾರಾಯಣಸ್ವಾಮಿ

ಸ್ವಾತಂತ್ರ್ಯ ದಿನ ಜೈಲಲ್ಲಿ ಪ್ರಜ್ವಲ್ ರೇವಣ್ಣ, ದರ್ಶನ್ ಏನ್ಮಾಡಿದ್ರು ಗೊತ್ತಾ

ಮುಂದಿನ ಸುದ್ದಿ
Show comments