Select Your Language

Notifications

webdunia
webdunia
webdunia
webdunia

ಸಿಲಿಂಡರ್ ಸ್ಫೋಟಗೊಂಡು ಓರ್ವ ವ್ಯಕ್ತಿ ಸಾವು

ಸಿಲಿಂಡರ್ ಸ್ಫೋಟಗೊಂಡು ಓರ್ವ ವ್ಯಕ್ತಿ ಸಾವು
ಆನೇಕಲ್ : , ಭಾನುವಾರ, 14 ಫೆಬ್ರವರಿ 2016 (13:00 IST)
ಬೆಂಗಳೂರು ಹೊರವಲಯದ ಆನೆಕಲ್ ತಾಲೂಕಿನ  ಹೆಬ್ಬಗೋಡಿಯ ರಾಮಯ್ಯ ಲೇಔಟ್‌ನಲ್ಲಿ ಸಿಲಿಂಡರ್ ಸ್ಫೋಟಗೊಂಡು ಓರ್ವ ವ್ಯಕ್ತಿ ಮೃತರಾಗಿದ್ದಾರೆ. ಅಂಬರೀಷ್ ಎಂಬ ವ್ಯಕ್ತಿ ಮೃತಪಟ್ಟಿದ್ದು, ಇನ್ನೂ ಏಳು ಜನರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸೇರಿಸಲಾಗಿದೆ.

 ರಾತ್ರಿ ಮಲಗುವಾಗ ಸಿಲಿಂಡರ್ ಬಂದ್ ಮಾಡುವುದನ್ನು ಅಂಬರೀಷ್ ಮರೆತಿದ್ದರು. ರಾತ್ರಿ  ಸಿಲಿಂಡರ್‌ನಿಂದ ಅನಿಲ ಸೋರಿಕೆಯಾಗಿ ಮನೆಯ ತುಂಬ ತುಂಬಿತ್ತು. ಬೆಳಿಗ್ಗೆ 5.50ರ ಸುಮಾರಿಗೆ ಅಡುಗೆಗೆಂದು ಗ್ಯಾಸ್ ಹಚ್ಚಿದಕೂಡಲೇ ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ಅಂಬರೀಷ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸಿಲಿಂಡರ್ ಸ್ಫೋಟದ ತೀವ್ರತೆಯಿಂದ ಅಂಬರೀಷ್ ಮನೆಯ ಸುತ್ತಮುತ್ತಲಿನ ಮನೆಗಳ ಗೋಡೆಗಳು ಬಿದ್ದು, ಐದು ಜನರು ತೀವ್ರವಾಗಿ ಗಾಯಗೊಂಡಿದ್ದಾರೆ.

Share this Story:

Follow Webdunia kannada