Select Your Language

Notifications

webdunia
webdunia
webdunia
webdunia

ಸಿಲಿಂಡರ್ ದರ ಏರಿಕೆ: ಪ್ರಧಾನಿ ಮೋದಿಯಿಂದ ದೇಶದ ಜನತೆಗೆ ಮೋಸ ಎಂದ ಲಕ್ಷ್ಮಿ ಹೆಬ್ಬಾಳ್ಕರ್

ಸಿಲಿಂಡರ್ ದರ ಏರಿಕೆ: ಪ್ರಧಾನಿ ಮೋದಿಯಿಂದ ದೇಶದ ಜನತೆಗೆ ಮೋಸ ಎಂದ ಲಕ್ಷ್ಮಿ ಹೆಬ್ಬಾಳ್ಕರ್
ಬೆಂಗಳೂರು , ಶನಿವಾರ, 4 ಮಾರ್ಚ್ 2017 (17:15 IST)
ಪ್ರಧಾನಮಂತ್ರಿ ನರೇಂದ್ರ ಮೋದಿ ಅಡುಗೆ ಸಿಲಿಂಡರ್ ದರ ಏರಿಕೆಗೊಳಿಸಿ ದೇಶದ ಜನತೆಗೆ ಮೋಸ ಮಾಡಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮಿ ಹೆಬ್ಬಾಳ್ಕರ್ ಆರೋಪಿಸಿದ್ದಾರೆ.
 
ಅಡುಗೆ ಸಿಲಿಂಡರ್ ದರ ಏರಿಕೆ ಖಂಡಿಸಿ ಟೌನ್‌ಹಾಲ್ ಬಳಿ ಧರಣಿ ನಡೆಸಿದ ಕಾಂಗ್ರೆಸ್, ಖಾಲಿ ಸಿಲಿಂಡರ್ ಮುಂದಿಟ್ಟು ಪ್ರತಿಭಟನೆ ನಡೆಸಿತು.

ಯಾವ ಪುರುಷಾರ್ಥಕ್ಕೆ ಸಿಲಿಂಡರ್ ದರ ಏರಿಕೆ ಮಾಡಿದ್ದಾರೆ? ಮಹಿಳಾ ದಿನಾಚರಣೆ ಅಂಗವಾಗಿ ಉಡುಗೊರೆ ನೀಡಿದ್ದಾರೆಯೇ ಎಂದು ವ್ಯಂಗ್ಯವಾಡಿದ್ದಾರೆ.
 
ಒಲೆ ಹಚ್ಚಿ ಚಪಾತಿ ಸುಡುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿ ಕೇಂದ್ರ ಸರಕಾರ, ಪ್ರಧಾನಿ ಮೋದಿ ವಿರುದ್ಧ ಧಿಕ್ಕಾರ ಕೂಗಿದರು. 
 
ಅಡುಗೆ ಸಿಲಿಂಡರ್ ದರ ಏರಿಕೆಯನ್ನು ಕೂಡಲೇ ಕೇಂದ್ರ ಸರಕಾರ ವಾಪಸ್ ಪಡೆಯಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

69ನೇ ಮಗುವಿಗೆ ಜನ್ಮ ನೀಡಿ ಪ್ರಸವದ ವೇಳೆಯೇ ಮೃತಪಟ್ಟ ಮಹಿಳೆ