ಡಿ.ಕೆ. ಸುರೇಶ್‌ ಸೋಲು ಬಹಳ ನೋವು ತಂದಿದೆ ಎಂದ ಸಚಿವ ಜಮೀರ್​ ಅಹ್ಮದ್

sampriya
ಬುಧವಾರ, 5 ಜೂನ್ 2024 (15:01 IST)
Photo By X
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಡಿ.ಕೆ. ಸುರೇಶ್‌ ಅವರನ್ನು ಸೋಲಿಸಿದ್ದು ಯಾರದ್ದೋ ಜಿದ್ದಲ್ಲ ಅಥವಾ ಜೆಡಿಎಸ್-ಬಿಜೆಪಿ ಮೈತ್ರಿಯೂ ಅಲ್ಲ. ಜನ ಅವರನ್ನು ಸೋಲಿಸಿದ್ದಾರೆ, ಕೆಲಸಗಾರನನ್ನು ಸೋಲಿಸಿರುವುದು ವೇದನೆಯನ್ನುಂಟು ಮಾಡಿದೆ ಎಂದು ಸಚಿವ ಜಮೀರ್‌ ಅಹಮ್ಮದ್‌ ಹೇಳಿದರು.

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​ ಡಿ.ಕೆ. ಸುರೇಶ್​ ಅವರು ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್. ಮಂಜುನಾಥ್​ ಎದುರು 2.60 ಲಕ್ಷಕ್ಕೂ ಹೆಚ್ಚಿನ ಅಂತರದಲ್ಲಿ ಸೋಲು ಕಂಡಿದ್ದು, ಇದು ಕಾಂಗ್ರೆಸ್​ ನಾಯಕರ ನಿದ್ದೆಗೆಡಿಸಿದೆ.

ಸೋಲಿನ ಹತಾಶೆಯಲ್ಲಿರುವ ಡಿ.ಕೆ. ಸುರೇಶ್​ರನ್ನು ಸಂತೈಸಲು ಕಾಂಗ್ರೆಸ್​ ನಾಯಕರ ದಂಡೇ ಅವರ ಮನೆಗೆ ದೌಡಾಯಿಸುತ್ತಿದೆ. ಸೋಲಿನ ಪರಮಾರ್ಶೆ ಮಾಡುತ್ತಿದ್ದಾರೆ. ಡಿ.ಕೆ. ಸುರೇಶ್​ರನ್ನು ಭೇಟಿ ಮಾಡಿ ಮಾತನಾಡಿದ ಸಚಿವ ಜಮೀರ್​ ಅಹ್ಮದ್​ ಸೋಲಿನ ಹಿಂದಿನ ಕಾರಣವನ್ನು ತಿಳಿಸಿದ್ದಾರೆ.

ಸುರೇಶ್​ ಅವರ ಸೋಲು ಅಘಾತಕಾರಿಯಾಗಿದ್ದು, ಬಹಳ ನೋವುಂಟು ಮಾಡಿದೆ. ದೇಶದ ಅಲ್ಲಾ ಸಂಸದರ ಪೈಕಿ ಅತಿ ಹೆಚ್ಚು ಕೆಲಸ ಮಾಡಿದವರು ಡಿ.ಕೆ. ಸುರೇಶ್‌. ನಾನು ನೋಡಿದಂರತೆ ಪ್ರತಿದಿನ ತಮ್ಮ ಕ್ಷೇತ್ರದ ಕೆಲಸ ಅಥವಾ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದರು. ಅವರ ಸೋಲು ನಿರೀಕ್ಷೆ ಮಾಡಿರಲಿಲ್ಲ ಎಂದರು.

ರಾಜ್ಯದಲ್ಲಿ ಕಾಂಗ್ರೆಸ್‌ ಚುನಾವಣೆಯಲ್ಲಿ ಉತ್ತಮ ಪ್ರದರ್ಶನ ತೋರಿದೆ. ಕಳೆದ ಬಾರಿ ಕೇವಲ ಒಂದು ಸೀಟು ಸಿಕ್ಕಿತ್ತು, ಈ ಬಾರಿ ಒಂಬತ್ತು ಸ್ಥಾನಗಳು ಲಭಿಸಿವೆ. ಉಳಿದ ಕ್ಷೇತ್ರಗಳ ಸೋಲಿನ ಬಗ್ಗೆ ಪರಮಾರ್ಶಿಸಲಾಗುವುದು ಎಂದು ಜಮೀರ್‌ ಹೇಳಿದರು<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments