Webdunia - Bharat's app for daily news and videos

Install App

ಡಿಕೆಶಿ ಪೋಟೋ ಹಿಡಿದುಕೊಂಡಿದ್ರೆ ದೇಶಕ್ಕೆ ಒಳ್ಳೆಯದಾಗುತ್ತಿತ್ತು: ಡಿ.ಕೆ.ರವಿ ತಾಯಿ ಲೇವಡಿ

Webdunia
ಗುರುವಾರ, 18 ಆಗಸ್ಟ್ 2016 (15:49 IST)
ಸ್ವಾತಂತ್ರ್ಯ ದಿನದಂದು ಶಾಲಾ ಮಕ್ಕಳ ನೃತ್ಯ ಪ್ರದರ್ಶನದಲ್ಲಿ ದಕ್ಷ ಅಧಿಕಾರಿಗಳ ಪೋಟೋ ಪ್ರದರ್ಶನಕ್ಕೆ ಡಿಕೆಶಿ ಗರಂ ಆದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿರುವ ದಿವಂಗತ ದಕ್ಷ ಐಎಎಸ್ ಅಧಿಕಾರಿ ಡಿ.ಕೆ.ರವಿ ತಾಯಿ ಗೌರಮ್ಮ, ನನ್ನ ಮಗನ ಪೋಟೋ ಹಿಡಿದುಕೊಂಡರೇ ಏನು ಪ್ರಯೋಜನ. ಇಂಧನ ಸಚಿವ ಡಿ.ಕೆ.ಶಿವಕುಮಾರ್ ಪೋಟೋ ಹಿಡಿದುಕೊಳ್ಳಬೇಕಿತ್ತು. ಆಗ, ದೇಶಕ್ಕೆ ಒಳ್ಳೆಯದಾಗುತ್ತಿತ್ತು ಎಂದು ವ್ಯಂಗ್ಯವಾಡಿದ್ದಾರೆ.
 
ಕೋಲಾರ ಜಿಲ್ಲೆಯ ಕೆಂಬೋಡಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರಿಗೆ ಹಣ ನೀಡಿ ವೋಟು ಹಾಕಿಸಿಕೊಂಡು, ಕೋಟಿ ಕೋಟಿ ಹಣವನ್ನು ಲೂಟಿಗೈಯುವವರ ಪೋಟೋ ಹಾಕಿಕೊಳ್ಳಲಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ದಕ್ಷ ಅಧಿಕಾರಿ ಡಿ.ಕೆ.ರವಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರವಿಯ ಹೆಂಡತಿ ಹಾಗೂ ಮಾವನನ್ನು ವಿಚಾರಣೆಗೆ ಒಳಪಡಿಸಿದ್ದರೆ ಸಿಬಿಐ ತನಿಖೆಯ ಅವಶ್ಯಕತೆಯೇ ಇರುತ್ತಿರಲಿಲ್ಲ ಎಂದು ಗೌರಮ್ಮ ಆರೋಪಿಸಿದ್ದಾರೆ.
 
ಸ್ವಾತಂತ್ರ್ಯ ದಿನದಂದು ಶಾಲಾ ಮಕ್ಕಳ ನೃತ್ಯವನ್ನು ಅರ್ಧಕ್ಕೆ ನಿಲ್ಲಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲಾ ಮಕ್ಕಳು ನೃತ್ಯದಲ್ಲಿ ಸ್ವಾತಂತ್ರ್ಯ ಪೂರ್ವ ಹೋರಾಟಗಾರರ ಭಾವಚಿತ್ರವನ್ನು ಪ್ರದರ್ಶಿಸುವ ಬದಲು ಡಿ.ಕೆ.ರವಿ ಹಾಗೂ ಕಲ್ಲಪ್ಪ ಹಂಡಿಭಾಗ್ ಅವರ ಭಾವಚಿತ್ರವನ್ನು ಪ್ರದರ್ಶನ ಮಾಡಿದ್ದಾರೆ. ಆತ್ಮಹತ್ಯೆಗೆ ಶರಣಾಗಿರುವವರ ಭಾವಚಿತ್ರ ಪ್ರದರ್ಶನ ಮಾಡವುದು ಸರಿಯಲ್ಲ. ಆತ್ಮಹತ್ಯೆಗೆ ಶರಣಾಗುವವರು ರಣಹೇಡಿಗಳು ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಹೇಳಿಕೆ ನೀಡಿದ್ದರು.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

Video, ನಿನ್ನ ಗುರುತೇ ಸಿಗದ ಹಾಗೇ ಮಾಡುತ್ತೇನೆ: ಗ್ಯಾಸ್ ಸ್ಟೇಷನ್ ಸಿಬ್ಬಂದಿಗೆ ಮಹಿಳೆ ಗನ್ ಪಾಯಿಂಟ್‌

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಬಿಜೆಪಿ ಗೂಂಡಾಗಳೇ ಕಾರಣ: ಕಾಂಗ್ರೆಸ್ ನಾಯಕ ಎಂ ಲಕ್ಷ್ಮಣ್

ಮುಂದಿನ ಸುದ್ದಿ
Show comments