Select Your Language

Notifications

webdunia
webdunia
webdunia
webdunia

ಸಿಎಂ ಸಿದ್ದರಾಮಯ್ಯರಿಗೆ ಟಾಂಗ್ ನೀಡಿದ ಸಚಿವ ಡಿ.ಕೆ.ಶಿವಕುಮಾರ್

ಸಿಎಂ ಸಿದ್ದರಾಮಯ್ಯರಿಗೆ ಟಾಂಗ್ ನೀಡಿದ ಸಚಿವ ಡಿ.ಕೆ.ಶಿವಕುಮಾರ್
ಬೆಳಗಾವಿ , ಸೋಮವಾರ, 21 ನವೆಂಬರ್ 2016 (17:42 IST)
ಸಚಿವ ರಮೇಶ್ ಜಾರಕಿಹೊಳಿ ಅವರ ಪುತ್ರನದು ಅದ್ಧೂರಿ ವಿವಾಹವೇನಲ್ಲ. ಅವರ ಮೂವರು ಸಹೋದರರು ಶಾಸಕರಾಗಿದ್ದು, ಅವರು ಉದ್ಯಮಿ ಸಹ ಆಗಿದ್ದಾರೆ. ಸಚಿವರು ತಮ್ಮ ಕನಸಿನಂತೆ ತಮ್ಮ ಪುತ್ರನ ವಿವಾಹ ಮಾಡುವುದರಲ್ಲಿ ತಪ್ಪೇನು ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರು ಸಿಎಂ ಸಿದ್ದರಾಮಯ್ಯರಿಗೆ ಟಾಂಗ್ ನೀಡಿದ್ದಾರೆ. 
 
ಬೆಳಗಾವಿ ಜಿಲ್ಲೆಯ ಗೋಕಾಕ್‌ನಲ್ಲಿ ನಡೆದ ಸಚಿವ ರಮೇಶ್ ಜಾರಕಿಹೊಳಿ ಪುತ್ರನ ವಿವಾಹದಲ್ಲಿ ಪಾಲ್ಗೊಂಡು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅದ್ಧೂರಿ ವಿವಾಹದಿಂದ ದೂರವಿರಿ ಎನ್ನುವುದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ವೈಯಕ್ತಿಕ ವಿಚಾರವಾಗಿದ್ದು, ಅವರ ಹೇಳಿಕೆಗೂ ನನ್ನ ಮಾತಿಗೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದರು. 
 
ಕಪ್ಪು ಹಣ ತಡೆಗಟ್ಟಲು ಕೇಂದ್ರ ಸರಕಾರ 500, 1000 ಮುಖಬೆಲೆಯ ನೋಟ್ ಬ್ಯಾನ್ ಮಾಡಿರುವುದನ್ನು ನಾನು ಕಟುವಾಗಿ ವಿರೋಧಿಸುತ್ತೇನೆ. ಇದು ಜನಸಾಮಾನ್ಯರು ಹಾಗೂ ಬಡವರ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ. ಅಧಿವೇಶನದಲ್ಲಿ ಕೇಂದ್ರದ ನಡೆ ಕುರಿತು ಚರ್ಚೆ ನಡೆಸಲಾಗುತ್ತದೆ ಎಂದರು. 
 
ಬಿಜೆಪಿ ಶಾಸಕರು ಹಾಗೂ ಸಂಸದರು ಸಹ ಪ್ರಧಾನಿ ನರೇಂದ್ರ ಮೋದಿ ಅವರ ನಿರ್ಧಾರವನ್ನು ವಿರೋಧಿಸಿ ನೋಟ್ ಬ್ಯಾನ್ ಹಿಂಪಡೆಯುವಂತೆ ಮಾಡಬೇಕೆಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಒತ್ತಾಯಿಸಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಅಧಿವೇಶನಕ್ಕೆ ಗೈರು ಹಾಜರಾದ ಸಚಿವರಿಗೆ ಸ್ಪೀಕರ್ ಚಾಟಿ.......