Select Your Language

Notifications

webdunia
webdunia
webdunia
webdunia

ಅಶೋಕ್ ಅಣ್ಣನಿಗೆ ಕೋಳಿ ಮತ್ತು ಮೇಕೆ ಮಾಂಸದ ರುಚಿ ಚೆನ್ನಾಗಿ ಗೊತ್ತಿದೆ

ಅಶೋಕ್ ಅಣ್ಣನಿಗೆ  ಕೋಳಿ ಮತ್ತು ಮೇಕೆ ಮಾಂಸದ ರುಚಿ ಚೆನ್ನಾಗಿ ಗೊತ್ತಿದೆ
ಬೆಂಗಳೂರು , ಶನಿವಾರ, 1 ಜನವರಿ 2022 (17:53 IST)
ಕಾಂಗ್ರೆಸ್ ಅವರು ಪಾದಯಾತ್ರೆ ನೆಪದಲ್ಲಿ ಮೇಕೆ ಮಾಂಸ ತಿನ್ನಲು ಹೊರಟಿದ್ದಾರೆ ಎಂಬ ಸಚಿವ ಅಶೋಕ್ ಹೇಳಿಕೆಗೆ ಡಿಕೆ ಶಿವಕುಮಾರ್ ಕಿಡಿಕಾರಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆಶಿ, ಅಶೋಕಣ್ಣನಿಗೆ ಮೇಕೆ, ಕುರಿ, ನಾಟಿಕೋಳಿ ರುಚಿ ಚೆನ್ನಾಗಿ ಗೊತ್ತಿದೆ.
ಮೇಕೆ ಮಾಂಸ ತಿನ್ನಿಸೋಕೆ ಪ್ರಯತ್ನ ಮಾಡುತ್ತಿಲ್ಲ ಎಂದು ಹರಿಹಾಯ್ದರು. ಇನ್ನೂ ಸಚಿವ ಆರ್ ಅಶೋಕಣ್ಣನಿಗೆ ಬೆಂಗಳೂರಿನ ಬಗ್ಗೆ ಕಾಳಜಿ ಇಲ್ಲ. ಇಡೀ ದೇಶದಲ್ಲಿ ಶೇ.37ರಷ್ಟು ತೆರಿಗೆಯನ್ನು ಪಾವತಿಸುತ್ತಾರೆ. ಬೆಂಗಳೂರಿಗರು ಶೇ.37ರಷ್ಟು ತೆರಿಗೆಯನ್ನು ಪಾವತಿಸುತ್ತಾರೆ.
 
ಅಂತಹ ಬೆಂಗಳೂರಿಗರಿಗೆ ಶುದ್ಧ ಕುಡಿಯುವ ನೀರು ಕೊಡಬೇಕು. ಶುದ್ಧ ಕಾವೇರಿ ನೀರು ಕೊಡಬೇಕೆಂದು ನಾವು ಪ್ರಯತ್ನಿಸುತ್ತಿದ್ದೇವೆ. ಈ ವಿಚಾರ ಯಾವುದೂ ಸಚಿವ ಅಶೋಕಣ್ಣನಿಗೆ ಗೊತ್ತಿಲ್ಲ ಅಂತ ಡಿಕೆಶಿ ಟಾಂಗ್ ಕೊಟ್ಟಿದ್ದಾರೆ. ಇನ್ನೂ ಪಾದಯಾತ್ರೆಗೆ ಗೃಹ ಸಚಿವರ ಅನುಮತಿ ಸಂಬಂಧ ಪ್ರತಿಕ್ರಿಯೆ ನೀಡಿದ ಅವರು, ನಮಗೆ ಗೃಹ ಸಚಿವರ ಅನುಮತಿ ಬೇಡ, ರಕ್ಷಣೆಯೂ ಬೇಡ. ದೇವೇಗೌಡರು ಪಾದಯಾತ್ರೆ ಮಾಡಿದಾಗ ಅನುಮತಿ ನೀಡಿದ್ರಾ? ಸ್ಟ್ಯಾಂಪ್ ಹಾಕಿ ಅನುಮತಿ ನೀಡಿದ್ದರಾ? ಹೋರಾಟಗಾರರು ಕೋಳಿಯನ್ನು ಕೇಳಿ ಮಸಾಲೆ ಅರಿತಾರಾ? ಎಂದು ಡಿಕೆ ಶಿವಕುಮಾರ್ ಪ್ರಶ್ನೆ ಮಾಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯದಲ್ಲಿ ಎಸಿ ಬಸ್ ಸಂಚಾರ ಪ್ರಾರಂಭ