ಅಶೋಕ್ ಅಣ್ಣನಿಗೆ ಕೋಳಿ ಮತ್ತು ಮೇಕೆ ಮಾಂಸದ ರುಚಿ ಚೆನ್ನಾಗಿ ಗೊತ್ತಿದೆ

Webdunia
ಶನಿವಾರ, 1 ಜನವರಿ 2022 (17:53 IST)
ಕಾಂಗ್ರೆಸ್ ಅವರು ಪಾದಯಾತ್ರೆ ನೆಪದಲ್ಲಿ ಮೇಕೆ ಮಾಂಸ ತಿನ್ನಲು ಹೊರಟಿದ್ದಾರೆ ಎಂಬ ಸಚಿವ ಅಶೋಕ್ ಹೇಳಿಕೆಗೆ ಡಿಕೆ ಶಿವಕುಮಾರ್ ಕಿಡಿಕಾರಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆಶಿ, ಅಶೋಕಣ್ಣನಿಗೆ ಮೇಕೆ, ಕುರಿ, ನಾಟಿಕೋಳಿ ರುಚಿ ಚೆನ್ನಾಗಿ ಗೊತ್ತಿದೆ.
ಮೇಕೆ ಮಾಂಸ ತಿನ್ನಿಸೋಕೆ ಪ್ರಯತ್ನ ಮಾಡುತ್ತಿಲ್ಲ ಎಂದು ಹರಿಹಾಯ್ದರು. ಇನ್ನೂ ಸಚಿವ ಆರ್ ಅಶೋಕಣ್ಣನಿಗೆ ಬೆಂಗಳೂರಿನ ಬಗ್ಗೆ ಕಾಳಜಿ ಇಲ್ಲ. ಇಡೀ ದೇಶದಲ್ಲಿ ಶೇ.37ರಷ್ಟು ತೆರಿಗೆಯನ್ನು ಪಾವತಿಸುತ್ತಾರೆ. ಬೆಂಗಳೂರಿಗರು ಶೇ.37ರಷ್ಟು ತೆರಿಗೆಯನ್ನು ಪಾವತಿಸುತ್ತಾರೆ.
 
ಅಂತಹ ಬೆಂಗಳೂರಿಗರಿಗೆ ಶುದ್ಧ ಕುಡಿಯುವ ನೀರು ಕೊಡಬೇಕು. ಶುದ್ಧ ಕಾವೇರಿ ನೀರು ಕೊಡಬೇಕೆಂದು ನಾವು ಪ್ರಯತ್ನಿಸುತ್ತಿದ್ದೇವೆ. ಈ ವಿಚಾರ ಯಾವುದೂ ಸಚಿವ ಅಶೋಕಣ್ಣನಿಗೆ ಗೊತ್ತಿಲ್ಲ ಅಂತ ಡಿಕೆಶಿ ಟಾಂಗ್ ಕೊಟ್ಟಿದ್ದಾರೆ. ಇನ್ನೂ ಪಾದಯಾತ್ರೆಗೆ ಗೃಹ ಸಚಿವರ ಅನುಮತಿ ಸಂಬಂಧ ಪ್ರತಿಕ್ರಿಯೆ ನೀಡಿದ ಅವರು, ನಮಗೆ ಗೃಹ ಸಚಿವರ ಅನುಮತಿ ಬೇಡ, ರಕ್ಷಣೆಯೂ ಬೇಡ. ದೇವೇಗೌಡರು ಪಾದಯಾತ್ರೆ ಮಾಡಿದಾಗ ಅನುಮತಿ ನೀಡಿದ್ರಾ? ಸ್ಟ್ಯಾಂಪ್ ಹಾಕಿ ಅನುಮತಿ ನೀಡಿದ್ದರಾ? ಹೋರಾಟಗಾರರು ಕೋಳಿಯನ್ನು ಕೇಳಿ ಮಸಾಲೆ ಅರಿತಾರಾ? ಎಂದು ಡಿಕೆ ಶಿವಕುಮಾರ್ ಪ್ರಶ್ನೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಳ್ತಂಗಡಿ ಸುಮಂತ್ ನಿಗೂಢ ಸಾವು ಕೇಸ್: ಹಿಂದಿನ ದಿನ ಆತ ಏನು ಮಾಡಿದ್ದ ಗೊತ್ತಾ

ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಹಾಕಿದ್ದ ರಾಜಿವ್ ಗೌಡಗೆ ನೋಟಿಸ್: ಬರೀ ಇಷ್ಟೇನಾ ಎಂದ ನೆಟ್ಟಿಗರು

ಸಿಎಂ ಬದಲಾವಣೆ ವಿಚಾರಕ್ಕೆ ಟ್ವಿಸ್ಟ್: ಡಿಕೆ ಶಿವಕುಮಾರ್ ಮಹತ್ವದ ಹೆಜ್ಜೆ

ಹಿಂದೂಗಳನ್ನು ಟೀಕಿಸುವ ರಾಹುಲ್ ಗಾಂಧಿಗೆ ರಾಮಮಂದಿರಕ್ಕೆ ಪ್ರವೇಶ ಕೊಡಬಾರದು: ಎದುರಾಯ್ತು ಭಾರೀ ವಿರೋಧ

ಕಾರು ಇದೆ ಅಂತ ಈ ಥರಾ ಸ್ಟಂಟ್ ಮಾಡಿದ್ರೆ ದಂಡ ಬೀಳುತ್ತೆ: ಎಚ್ಚರಿಕೆ ಕೊಟ್ಟ ಸಂಚಾರಿ ಪೊಲೀಸರು video

ಮುಂದಿನ ಸುದ್ದಿ
Show comments