Webdunia - Bharat's app for daily news and videos

Install App

ಡಿ. 29ರಂದು ಆಟೋ ಚಾಲಕರಿಂದ ಬೃಹತ್ ಪ್ರತಿಭಟನೆ

Webdunia
ಗುರುವಾರ, 22 ಡಿಸೆಂಬರ್ 2022 (18:36 IST)
ಹೊಸ ವರ್ಷಕ್ಕೆ ಇನ್ನೀನು ಕೆಲವೇ ದಿನಗಳು ಬಾಕಿ ಇದೆ. ನ್ಯೂ ಇಯರ್ ಗೆ ಆಟೋನಲ್ಲಿ ಎಲ್ಲಾದರೂ ಹೋಗೊ ಪ್ಲ್ಯಾನ್ ಇದ್ರೆ ಅದನ್ನು ಇವಾಗಲೀ ಬದಲಾಯಿಸಿಕೊಳ್ಳೋದು ಒಳ್ಳೇದು. ಯಾಕಂದ್ರೆ ಅವತ್ತು ನಿಮಗೆ ಆಟೋ ಸಿಗೋದು ಬಹುತೇಕ ಡೌಟ್.ಇನ್ನೇನು ತಿಂಗಳ ಕೊನೇ . ನ್ಯೂ ಇಯರ್ ಗೆ  ಆಟೋನಲ್ಲಿ ಅಲ್ಲಿ ಹೋಗೋಣ, ಇಲ್ಲಿ  ಹೋಗೋಣ ಅಂತ ಪ್ಲ್ಯಾನ್ ಮಾಡಿದ್ರೆ ಅದನ್ನು ಮೊದಲು ಚೇಂಜ್ ಮಾಡಿ.. ಯಾಕಂದ್ರೆ ಕೊನೆ ವಾರ ಅಂದರೆ ಡಿ. 29ರಂದು ಬೆಂಗಳೂರಿನಾದ್ಯಂತ ಆಟೋ ಸಂಚಾರವನ್ನು ಸ್ಥಗಿತಗೊಳಿಸಲು ಆಟೋ ಚಾಲಕರು ಮುಂದಾಗಿದ್ದಾರೆ. ರ್ಯಾಪಿಡೋ ಬೈಕ್ ಟ್ಯಾಕ್ಸಿ ಆಯಪ್ ಬ್ಯಾನ್, ಬೌನ್ಸ್ ಎಲೆಕ್ಟ್ರಿಕ್ ಬೈಕ್ಗೆ ನೀಡಿರುವ ಅನುಮತಿ ವಾಪಸ್ ಪಡೆಯುವಂತೆ ಒತ್ತಾಯಿಸಿ ಆಟೋ ಚಾಲಕರು ರಾಜ್ಯ ಸಾರಿಗೆ ಇಲಾಖೆಯ ವಿರುದ್ಧ ಸಿಡಿದೆದ್ದಿದ್ದಾರೆ. ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ಸ್ಟೇಷನ್ನಿಂದ ಬೃಹತ್ ಆಟೋ ರ್ಯಾ ಲಿ ಮೂಲಕ ವಿಧಾನಸೌಧಕ್ಕೆ ತೆರಳಿ ಮುತ್ತಿಗೆ ಹಾಕಲು ನಿರ್ಧರಿಸಿದ್ದಾರೆ.
ಈ ಆಟೋ ಮುಷ್ಕರಕ್ಕೆ ಈಗಾಗಲೇ 21 ಆಟೋ ಸಂಘಟನೆಗಳು ಸಾಥ್ ನೀಡಿವೆ. ರಾಜಧಾನಿಯ ಎರಡು ಲಕ್ಷದ ಹತ್ತು ಸಾವಿರ ಆಟೋ ಚಾಲಕರು ಈಗಾಗಲೇ ಈ ಮುಷ್ಕರಕ್ಕೆ ಬೆಂಬಲ ನೀಡಿದ್ದಾರೆ. ಹೀಗಾಗಿ ಡಿ 21ರ ಗುರುವಾರದಂದು ರಾಜಧಾನಿಯಲ್ಲಿ ಸಂಪೂರ್ಣ ಆಟೋ ಸಂಚಾರ ಸ್ತಬ್ಧವಾಗಲಿದೆ.ದಿನೇ ದಿನೇ ರ್ಯಾಪಿಡೋ ಬೈಕ್ ಟ್ಯಾಕ್ಸಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದ್ದು, ಇದರಿಂದಾಗಿ ಆಟೋ ಚಾಲಕರು ಬೀದಿಗೆ ಬೀಳುವ ಪರಿಸ್ಥಿತಿ ಎದುರಾಗಿದೆ. ಯಾವುದೇ ಅನುಮತಿ ಇಲ್ಲದೇ ಇದ್ದರೂ ಕೂಡ ರ್ಯಾಪಿಡೋ ವಾಹನಗಳು ರಸ್ತೆಯಲ್ಲಿ ರಾಜಾರೋಷವಾಗಿ ಓಡಾಡುತ್ತಿವೆ.

ಕರ್ನಾಟಕ ರಾಜ್ಯ ಸಾರಿಗೆ ಪ್ರಾಧಿಕಾರ ಎಲೆಕ್ಟ್ರಿಕ್ ಬೈಕ್ಗಳಿಗೆ ಅನುಮತಿ ನೀಡಿದೆ. ಮೊದಲ ಹಂತದಲ್ಲಿ 100 ಇ- ಬೈಕ್ಗಳನ್ನ ರಸ್ತೆಗಿಳಿಸಲು ನಿರ್ಧರಿಸಿದ್ದ ಬೌನ್ಸ್ ಕಂಪನಿ, ಈಗ ಹಂತ ಹಂತವಾಗಿ 1000 ಇ- ಬೈಕ್ಗಳನ್ನ ರಸ್ತೆಗಿಳಿಸಲು ನಿರ್ಧಾರ ತೆಗೆದುಕೊಂಡಿದೆ. ಕೊರೋನಾ ಸಮಯದಲ್ಲಿ ಸ್ಥಗಿತಗೊಂಡಿದ್ದ ಸೇವೆಯನ್ನು ಪುನಃ ಪ್ರಾರಂಭಿಸಲು ಬೌನ್ಸ್ ಕಂಪನಿ ಅನುಮತಿ ಕೇಳಿ ಅರ್ಜಿ ಸಲ್ಲಿಸಿದೆ. ಇದರಿಂದಾಗಿ ಆಟೋ ಚಾಲಕರ ದುಡಿಮೆಗೆ ದೊಡ್ಡ ಹೊಡೆತ ಬಿದ್ದಂತಾಗಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಬೈ-ಮ್ಯಾಂಚೆಸ್ಟರ್ ಮಾರ್ಗದಲ್ಲಿ ವಿಮಾನಯಾನ ಹೆಚ್ಚಿಸಿದ ಇಂಡಿಗೋ ಏರ್‌ಲೈನ್ಸ್‌

ಭಟ್ಕಳ: ಅಲೆಗಳ ಅಬ್ಬರಕ್ಕೆ ಮಗುಚಿದ ನಾಡದೋಣಿ, ನಾಲ್ವರು ಸಾವು

ನಾಸಾ-ಇಸ್ರೋ ನಿಸಾರ್ ಉಪಗ್ರಹ: ನಭಕ್ಕೆ ಚಿಮ್ಮಿದ ನಿಸಾರ್ ಮಾಡಲಿದೆ ಈ ಅಧ್ಯಯನ

ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಅಣ್ಣಾಮಲೈಗೆ ಮುಂದಿನ ಎಲೆಕ್ಷನ್‌ನಲ್ಲೂ ಟಿಕೆಟ್‌ ಡೌಟ್‌, ಕಾರಣ ಇಲ್ಲಿದೆ

ಧರ್ಮಸ್ಥಳ ಉತ್ಖನನ ವೇಳೆ ಕಂಡಿದ್ದೇನು: ಬಿಗ್ ಟ್ವಿಸ್ಟ್

ಮುಂದಿನ ಸುದ್ದಿ
Show comments