Webdunia - Bharat's app for daily news and videos

Install App

ಡಿ. 25ರಂದು ರಾಜ್ಯ ಮಟ್ಟದ ಗ್ರಾಮೀಣ ‘ಶಿಕ್ಷಕ ರತ್ನ’ ಪ್ರಶಸ್ತಿ ಪ್ರದಾನ ಸಮಾರಂಭ

Webdunia
ಶುಕ್ರವಾರ, 24 ಡಿಸೆಂಬರ್ 2021 (14:35 IST)
ಕರ್ನಾಟಕ ಸರಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ವತಿಯಿಂದ ಡಿ. 25 ರಂದು ಬೆಳಿಗ್ಗೆ 10:30 ಕ್ಕೆ ಸಿದ್ಧಾರೂಢ ಮಠದ 2 ನೇ ಮಹಾಸಭೆಯೊಂದಿಗೆ ರಾಜ್ಯ ಮಟ್ಟದ ಗ್ರಾಮೀಣ ಶಿಕ್ಷಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಸಂಘ ರಾಜ್ಯಾಧ್ಯಕ್ಷ ಅಶೋಕ ಸಜ್ಜನ ಹೇಳಿದರು.
ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾರಂಭಕ್ಕೆ ಉದ್ಘಾಟಕರಾಗಿ ಸಭಾಪತಿ ಬಸವರಾಜ ಹೊರಟ್ಟಿ, ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ, ವಿಪ ಸದಸ್ಯ ಎಸ್.ವಿ. ಸಂಕನೂರ, ಕನ್ನಡ ಪರಿಷತ್ ರಾಜ್ಯಾಧ್ಯಕ್ಷ ಡಾ. ಮಹೇಶ ಜೋಶಿ, ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮೋಹನಕುಮಾರ ಹಂಚಾಟೆ, ಕಪಾಸಾ ಜಿಲ್ಲಾ ಅಧ್ಯಕ್ಷ ಲಿಂಗರಾಜ ಅಂಗಡಿ ಭಾಗವಹಿಸುವರು ಎಂದರು.
ಸಮಾರಂಭದಲ್ಲಿ 80 ಗ್ರಾಮೀಣ ಭಾಗದ ಶಿಕ್ಷಕರಿಗೆ ಶಿಕ್ಷಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಸಂಘದ ವತಿಯಿಂದ 30 ಕ್ಕೂ ಹೆಚ್ಚು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಿಎಂ ಬಸವರಾಜ ಬೊಮ್ಮಾಯಿಯವರಿಗೆ ಮನವಿ ಸಲ್ಲಿಸಲಾಗುವುದ ಎಂದು ತಿಳಿಸಿದರು. ಸಂಘದ ಗೌರವಾಧ್ಯಕ್ಷ ಎಲ್.ಐ. ಲಕ್ಕಮ್ಮನವರ, ಕಾರ್ಯಧ್ಯಕ್ಷ ಶಕರಪ್ಪಗೌಡ ಆರ್.ಕೆ. ಮಲ್ಲಿಕಾರ್ಜುನ ಉಪ್ಪಿನ ಶ್ರೀಕಾಂತ ರೋಣದ ಇದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments