Webdunia - Bharat's app for daily news and videos

Install App

ಜಮೀನು ವಿವಾದಕ್ಕೆ ಬಿದ್ದವು ಜೋಡಿ ಹೆಣ!

Webdunia
ಮಂಗಳವಾರ, 5 ಫೆಬ್ರವರಿ 2019 (16:26 IST)
ಅಪ್ಪ ಹಾಗೂ ಮಗನನ್ನು ಕೊಲೆ ಮಾಡಿರುವ ಘಟನೆ ನಡೆದಿದೆ.

ಜಮೀನು ವಿವಾದದ ಹಿನ್ನೆಲೆಯಲ್ಲಿ ತಂದೆ ಮತ್ತು ಮಗನನ್ನು ಮಚ್ಚಿನಿಂದ ಕೊಚ್ಚಿ ಜೋಡಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ  ಹೊಸಕೋಟೆಯ ಮುತ್ತಕದಹಳ್ಳಿಯಲ್ಲಿ ನಡೆದಿದೆ.

ಮುತ್ತಕದಹಳ್ಳಿಯ ನಾರಾಯಣರೆಡ್ಡಿ(62), ಮತ್ತವರ ಪುತ್ರ ಲಿಂಗಾರೆಡ್ಡಿ(30)ಕೊಲೆಯಾದವರು. ಕೃತ್ಯವೆಸಗಿದ ಬಾಬು ಅನುಗೊಂಡನಹಳ್ಳಿ ಪೋಲಿಸ್ ಠಾಣೆಗೆ ಹೋಗಿ ಶರಣಾಗಿದ್ದಾನೆ.

ಕೊಲೆಯಾದ ನಾರಾಯಣರೆಡ್ಡಿಯು ಆರೋಪಿ ಬಾಬು(35)ಗೆ ಮುತ್ತಕದಹಳ್ಳಿಯ ಸರ್ವೆ ನಂ.18 ರಲ್ಲಿ 2 ಎಕರೆ ಜಮೀನು ಮಾರಿದ್ದರು. ಆದರೆ ಅದನ್ನು ನೋಂದಣಿ ಮಾಡಿಕೊಟ್ಟಿರಲಿಲ್ಲ. ಅಂದಿನಿಂದಲೂ ಇಬ್ಬರ ನಡುವೆ ಜಗಳ ನಡೆಯುತ್ತಲೇ ಇತ್ತು. ಕಳೆದ 15ವರ್ಷಗಳಿಂದಲೂ ಜಮೀನು ವಿವಾದದ ಕುರಿತಾಗಿ ನ್ಯಾಯಲಯದಲ್ಲಿ ವಿಚಾರಣೆ ನಡೆಯುತ್ತಿತ್ತು.

ವಿಚಾರಣೆ ಮುಗಿದು ತೀರ್ಪು ಹೊರಬರದಿದ್ದರಿಂದ ಆಕ್ರೋಶಗೊಂಡ ಬಾಬು ನಿನ್ನೆ ಸಂಜೆ ನಾರಾಯಣರೆಡ್ಡಿ ಹಾಗೂ ಆತನ ಮಗ ಲಿಂಗಾರೆಡ್ಡಿ ಜಮೀನಿನಲ್ಲಿ ನೀಲಿಗಿರಿ ಮರದ ಕೊಂಬೆಗಳನ್ನು ಕತ್ತರಿಸುತ್ತಿದ್ದಾಗ ಏಕಾಏಕಿ ಬಂದು ಜಗಳ ಮಾಡಿ ಕುರಿ ಕಡಿಯುವ ಮಚ್ಚಿನಿಂದ ಇಬ್ಬರನ್ನು ಕೊಚ್ಚಿ ಕೊಲೆ ಮಾಡಿದ್ದಾನೆ.

ಕೊಲೆ ಮಾಡಿದ ಬಳಿಕ ಅನುಗೊಂಡನಹಳ್ಳಿ ಪೋಲಿಸ್ ಠಾಣೆಗೆ ಹೋಗಿ ಶರಣಾಗಿದ್ದಾನೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments