Webdunia - Bharat's app for daily news and videos

Install App

ಜಮೀನು ವಿವಾದಕ್ಕೆ ಬಿದ್ದವು ಜೋಡಿ ಹೆಣ!

Webdunia
ಮಂಗಳವಾರ, 5 ಫೆಬ್ರವರಿ 2019 (16:26 IST)
ಅಪ್ಪ ಹಾಗೂ ಮಗನನ್ನು ಕೊಲೆ ಮಾಡಿರುವ ಘಟನೆ ನಡೆದಿದೆ.

ಜಮೀನು ವಿವಾದದ ಹಿನ್ನೆಲೆಯಲ್ಲಿ ತಂದೆ ಮತ್ತು ಮಗನನ್ನು ಮಚ್ಚಿನಿಂದ ಕೊಚ್ಚಿ ಜೋಡಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ  ಹೊಸಕೋಟೆಯ ಮುತ್ತಕದಹಳ್ಳಿಯಲ್ಲಿ ನಡೆದಿದೆ.

ಮುತ್ತಕದಹಳ್ಳಿಯ ನಾರಾಯಣರೆಡ್ಡಿ(62), ಮತ್ತವರ ಪುತ್ರ ಲಿಂಗಾರೆಡ್ಡಿ(30)ಕೊಲೆಯಾದವರು. ಕೃತ್ಯವೆಸಗಿದ ಬಾಬು ಅನುಗೊಂಡನಹಳ್ಳಿ ಪೋಲಿಸ್ ಠಾಣೆಗೆ ಹೋಗಿ ಶರಣಾಗಿದ್ದಾನೆ.

ಕೊಲೆಯಾದ ನಾರಾಯಣರೆಡ್ಡಿಯು ಆರೋಪಿ ಬಾಬು(35)ಗೆ ಮುತ್ತಕದಹಳ್ಳಿಯ ಸರ್ವೆ ನಂ.18 ರಲ್ಲಿ 2 ಎಕರೆ ಜಮೀನು ಮಾರಿದ್ದರು. ಆದರೆ ಅದನ್ನು ನೋಂದಣಿ ಮಾಡಿಕೊಟ್ಟಿರಲಿಲ್ಲ. ಅಂದಿನಿಂದಲೂ ಇಬ್ಬರ ನಡುವೆ ಜಗಳ ನಡೆಯುತ್ತಲೇ ಇತ್ತು. ಕಳೆದ 15ವರ್ಷಗಳಿಂದಲೂ ಜಮೀನು ವಿವಾದದ ಕುರಿತಾಗಿ ನ್ಯಾಯಲಯದಲ್ಲಿ ವಿಚಾರಣೆ ನಡೆಯುತ್ತಿತ್ತು.

ವಿಚಾರಣೆ ಮುಗಿದು ತೀರ್ಪು ಹೊರಬರದಿದ್ದರಿಂದ ಆಕ್ರೋಶಗೊಂಡ ಬಾಬು ನಿನ್ನೆ ಸಂಜೆ ನಾರಾಯಣರೆಡ್ಡಿ ಹಾಗೂ ಆತನ ಮಗ ಲಿಂಗಾರೆಡ್ಡಿ ಜಮೀನಿನಲ್ಲಿ ನೀಲಿಗಿರಿ ಮರದ ಕೊಂಬೆಗಳನ್ನು ಕತ್ತರಿಸುತ್ತಿದ್ದಾಗ ಏಕಾಏಕಿ ಬಂದು ಜಗಳ ಮಾಡಿ ಕುರಿ ಕಡಿಯುವ ಮಚ್ಚಿನಿಂದ ಇಬ್ಬರನ್ನು ಕೊಚ್ಚಿ ಕೊಲೆ ಮಾಡಿದ್ದಾನೆ.

ಕೊಲೆ ಮಾಡಿದ ಬಳಿಕ ಅನುಗೊಂಡನಹಳ್ಳಿ ಪೋಲಿಸ್ ಠಾಣೆಗೆ ಹೋಗಿ ಶರಣಾಗಿದ್ದಾನೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಅಡಿಕೆ, ಕೊಬ್ಬರಿ ಬೆಲೆ ಇಳಿಕೆ, ಕಾಳುಮೆಣಸು, ಕೊಬ್ಬರಿ ಎಷ್ಟಾಗಿದೆ ನೋಡಿ

ಆಷಾಢ ಶುಕ್ರವಾರ ಮನೆಗೆ ಹೊಸ ಅತಿಥಿ ಬರಮಾಡಿಕೊಂಡ ತೇಜಸ್ವಿ ಸೂರ್ಯ ದಂಪತಿ: ವಿಡಿಯೋ

ಸ್ಯಾನಿಟರಿ ಪ್ಯಾಡ್ ನಲ್ಲೂ ರಾಹುಲ್ ಗಾಂಧಿ ಫೋಟೋ: ಟ್ರೋಲ್ ಆದ ಕಾಂಗ್ರೆಸ್

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಅಹ್ಮದಾಬಾದ್ ವಿಮಾನ ಪತನ: ಸಂತ್ರಸ್ತರಿಗೆ ಹಣ ನೀಡಲು ಏರ್ ಇಂಡಿಯಾ ಕಳ್ಳಾಟವಾಡುತ್ತಿದೆಯೇ

ಮುಂದಿನ ಸುದ್ದಿ
Show comments