Webdunia - Bharat's app for daily news and videos

Install App

ಡೈರಿಯಿಂದ ಬಿಜೆಪಿಯವರ ಬಂಡವಾಳ, ಸುಳ್ಳುಪ್ರಚಾರ ಬಹಿರಂಗವಾಗಿದೆ: ದಿನೇಶ್ ಗುಂಡೂರಾವ್

Webdunia
ಸೋಮವಾರ, 20 ಮಾರ್ಚ್ 2017 (21:04 IST)
ಕಾಂಗ್ರೆಸ್ ಪಕ್ಷದ ವಿಧಾನ ಪರಿಷತ್ ಸದಸ್ಯ ಗೋವಿಂದರಾಜು ನಿವಾಸದಲ್ಲಿ ದೊರೆತ ಡೈರಿ ಅವರದಲ್ಲವೆಂದು ಎಫ್‌‌ಎಸ್‌ಎಲ್ ವರದಿಯಿಂದ ಸಾಬೀತಾಗಿದ್ದರಿಂದ ಬಿಜೆಪಿಯವರ ಬಂಡವಾಳ, ಸುಳ್ಳುಪ್ರಚಾರ ಬಹಿರಂಗವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ತಿರುಗೇಟು ನೀಡಿದ್ದಾರೆ.
 
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಬಿಜೆಪಿ ಮುಖಂಡರು ನಕಲಿ ಡೈರಿಯ ಬಗ್ಗೆ ಪ್ರಸ್ತಾಪಿಸುವುದನ್ನೇ ಕಾಯಕವಾಗಿಸಿಕೊಂಡಿದ್ದಾರೆ. ಇದೀಗ ಎಫ್‌ಎಸ್‌ಎಲ್‌ ವರದಿ ಬಹಿರಂಗವಾಗಿರುವುದರಿಂದ ಮುಖಭಂಗವಾಗಿದೆ ಎಂದು ಗುಡುಗಿದ್ದಾರೆ.
 
ಗೋವಿಂದರಾಜು ನಿವಾಸದಲ್ಲಿ ದೊರೆತ ಡೈರಿಯಲ್ಲಿರುವ ಬರಹಗಳು ಗೋವಿಂದರಾಜು ಅವರಿಗೆ ಸೇರಿದ್ದಲ್ಲ ಎಂದು ಎಫ್‌ಎಸ್‌ಎಲ್ ತಜ್ಞರು ವರದಿ ನೀಡಿದ್ದಾರೆ.
 
ಡೈರಿಯಲ್ಲಿ ಹೈಕಮಾಂಡ್‌ಗೆ ನೀಡಿದ ಕಪ್ಪ ಸೇರಿದಂತೆ ಸ್ಟೀಲ್ ಬ್ರಿಡ್ಜ್‌ನಲ್ಲೂ ಸಿಎಂ ಕುಟುಂಬಕ್ಕೆ 69 ಕೋಟಿ ರೂಪಾಯಿ ಹಣ ಸಂದಾಯವಾಗಿದೆ ಎಂದು ಉಲ್ಲೇಖಿಸಲಾಗಿತ್ತು. ಇದೀಗ ವರದಿ ಬಹಿರಂಗವಾಗಿದ್ದರಿಂದ ಕಾಂಗ್ರೆಸ್‌ನಲ್ಲಿ ನೆಮ್ಮದಿ ಆವರಿಸಿದ್ದರೆ, ಬಿಜೆಪಿಯಲ್ಲಿ ಆತಂಕ ಮೂಡಿಸಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments