Webdunia - Bharat's app for daily news and videos

Install App

ದೈವ ಕೊಟ್ಟ ನುಡಿಯಂತೆ ಪೊಲೀಸ್‌ಗೆ ಶರಣಾದ ಶರತ್‌ ಶೆಟ್ಟಿ ಹತ್ಯೆ ಆರೋಪಿ

sampriya
ಬುಧವಾರ, 29 ಮೇ 2024 (14:45 IST)
Photo Credit Facebook
ಉಡುಪಿ: ಕಳೆದ ವರ್ಷ ಕಾಪುವಿನ ಪಾಂಗಾಳದಲ್ಲಿ ನಡೆದ ಊರಿನ ಪ್ರಭಾವಿ ಯುವಕ ಶರತ್‌ ಶೆಟ್ಟಿ ಕೊಲೆ ಪ್ರಕರಣದ ಆರೋಪಿಯೊಬ್ಬ ದಿಢೀರ್‌ ನ್ಯಾಯಾಲಯದ ಮುಂದೆ ಶರಣಾಗಿ ಆಶ್ಚರ್ಯಕ್ಕೆ ಕಾರಣವಾಗಿದೆ. ಇದೀಗ ಈ ಶರಣಾಗತಿಗೆ ದೈವದ ನುಡಿ ಕಾರಣ ಎಂಬ ಮಾತು ಕರಾವಳಿ ಭಾಗದಲ್ಲಿ ಕೇಳಿಬರುತ್ತಿದೆ.

ಘಟನೆ ಹಿನ್ನೆಲೆ: 2023ರ ಫೆಬ್ರವರಿ 5 ರಂದು ಉಡುಪಿಯ ಪಾಂಗಾಳದಲ್ಲಿ ನಡೆಯುತ್ತಿದ್ದ ಕೋಲದಲ್ಲಿ ಊರಿನವರು ಶ್ರದ್ದಾಭಕ್ತಿಯಿಂದ ಪಾಲ್ಗೊಂಡಿದ್ದರು. ಈ ವೇಳೆ ಹೆದ್ದಾರಿಯಲ್ಲೇ ಊರಿನ ಪ್ರಭಾವಿ ಯುವಕ ಶರತ್‌ ಶೆಟ್ಟಿಯನ್ನು ನಾಲ್ವರ ಗುಂಪೊಂದು ಡ್ಯಾಗರ್​ನಿಂದ ಇರಿದು ಬರ್ಬರ ವಾಗಿ ಕೊಲೆ ಮಾಡಿತ್ತು. ಈ ಘಟನೆಯನ್ನು ಉಡುಪಿಯನ್ನೇ ಬೆಚ್ಚಿಬೀಳಿಸಿತ್ತು.

ಇನ್ನೂ ಕೊಲೆಯಾದ ಯುವಕ ಪೊಲೀಸ್‌ ಇಲಾಖೆ ಮತ್ತು ಭೂತಕ ಲೋಕದ ಜತೆ ನಂಟು ಹೊಂದಿದ್ದ. ಇನ್ನೂ ಶರತ್‌ ಕೊಲೆ ಆರೋಪಿಗಳು ಕಳೆದ ಒಂದು ವರುಷ ಮೂರು ತಿಂಗಳಿನಿಂದ ತಲೆಮರೆಸಿಕೊಂಡಿದ್ದರು.

ಇದೀಗ ಏಕಾಏಕಿ ಪ್ರಮುಖ ಆರೋಪಿ ಯೋಗಿಶ್ ಆಚಾರ್ಯ ಮೇ 23 ರಂದು ಉಡುಪಿಯ ಮೂರನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಹಾಗೂ ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯಕ್ಕೆ ತನ್ನ ವಕೀಲ ಕ್ಲಿಂಟನ್ ಡಿ.ಸಿಲ್ವ ಮೂಲಕ ಹಾಜರಾಗಿದ್ದಾನೆ. ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ನೀಡಿದೆ. ಈತ ಒಂದು ವರುಷ ಮೂರು ತಿಂಗಳಿನಿಂದ ತಲೆಮರೆಸಿಕೊಂಡು ತಿರುಗಾಡುತ್ತಿದ್ದನು.

ಆರೋಪಿಗೆ ಶಿಕ್ಷೆ ನೀಡುವಂತೆ ದೈವದ ಮೊರೆ ಹೋಗಿದ್ದ ಶರತ್‌ ಕುಟುಂಬ: ಇನ್ನೂ ಶರತ್‌ ಕೊಲೆ ನಡೆದ ಬೆನ್ನಲ್ಲೇ ಆತನ ಕುಟುಂಬದವರು 2023 ಮಾರ್ಚ್ 24 ರಂದು ಪಾಂಗಾಳ ಶರತ್ ಶೆಟ್ಟಿಯ ಮನೆಯಲ್ಲಿ ಕುಟುಂಬಿಕರು ದೈವದ ನೇಮ ನಡೆಸಿದ್ದರು. ದೈವದ ಬಳಿ ಅವರು ಶರತ್‌ ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿಯ ಬಗ್ಗೆ ದೂರು ನೀಡಿ, ಅಳಲನ್ನು ತೋಡಿಕೊಂಡಿದ್ದರು. ದೈವವು ಕುಟುಂಬಕ್ಕೆ ಸೂಕ್ತ ನ್ಯಾಯ ದೊರಕಿಸಿಕೊಡುವ ಅಭಯವನ್ನು ನೀಡಿತ್ತು.

ಇದೀಗ ದೈವದ ಅಭಯದಂತೆ ಆರೋಪಿ ಶರಣಾಗಿದ್ದು ಅಚ್ಚರಿಗೆ ಕಾರಣವಾಗಿದೆ. ಆರೋಪಿಗೆ ತಲೆಮರೆಸಿಕೊಂಡಿರಲು ಸಹಾಯ ಮಾಡಿದವರನ್ನು ಪತ್ತೆಹಚ್ಚುತ್ತೇವೆ ಎಂದು ಉಡುಪಿ ಜಿಲ್ಲಾ ಎಸ್‌ಪಿ ಡಾ.ಅರುಣ್ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments