Webdunia - Bharat's app for daily news and videos

Install App

ದಕ್ಷಿಣ ಕನ್ನಡ ಹವಾಮಾನ: ಕರಾವಳಿಯಲ್ಲಿ ಭಾರೀ ಸೆಖೆ ಮಾರಾಯ್ರೇ

Krishnaveni K
ಬುಧವಾರ, 5 ಮಾರ್ಚ್ 2025 (10:09 IST)
ಮಂಗಳೂರು: ಕರಾವಳಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ಮತ್ತು ಉಡುಪಿಯಲ್ಲಿ ಈಗ ಹೊರಗೆ ಕಾಲಿಡಲಾಗದಷ್ಟು ಬಿಸಿಲು, ಸೆಖೆ ಶುರುವಾಗಿದೆ. ಜನ ಯಾವ ನಮೂನೆ ಸೆಖೆ ಮಾರಾಯ್ರೇ ಎಂದು ಬೆವರಿಳಿಸುವಂತಾಗಿದೆ.

ನಿನ್ನೆ ದಕ್ಷಿಣ ಕನ್ನಡದ ತಾಪಮಾನ ಬರೋಬ್ಬರಿ 40 ಡಿಗ್ರಿಯ ಆಸುಪಾಸು ತಲುಪಿತ್ತು. ಕೇರಳದಲ್ಲಿ ಮೋಡ ಕವಿದ ವಾತಾವರಣ ಮತ್ತು ಕೆಲವೆಡೆ ತುಂತುರು ಮಳೆಯಿತ್ತು. ಗಡಿ ಜಿಲ್ಲೆಯಲ್ಲಿ ಭಾರೀ ಬಿಸಿಲು, ಸೆಖೆ ಕಂಡುಬಂದಿದೆ.

ಈ ಬಾರಿ ಕರಾವಳಿ ಭಾಗದಲ್ಲಿ ದಾಖಲೆಯ ತಾಪಮಾನ ಕಂಡುಬರಲಿದೆ ಎಂದು ಹವಾಮಾನ ಇಲಾಖೆ ಈಗಾಗಲೇ ಸೂಚನೆ ನೀಡಿದೆ. ನಿನ್ನೆಯಂತೂ ವಿಪರೀತ ಸೆಖೆಯಿತ್ತು. ಇಂದೂ ಅದೇ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ.

ಇಂದೂ ಕೂಡಾ ಕೆಲವೆಡೆ ಕೊಂಚ ಮೋಡ ಕವಿದ ವಾತಾವರಣ ಮತ್ತು ಬಹುತೇಕ ಬಿಸಿಲು ಕಂಡುಬರಲಿದೆ. ಇಂದೂ ಕೂಡಾ ಗರಿಷ್ಠ ತಾಪಮಾನ 40 ಡಿಗ್ರಿ ಆಸುಪಾಸು ಬಂದು ತಲುಪಲಿದೆ. ಈ ವಾರಕ್ಕಂತೂ ದಕ್ಷಿಣ ಕನ್ನಡದಲ್ಲಿ ಮಳೆಯ ಸೂಚನೆಯಿಲ್ಲ. ಬದಲಾಗಿ ಉಷ್ಣ ಅಲೆಯ ಅಪಾಯವಿದೆ. ಹೀಗಾಗಿ ಮುಂದಿನ ಕೆಲವು ದಿನಗಳಿಗೆ ಜನ ಬೆವರಿಳಿಸಲೇಬೇಕಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಗಣತಿ: ರಾಹುಲ್ ಗಾಂಧಿಯನ್ನು ಹೆಚ್ಚು ಅಭಿನಂದಿಸುತ್ತೇನೆ: ಸಿಎಂ ಸಿದ್ದರಾಮಯ್ಯ

ರಾಹುಲ್ ಗಾಂಧಿ ಒತ್ತಾಯಕ್ಕೆ ಮಣಿದು ಕೇಂದ್ರದಿಂದ ಜಾತಿಗಣತಿ: ಡಿಕೆ ಶಿವಕುಮಾರ್‌

ಪಾಕಿಸ್ತಾನದ ಜೊತೆ ಮಾತುಕತೆ ಮಾಡಿ ಎಂದ ಅಮೆರಿಕಾಗೆ ಒಂದೇ ಮಾತಲ್ಲಿ ಉತ್ತರ ಕೊಟ್ಟ ಸಚಿವ ಎಸ್ ಜೈಶಂಕರ್

ಮಾರ್ಗಮಧ್ಯೆ ನಿಲ್ಲಿಸಿ ನಮಾಜ್ ಮಾಡಿದ ಪ್ರಕರಣ: ಚಾಲಕನಿಗೆ ಬಿಸಿಮುಟ್ಟಿಸಿದ ಇಲಾಖೆ

Karnataka SSLC result 2025: ಎಸ್ಎಸ್ಎಲ್ ಸಿ ಪರೀಕ್ಷೆ ಫಲಿತಾಂಶ ನಾಳೆ ಪ್ರಕಟ, ಎಲ್ಲಿ ವೀಕ್ಷಿಸಬಹುದು ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments