Webdunia - Bharat's app for daily news and videos

Install App

ದಲಿತರಿಗೆ ದೇವಸ್ಥಾನ ಪ್ರವೇಶ ನಿಷೇಧ: ಸವರ್ಣೀಯರ ಬಂಧನ

Webdunia
ಶುಕ್ರವಾರ, 4 ಮೇ 2018 (13:27 IST)
ಕೊಪ್ಪಳ ಜಿಲ್ಲೆಯ ಈ ಗ್ರಾಮದಲ್ಲಿ ದಲಿತರಿಗೆ ದೇವಸ್ಥಾನ ಪ್ರವೇಶ ನಿಷೇಧ ಮಾಡಲಾಗಿದೆ. ದಲಿತ ಸಮುದಾಯದವರು ದೇವಾಲಯ ಪ್ರವೇಶಿಸುವಂತಿಲ್ಲ ಎಂದು ಕಟ್ಟಾತ್ರೆ ಹೊರಡಿಸಲಾಗಿದೆ.
ದೇವಸ್ಥಾನ ದ ಒಳಗೆ ಬೇಡ ಪಲ್ಲಕ್ಕಿ ಸೇವೆ ಮಾಡಲು ಅವಕಾಶ  ನೀಡಿ  ಎಂದು  ಕೇಳಿದ ದಲಿತ ಯುವಕರಿಗೆ ಥಳಿಸಲಾಗಿದೆ. ಸಂವಿಧಾನ ಬದ್ದ ಹಕ್ಕು ಎಂದುಪ್ರಶ್ನೆ ಮಾಡಿದ ದಲಿತ ಯುವಕರಿಗೆ ಸುವರ್ಣಿಯರು  ಹಲ್ಲೆ ಮಾಡಿದ್ದಾರೆ. ಜಿಲ್ಲೆಯ ಮೈನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. 
 
ಮೈನಳ್ಳಿಯ ಗ್ರಾಮ ದೇವತೆ ಬುಡ್ಡಮ್ಮ ದೇವಿಯ ಜಾತ್ರೆಯಲ್ಲಿ ದಲಿತರು ದೇವಸ್ಥಾನ ಪ್ರವೇಶ ಮಾಡಿದ್ದಾರೆ.  ಹೀಗಾಗಿ 4 ಜನ ದಲಿತ ಯುಕರ ಮೇಲೆ ಹಲ್ಲೆ ಮಾಡಿರುವ ವಿಷಯ  ತಡವಾಗಿ ಬೆಳಕಿಗೆ ಬಂದಿದೆ.  ಜಾತ್ರೆ ನಡೆದ ಸಂದರ್ಭದಲ್ಲಿ ಘಟನೆ ನಡೆದಿದೆ. 
 
ಘಟನೆ ಹಿನ್ನಲೆ 30 ಕ್ಕೂ ಹೆಚ್ಚು ಸವರ್ಣಿಯರನ್ನು ಅಟ್ರಾಸಿಟಿ ಪ್ರಕರಣದಲ್ಲಿ ಪೊಲೀಸರು ಬಂಧಿಸಿದ್ದಾರೆ. ಗ್ರಾಮದಲ್ಲಿ ಬೂದಿ ಮುಚ್ಚಿದ ಕೆಂಡದಂತಹ ಬಿಗುವಿನ ವಾತವರಣವಿದೆ ಎನ್ನಲಾಗಿದೆ.
 
ಅನ್ ಟಚೇಬಲಿಟಿ ಇನ್ನೂ ಜೀವಂತವಾಗಿ ಮೈನಹಳ್ಳಿ ಗ್ರಾಮದಲ್ಲಿದೆ. ದಲಿತರಿಗೆ ಹೊಟೇಲ್, ದೇವಸ್ಥಾನ, ಕಟಿಂಗ್  ಶಾಪ್‌ಗಳಲ್ಲಿ ಪ್ರವೇಶ ಇಲ್ಲಾ. ಸ್ವಾತಂತ್ರ್ಯ ಸಿಕ್ಕು ಇಷ್ಟು ವರ್ಷಗಳು ಕಳೆದರೂ ಕೊಪ್ಪಳ ಜಿಲ್ಲೆಯಲ್ಲಿ ದಲಿತರು ಇನ್ನೂ ಗುಲಾಮಗಿರಿಯಲ್ಲಿದ್ದಾರೆ. ಮುಂಜಾಗ್ರತಾ ಕ್ರಮವಾಗಿ 2 ಡಿಎಆರ್ ತುಕಡಿಗಳ ನಿಯೋಜನೆ ಮಾಡಲಾಗಿದೆ. ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಂಗಿಯನ್ನು ಲವ್ ಮಾಡಿದ್ದಕ್ಕೆ ಸಹೋದರರ ಶಿಕ್ಷೆ: 37 ಸೆಕೆಂಡ್ ಗಳಲ್ಲಿ 83 ಬಾರಿ ಇರಿತ: ಭೀಕರ ದೃಶ್ಯ ವೈರಲ್ Video

ಸೋಶಿಯಲ್ ಮೀಡಿಯಾ ಪವರ್ ಇದು… ಬಡತನದಿಂದಾಗಿ ಒಂಟಿ ಕಾಲಿನಲ್ಲಿ ಒದ್ದಾಡುತ್ತಿದ್ದ ಬಾಲಕಿಗೆ ಕೊನೆಗೂ ಸಿಕ್ತು ಸಹಾಯ Video

ನಾನು ಬ್ರಹ್ಮಚಾರಿ ಎಂದು ಯುವತಿಯೊಂದಿಗೆ ಲಲ್ಲೆ ಹೊಡೆಯುತ್ತಿದ್ದ ಪತಿ: ಪತ್ನಿ ಎಂಟ್ರಿ ಹೊಡೆಯುತ್ತಿದ್ದ ಹಾಗೇ ಏನಾಯ್ತು video

ಭಾರತದಲ್ಲಿ ಯಾಕೆ ಹೆಂಗಸರು ಗಂಡು ಮಗುವೇ ಬೇಕೆಂದು ಆಸೆ ಪಡುತ್ತಾರೆ ಗೊತ್ತಿಲ್ಲ: ಡಿಕೆ ಶಿವಕುಮಾರ್

ಕುಮಾರಸ್ವಾಮಿ, ಜನಾರ್ಧನ ರೆಡ್ಡಿ, ರೇಣುಕಾಚಾರ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯ ಸರ್ಕಾರ ಕೌಂಟರ್ ಪ್ಲ್ಯಾನ್

ಮುಂದಿನ ಸುದ್ದಿ
Show comments