ಹೆಸರುಕಾಳು ಖರೀದಿ ಕೇಂದ್ರಗಳು ಪ್ರಾರಂಭ

Webdunia
ಶುಕ್ರವಾರ, 31 ಆಗಸ್ಟ್ 2018 (19:23 IST)
ಕಲಬುರಗಿ ಜಿಲ್ಲೆಯಾದ್ಯಂತ ರೈತರಿಂದ ಹೆಸರುಕಾಳನ್ನು ಆಗಸ್ಟ್ 31 ರಿಂದ ಖರೀದಿಸಲಾಗುತ್ತಿದೆ.
ಸರ್ಕಾರದಿಂದ ಒಟ್ಟು 43  ಹೆಸರುಕಾಳು ಖರೀದಿ ಕೇಂದ್ರಗಳನ್ನು ತೆರೆಯಲಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಟಾಸ್ಕರ್ಫೋಸ್ ಸಮಿತಿ ಅಧ್ಯಕ್ಷ ಆರ್. ವೆಂಕಟೇಶಕುಮಾರ ತಿಳಿಸಿದ್ದಾರೆ.

ಪ್ರತಿಯೊಬ್ಬ ರೈತರು 10 ಕ್ವಿಂ. ಗರಿಷ್ಟ ಪ್ರಮಾಣದಲ್ಲಿ ಹೆಸರುಕಾಳು ಪ್ರತಿ ಕ್ವಿಂಟಲ್‍ಗೆ 6,975 ರೂ.ಗಳ ದರದಲ್ಲಿ ತಮ್ಮ ಗ್ರಾಮಕ್ಕೆ ಹತ್ತಿರದಲ್ಲಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಖರೀದಿ ಕೇಂದ್ರಗಳಲ್ಲಿ ಮಾರಾಟ ಮಾಡಬಹುದಾಗಿದೆ. ರೈತರು ಖರೀದಿ ಕೇಂದ್ರಗಳಲ್ಲಿ ತಮ್ಮ ಹೊಲದ ಪಹಣಿ ಪತ್ರ, ಆಧಾರ ಕಾರ್ಡ, ಬೆಳೆ ದೃಢೀಕರಣ ಪತ್ರ ಹಾಗೂ ಆಧಾರ ಕಾರ್ಡ ಜೋಡಣೆಯಾದ ಬ್ಯಾಂಕ್ ಖಾತೆ ಹೊಂದಿರುವ ಪಾಸ್ ಪುಸ್ತಕದ ಝರಾಕ್ಸ ಪ್ರತಿಯನ್ನು  ದೃಢೀಕರಿಸಿ ಸಲ್ಲಿಸಿ  31.08.2018 ರಿಂದ 09.09.2018 ರ ವೆರೆಗೆ ಹೆಸರು ನೊಂದಾಯಿಸಿ ಕೊಳ್ಳಬಹುದಾಗಿದೆ. ಹೆಸರುಕಾಳು ಖರೀದಿ ಪ್ರಕ್ರಿಯೇಯು   31.08.2018 ರಿಂದ 30 (ಮೂವತ್ತು) ದಿನಗಳ ವರೆಗೆ ಮಾತ್ರ ಇರುತ್ತದೆ.

ರೈತರು ಹೆಸರುಕಾಳು ಹುಟ್ಟುವಳಿಯನ್ನು ಖರೀದಿ ಕೇಂದ್ರಕ್ಕೆ ತಂದು ತಮ್ಮ ಉಪಸ್ಥಿತಿಯಲ್ಲಿಯೇ ಹೆಸರುಕಾಳು ತೂಕ ಮಾಡಿಸಿಕೊಳ್ಳಬೇಕು ಹಾಗೂ ಅಧಿಕೃತ ರಸೀತಿಯನ್ನು ಪಡೆದುಕೊಳ್ಳಬೇಕು. ಖರೀದಿ ಕೇಂದ್ರದಲ್ಲಿ ಯಾವುದೇ ಹಣ ಪಾವತಿ ಮಾಡುವ ಅವಶ್ಯಕತೆ ಇರುವುದಿಲ್ಲ. ಹೆಸರುಕಾಳು ಉತ್ಪನ್ನ ಮಾರಾಟದ ನಂತರ ಸಂಬಂಧಪಟ್ಟ ಅಧಿಕಾರಿಗಳಿಂದ (ಆಃಖಿ) ನೇರವಾಗಿ ಬ್ಯಾಂಕ್ ಖಾತೆಗೆ ಹಣ ಜಮಾ ಮಾಡಲಾಗುತ್ತದೆ ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಳ್ತಂಗಡಿ ಸುಮಂತ್ ಕೇಸ್ ಎಲ್ಲಿಯವರೆಗೆ ಬಂತು, ಆರೋಪಿಗಳು ಸಿಕ್ಕಿಬಿದ್ದರಾ

ಗೂಂಡಾಗಿರಿ ಹೊಣೆ ಹೊತ್ತು ಮುಖ್ಯಮಂತ್ರಿ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ಗವರ್ನರ್ ವಿರುದ್ಧ ಹೋರಾಟದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಕೇಂದ್ರ ಸರಕಾರದ ವಿರುದ್ಧ ದ್ವೇಷ ರಾಜಕಾರಣ ಮಾಡಲು ಸದನ ಬಳಕೆ: ವಿಜಯೇಂದ್ರ ಆಕ್ಷೇಪ

ಸರ್ಕಾರ ಬರೆದುಕೊಟ್ಟ ಭಾಷಣ ಓದದ ಗವರ್ನರ್: ವಿಧಾನಸಭೆಯಲ್ಲಿ ತಳ್ಳಾಟ, ಹೈಡ್ರಾಮ

ಮುಂದಿನ ಸುದ್ದಿ
Show comments