Webdunia - Bharat's app for daily news and videos

Install App

ದಂಡುಪಾಳ್ಯ ಗ್ಯಾಂಗ್ ಗಲ್ಲುಶಿಕ್ಷೆಯನ್ನ ಜೀವಾವಧಿಗೆ ಇಳಿಸಿದ ಹೈಕೋರ್ಟ್

Webdunia
ಸೋಮವಾರ, 4 ಸೆಪ್ಟಂಬರ್ 2017 (18:52 IST)
ದಂಡುಪಾಳ್ಯ ಹೆಸರು ಹೇಳಿದರೆ ಜನ ಬೆಚ್ಚಿ ಬೀಳುತ್ತಾರೆ. ಇದಕ್ಕೆ ಕಾರಣ ಅಲ್ಲಿ ಒಂದಾನೊಂದು ಕಾಲದಲ್ಲಿ ನೆಲೆಸಿದ್ದರೆನ್ನಲಾದ ಕುಖ್ಯಾತ ಹಂತಕರು. ಒಂಟಿ ಮಹಿಳೆಯರನ್ನ ಟಾರ್ಗೆಟ್ ಮಾಡಿ ಮನೆಗೆ ನುಗ್ಗಿ ಬರ್ಬರವಾಗಿ ಕೊಂದು ಮನೆಯನ್ನ ದೋಚುತ್ತಿದ್ದ ಹಂತಕರಿಗೆ ಕೋರ್ಟ್ ಗಲ್ಲುಶಿಕ್ಷೆ ವಿಧಿಸಿತ್ತು. ಇದೀಗ, ಗಲ್ಲುಶಿಕ್ಷೆಯನ್ನ ಜೀವಾವಧಿಗೆ ಇಳಿಸಲಾಗಿದೆ.

ಸುಧಾಮಣಿ ಎಂಬುವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಳ ನ್ಯಾಯಾಲಯ ದಂಡುಪಾಳ್ಯ ಗ್ಯಾಂಗ್`ನ ಲಕ್ಷ್ಮೀ, ಮುನಿತಿಮ್ಮ, ವೆಂಕಟೇಶ್ ಮತ್ತು ನಲ್ಲ ತಿಮ್ಮನಿಗೆ ಗಲ್ಲು ಶಿಕ್ಷೆ ವಿಧಿಸಿತ್ತು. ಇದನ್ನ ಪ್ರಶ್ನಿಸಿ ಹಂತಕರು ಹೈಕೋರ್ಟ್ ಮೆಟ್ಟಿಲೇರಿದ್ದರು.ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ ಗಲ್ಲುಶಿಕ್ಷೆಯನ್ನ ಜೀವಾವಧಿಗೆ ಇಳಿಸಿ ತೀರ್ಪು ನೀಡಿದೆ.

ಪಶುಗಳಂತೆ ಮನುಷ್ಯರನ್ನ ಕೊಂದು ಹಾಕುತ್ತಿದ್ದ ದಂಡುಪಾಳ್ಯ ಹಂತಕರು ಗಲ್ಲು ಶಿಕ್ಷೆಯಿಂದ ಪಾರಾದೆವೆಂದು ನಿಟ್ಟುಸಿರು ಬಿಡುವಂತಿಲ್ಲ. ಇನ್ನೂ ಮೂರು ಪ್ರಕರಣಗಳ ತೀರ್ಪಿ ಹೈಕೋರ್ಟ್`ನಿಂದ ಹೊರಬೀಳಬೇಕಿದೆ.ಈ ಪ್ರಕರಣಗಳಲ್ಲಿ ಯಾವ ತೀರ್ಪು ಬರುತ್ತೋ ಕಾದುನೋಡಬೇಕಿದೆ.

 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments