Webdunia - Bharat's app for daily news and videos

Install App

ದಸರಾ ಕಳೆ ಹೆಚ್ಚಿಸಿದ ಹಂಸಲೇಖ ಸಂಗೀತ

Webdunia
ಸೋಮವಾರ, 11 ಅಕ್ಟೋಬರ್ 2021 (09:18 IST)
ಮೈಸೂರು : ಕೊರೊನಾ ಮಹಾಮಾರಿಯ ಭೀತಿಯ ನಡುವೆ ನಡೆಯುತ್ತಿರುವ ಸರಳ ದಸರಾ ದಿನೇದಿನೇ ಕಳೆಗಟ್ಟುತ್ತದೆ. ಮೈಸೂರು ಅರಮನೆಯ ಅಂಗಳದಲ್ಲಿ ನಡೆದ ಹಂಸಲೇಖ ಸಂಗೀತ ಕಾರ್ಯಕ್ರಮ ಎಲ್ಲರ ಮನಸೂರೆಗೊಳ್ಳುವಲ್ಲಿ ಯಶಸ್ವಿಯಾಯಿತು.

ತಣ್ಣನೆಯ ತಿಳಿಗಾಳಿ, ಅಲ್ಲಲ್ಲಿ ವರುಣನ ಸಿಂಚನ, ಝಗಮಗಿಸುವ ದೀಪಗಳ ನಡುವೆ ಹೊಂಬೆಳಕಿನಿಂದ ಕಂಗೊಳಿಸುತ್ತಿದ್ದ ಮೈಸೂರು ಅರಮನೆ. ಅರಮನೆ ಆವರಣದಲ್ಲಿ ಸುಶ್ರಾವ್ಯ, ಸುಮಧುರ ಹಾಡು. ಹೌದು ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಅವರು ಸಂಯೋಜಿಸಿದ ಸಂಗೀತದ ಅಲೆಗಳು ಸಂಗೀತ ರಸಿಕರ ಮನತಣಿಸುವಲ್ಲಿ ಯಶಸ್ವಿಯಾಯ್ತು.
ಮೊದಲಿಗೆ ರಾಜ ಮಹಾರಾಜ ಜನಗಳ ರಾಜ ಎಂದು ರಾಜ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರನ್ನು ಸ್ಮರಿಸುತ್ತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ತಂಡವು, ರಾಷ್ಟ್ರಕವಿ ಕುವೆಂಪು ಅವರು ರಚಿಸಿದ ನಾಡಗೀತೆಯನ್ನು ಹಾಡುತ್ತಾ ಅರಮನೆ ಅಂಗಳದಲ್ಲಿ ಸುಮಧುರ ಗೀತೆಗಳ ಸುರಿಮಳೆಯನ್ನೇ ಸುರಿಸಿದರು.
ಗಾಯಕಿ ಪೃಥ್ವಿ ಅವರ ಸುಮಧುರ ಧ್ವನಿಯಲ್ಲಿ ಮೂಡಿಬಂದ ಓ ನನ್ನ ಚೇತನ ಆಗು ನೀ ಅನಿಕೇತನ, ಶ್ರೀ ಚಾಮುಂಡೇಶ್ವರಿ ಕುರಿತಾದ ಶ್ರೀ ಚಾಮುಂಡಿ ಮಹಾಮಾಯಾ, ಗಾಯಕ ನಿತಿನ್ ರಾಜಾರಾಮ್ ಶಾಸ್ತ್ರಿ ಅವರ ಕಂಠಸಿರಿಯಲ್ಲಿ ಮೂಡಿಬಂದ ಓಂ ಮಹಾಪ್ರಾಣ ದೀಪಂ ಶಿವಂ ಗೀತೆಯು ವೀಕ್ಷಕರನ್ನು ಭಕ್ತಿಯ ಕಡಲಲ್ಲಿ ತೇಲಿಸಿತು.
ನಮದೊಂದೇ ಭಾರತಂ ಗೀತೆಯನ್ನು ಹಾಡಿ ಸಭಿಕರೆಲ್ಲರಲ್ಲಿ ದೇಶಭಕ್ತಿ ಮೂಡಿಸಿದರು. ನಂತರ ಸರಿಗಮಪ ಚಾಂಪಿಯನ್ ಶಿಪ್ನ ಪುಟ್ಟ ಗಾಯಕಿ ಜ್ಞಾನ ಹಾಡಿದ ಆಗೋ ಕರ್ನಾಟಕ… ಎಂಬ ಸೊಗಸಾದ ಗೀತೆಯು ಸೂಜಿಗಲ್ಲಿನ ಹಾಗೆ ಎಲ್ಲರ ಗಮನ ಸೆಳೆಯಿತು. ಗಾಯಕ ಚಿನ್ಮಯ್ ಆತ್ರೇಯಾ ಅವರು ಹಾಡಿದ ಈ ಭೂಮಿ ಬಣ್ಣದ ಬುಗುರಿ ಗೀತೆಯು ಎಲ್ಲರೂ ತಲೆದೂಗುವಂತೆ ಮಾಡಿತು. ಬಳಿಕ ನೆನಪಿರಲಿ ಚಿತ್ರದ ಕೂರಕ್ ಕುಕ್ಕರಹಳ್ಳಿ ಕೆರೆ ಗೀತೆಯು ನೆರೆದಿದ್ದ ಯುವ ಮನಸುಗಳು ಹೆಜ್ಜೆಹಾಕುವಂತೆ ಮೋಡಿ ಮಾಡಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೈಲಾಸ ಪರ್ವತದ ಶಿರದಲ್ಲಿ ನಿಜವಾಗಿಯೂ ಶಿವನಿದ್ದಾನೆಯೇ, ಮೇಲೆ ಏನಿದೆ ಎಂದು ಗೊತ್ತಾ: ಹಿಂದೆಂದೂ ಕಾಣದ ವೈಮಾನಿಕ ದೃಶ್ಯ ಇಲ್ಲಿದೆ ನೋಡಿ Video

Karnataka Weather: ಕರಾವಳಿ ಜಿಲ್ಲೆಗಳ ಹವಾಮಾನದಲ್ಲಿ ಇಂದು ಮಹತ್ವದ ಬದಲಾವಣೆ

ಸಿಜೆಪಿ ಪ್ರತಿಭಟನಾಕಾರರ ವಿರುದ್ಧದ ಎಲ್ಲಾ ಎಫ್‌ಐಆರ್‌ಗಳು ರದ್ದು, ಆದರೆ ಕಂಡೀಷನ್ ಮೇಲೆ

ಪ್ರತಿ ತಿಂಗಳು ರಾಹುಲ್ ಗಾಂಧಿ ಕಾಲು ಹಿಡಿಯುವ ಸಿಎಂಗೆ ಸ್ವಾತಂತ್ರ್ಯ ಇದೆಯಾ: ಯಡಿಯೂರಪ್ಪ

ಕಾಂಗ್ರೆಸ್ ಸರ್ಕಾರ ಕಿತ್ತೊಗೆಯುವ ಶಕ್ತಿ ಬಿಜೆಪಿ ಪಾದಯಾತ್ರೆಗಿದೆ: ಬಿ.ವೈ. ವಿಜಯೇಂದ್ರ

ಮುಂದಿನ ಸುದ್ದಿ
Show comments