Webdunia - Bharat's app for daily news and videos

Install App

ನಿರ್ಮಾಪಕ ಉಮಾಪತಿಯೇ ಕಾರಣ: ಅರುಣಾ ಕುಮಾರಿ

Webdunia
ಮಂಗಳವಾರ, 13 ಜುಲೈ 2021 (19:46 IST)
ನಟ ದರ್ಶನ್ ಅವರಿಂದ ಹರ್ಷ ಅವರನ್ನು ದೂರ ಮಾಡಲು ನಿರ್ಮಾಪಕ ಉಮಾಪತಿ ಅವರೇ ಕಾರಣ. ನನ್ನ ವಿರುದ್ಧ ಆರೋಪ ಮಾಡಿದ ಪ್ರತಿಯೊಬ್ಬರ ವಿರುದ್ಧವೂ ಕೇಸ್ ಹಾಕ್ತೀನಿ ಎಂದು 25 ಕೋಟಿ ವಂಚನೆ ಯತ್ನ ಪ್ರಕರಣದ ಮಹಿಳೆ ಅರುಣಾ ಕುಮಾರಿ ಹೇಳಿದ್ದಾರೆ.
ಚಿತ್ರ ಸಾಹಿತಿ ನಾಗೇಂದ್ರ ಪ್ರಸಾದ್ ಹಾಗೂ ಉದ್ಯಮಿ ನಮಗೆ ಈ ಹಿಂದೆ ಅರುಣಾಕುಮಾರಿ 15 ಲಕ್ಷ ರೂ. ವಂಚಿಸಿದ್ದಾರೆ ಸುದ್ದಿಗೋಷ್ಠಿಯಲ್ಲಿ ಆರೋಪಿದ ಬೆನ್ನಲ್ಲೇ ಟಿವಿ ಚಾನೆಲ್ ವೊಂದಕ್ಕೆ ದೂರವಾಣಿಯಲ್ಲಿ ಮಾತನಾಡಿದ ಅವರು, ಹೆಣ್ಣು ಎಂದು ಕೂಡ ನೋಡದೇ ನನ್ನನ್ನು ಎಲ್ಲರೂ ತಮಗೆ ಬೇಕಾದಂತೆ ಬಳಸಿಕೊಂಡು ಪೇಪರ್ ನಂತೆ ಎಸೆದಿದ್ದಾರೆ ಎಂದು ಆರೋಪಿಸಿದರು.
ನನ್ನನ್ನು ದರ್ಶನ್ ಗೆ ಪರಿಚಯ ಮಾಡಿಸಿದ್ದೇ ಉಮಾಪತಿ. ನನ್ನನ್ನು ಬ್ಯಾಂಕ್ ಮ್ಯಾನೇಜರ್ ಅಂತ ಹೇಳಿದ್ದು ಕೂಡ ಅವರೇ. ನನಗೆ ಸ್ವಂತ ಮನೆ ಕೊಡಿಸುತ್ತೇನೆ ಎಂದು ನಂಬಿಸಿ ಈ ಕೆಲಸ ಮಾಡಿಸಿದರು. ನಾನು ಯಾವುದೇ ಕಳ್ಳತನ, ದಾಖಲೆ ಫೋರ್ಜರಿ ಮಾಡಿಲ್ಲ. ದರ್ಶನ್ ಭೇಟಿ ವೇಳೆ ಹೇಗೆ ನಡೆದುಕೊಳ್ಳಬೇಕು ಹೇಗೆ ಮಾತನಾಡಬೇಕು ಎಂದು ಉಮಾಪತಿ ಹೇಳಿಕೊಡುತ್ತಿದ್ದ ಎಂದು ಅರುಣಾ ಕುಮಾರಿ ವಿವರಿಸಿದರು.
ಉಮಾಪತಿ ಜೊತೆಗಿನ ಎಲ್ಲಾ ಚಾಟ್ ಹಿಸ್ಟರಿಯನ್ನೂ ತೆಗೆಸುತ್ತೇನೆ. ನಕಲಿ ಐಡಿ ಕಾರ್ಡ್ ಕೂಡ ನಾನು ಮಾಡಿದ್ದಲ್ಲ. ಎಲ್ಲಾ ದಾಖಲೆಗಳನ್ನು ಪಡೆದ ನಂತರ ಎಲ್ಲವನ್ನೂ ಬಹಿರಂಗಪಡಿಸುತ್ತೇನೆ. ಸದ್ಯದ ಪರಿಸ್ಥಿತಿ ಸರಿಯಿಲ್ಲ ಎಂದು ಅರುಣಾಕುಮಾರಿ ಹೇಳಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ