Webdunia - Bharat's app for daily news and videos

Install App

ದರ್ಶನ್ ಕೇಸ್: ರೇಣುಕಾಸ್ವಾಮಿಗೆ ಶಾಕ್ ಟ್ರೀಟ್ ಮೆಂಟ್ ಕೊಟ್ಟ ಆರೋಪಿ ಅರೆಸ್ಟ್

Krishnaveni K
ಸೋಮವಾರ, 17 ಜೂನ್ 2024 (10:37 IST)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಕ್ ಟ್ರೀಟ್ ಮೆಂಟ್ ಕೊಟ್ಟು ಚಿತ್ರಹಿಂಸೆ ಕೊಟ್ಟಿದ್ದ ಆರೋಪಿಯನ್ನು ಬಂಧಿಸಲಾಗಿದೆ.

ಈ ಪ್ರಕರಣದಲ್ಲಿ 9 ನೇ ಆರೋಪಿಯಾಗಿದ್ದ ರಾಜು ಇದುವರೆಗೆ ತಲೆಮರೆಸಿಕೊಂಡಿದ್ದ. ಈತನೇ ರೇಣುಕಾಸ್ವಾಮಿಗೆ ಶಾಕ್ ಟ್ರೀಟ್ ಮೆಂಟ್ ಕೊಟ್ಟ ಪ್ರಮುಖ ಆರೋಪಿ. ಆತನನ್ನು ಈಗ ಪೊಲೀಸರು ಕೊನೆಗೂ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಪಾಪಿ ಮೆಗ್ಗರ್ ಮೆಷಿನ್ ಬಳಸಿ ರೇಣುಕಾಸ್ವಾಮಿಗೆ ಶಾಕ್ ಟ್ರೀಟ್ ಮೆಂಟ್ ಕೊಟ್ಟಿದ್ದ.

ಇದರೊಂದಿಗೆ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಗಳ ಸಂಖ್ಯೆ 19 ಕ್ಕೇರಿದೆ. ಘಟನೆ ನಡೆದ ದಿನ ಈತನನ್ನು ನಂದೀಶ್ ಶೆಡ್ ಗೆ ಕರೆತಂದಿದ್ದ. ಕೇಬಲ್ ಕೆಲಸ ಮಾಡಿಕೊಂಡಿದ್ದ ಈತ ನಂದೀಶ್ ಜೊತೆ ಕೆಲಸ ಮಾಡುತ್ತಿದ್ದ. ಅಂದು ಎಲೆಕ್ಟ್ರಿಕಲ್ ಮೆಗ್ಗರ್ ಮೆಷಿನ್ ತರಿಸಿದ್ದು ಇದೇ ಆರೋಪಿಗಳು.

ರಾಜು ಅಲಿಯಾಸ್ ಧನರಾಜ್ ಮಂಡ್ಯ ಮೂಲದವನಾಗಿದ್ದಾನೆ. ಘಟನೆ ನಡೆದ ಬಳಿಕ ಇದುವರೆಗೆ ಆತ ತಲೆಮರೆಸಿಕೊಂಡಿದ್ದ. ಇದೀಗ ಆತನನ್ನು ಬಂಧಿಸಿ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಬಳಿಕ ಆತನ ಬಳಿಯಿಂದ ಮೆಗ್ಗರ್ ಮೆಷಿನ್ ನ್ನೂ ವಶಕ್ಕೆ ಪಡೆಯಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments