Webdunia - Bharat's app for daily news and videos

Install App

ಎರಡು ಬಾರಿ ವಾಹನ ಬದಲಾವಣೆ, ಸ್ಕ್ರೀನ್ ಅಳವಡಿಸಿದ ವಾಹನದಲ್ಲಿ ದರ್ಶನ್ ಶಿಫ್ಟ್

Krishnaveni K
ಗುರುವಾರ, 29 ಆಗಸ್ಟ್ 2024 (09:09 IST)
ಬೆಂಗಳೂರು: ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ಆರೋಪದ ಹಿನ್ನಲೆಯಲ್ಲಿ ನಟ ದರ್ಶನ್ ರನ್ನು ಇಂದು ಬೆಳಗ್ಗೆಯೇ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗುತ್ತಿದೆ. ಇದೀಗ ಪರಪ್ಪನ ಅಗ್ರಹಾರದಿಂದ ಅನಂತಪುರ ಮಾರ್ಗವಾಗಿ ಬಳ್ಳಾರಿಗೆ ಬರುತ್ತಿದ್ದಾರೆ.

ಸುಮಾರು 10 ಗಂಟೆಗೆ ಬಳ್ಳಾರಿ ಸೆಂಟ್ರಲ್ ಜೈಲ್ ಗೆ ದರ್ಶನ್ ತಲುಪುವ ನಿರೀಕ್ಷೆಯಿದೆ. ಮೂರು ಪೊಲೀಸ್ ವಾಹನಗಳ ಭದ್ರತೆಯಲ್ಲಿ ದರ್ಶನ್ ರನ್ನು ಶಿಫ್ಟ್ ಮಾಡಲಾಗುತ್ತಿದೆ. ಭದ್ರತೆ ದೃಷ್ಟಿಯಿಂದ ಎರಡು ಬಾರಿ ದರ್ಶನ್ ರನ್ನು ಬೇರೆ ಬೇರೆ ವಾಹನಕ್ಕೆ ವರ್ಗಾಯಿಸಲಾಗಿದೆ.

ಅಲ್ಲದೆ, ದರ್ಶನ್ ಇರುವುದು ಯಾರಿಗೂ ಗೊತ್ತಾಗಬಾರದು ಎಂಬ ಕಾರಣದಿಂದ ವಾಹನಕ್ಕೆ ಸ್ಕ್ರೀನ್ ಅಳವಡಿಸಿ ಕವರ್ ಮಾಡಲಾಗಿದೆ. ಬಾಗೇಪಲ್ಲಿ, ಅನಂತಪುರ ಮಾರ್ಗವಾಗಿ ಬಳ್ಳಾರಿಗೆ ತೆರಳುತ್ತಿದ್ದಾರೆ. ಭದ್ರತೆ ದೃಷ್ಟಿಯಿಂದ ಬೇರೊಂದು ಮಾರ್ಗದಿಂದ ದರ್ಶನ್ ರನ್ನು ಕರೆತರಲಾಗುತ್ತಿದೆ.

ಇಂದು ನಸುಕಿನ ಜಾವ 4 ಗಂಟೆ ಸುಮಾರಿಗೆ ದರ್ಶನ್ ರನ್ನು ಪರಪ್ಪನ ಅಗ್ರಹಾರದಿಂದ ಕರೆದೊಯ್ಯಲಾಗಿದೆ. ದರ್ಶನ್ ಎಂಟ್ರಿ ಹಿನ್ನಲೆಯಲ್ಲಿ ಬಳ್ಳಾರಿ ರಸ್ತೆಗಳಲ್ಲಿ ಭದ್ರತೆ ಒದಗಿಸಲಾಗಿದೆ. ಸೆಂಟ್ರಲ್ ಜೈಲ್ ಸಮೀಪ ಸುಮಾರು 50 ಮಂದಿ ಪೊಲೀಸರು ಜಮಾಯಿಸಿದ್ದಾರೆ. ಇಲ್ಲಿ ಅಭಿಮಾನಿಗಳು ಜಮಾಯಿಸುವ ಸಾಧ್ಯತೆಯಿರುವುದರಿಂದ ತೊಂದರೆಯಾಗದಂತೆ ಪೊಲೀಸರು ಸೇರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments