Webdunia - Bharat's app for daily news and videos

Install App

ದರ್ಶನ್ ಬಂಧಿಸಿದ್ದ ಎಸಿಪಿ ಚಂದನ್ ಜೊತೆ ಪ್ರಮೋದ್ ಮುತಾಲಿಕ್ ಕಿರಿಕ್

Krishnaveni K
ಸೋಮವಾರ, 23 ಸೆಪ್ಟಂಬರ್ 2024 (10:53 IST)
Photo Courtesy X
ಬೆಂಗಳೂರು:  ನಟ ದರ್ಶನ್ ಬಂಧಿಸಿ ಮನೆ ಮಾತಾಗಿದ್ದ ಎಸಿಪಿ ಚಂದನ್ ಮತ್ತು  ಹಿಂದೂ ಮುಖಂಡ ಪ್ರಮೋದ್ ಮುತಾಲಿಕ್ ನಡುವೆ ಗಣೇಶ ಮೆರವಣಿಗೆ ವೇಳೆ ಡಿಜೆ ಬಳಕೆ ಬಗ್ಗೆ ಕಿರಿಕ್ ಆಗಿದೆ.

ಈ ಬಾರಿ ಗಣೇಶ ಮೆರವಣಿಗೆ ವೇಳೆ ಡಿಜೆ ಬಳಸಬಾರದು ಎಂದು ಪೊಲೀಸ್ ಮಹಾನಿರ್ದೇಶಕರು ಆದೇಶ ಹೊರಡಿಸಿದ್ದರು. ಆದರೆ ಭಾನುವಾರ ಸಂಜೆ ವಿಜಯನಗರ ಆರ್ ಪಿಸಿ ಲೇಔಟ್ ನಲ್ಲಿರುವ ಗಣೇಶ ವಿಸರ್ಜನೆ ಕಾರ್ಯಕ್ರಮವಿತ್ತು. ಈ ವೇಳೆ ನಿಯಮ ಮೀರಿ ಡಿಜೆ ಹಾಕಲಾಗಿತ್ತು.

ಈ ವೇಳೆ ಸ್ಥಳದಲ್ಲಿದ್ದ ಎಸಿಪಿ ಚಂದನ್ ಕುಮಾರ್ ನೇತೃತ್ವದ ಪೊಲೀಸ್ ಅಧಿಕಾರಿಗಳು ಮತ್ತು ಪ್ರಮೋದ್ ಮುತಾಲಿಕ್ ಜೊತೆ ವಾಗ್ವಾದ ನಡೆದಿದೆ. ಡಿಜೆಗೆ ಅವಕಾಶ ಕೊಡಬಾರದು ಎಂದು ಕಮಿಷನರ್ ಆದೇಶವಿದೆ ಎಂದು ಚಂದನ್ ಖಡಕ್ ಆಗಿ ಹೇಳಿದ್ದಾರೆ. ಆದರೆ ಇದಕ್ಕೆ ಒಪ್ಪದ ಪ್ರಮೋದ್ ಮುತಾಲಿಕ್ ಮುಸ್ಲಿಮರು ಆಜಾನ್ ಕೂಗಲು ಅವಕಾಶ ಕೊಡ್ತೀರಿ, ಡಿಜೆಗೆ ಯಾಕಿಲ್ಲ ಎಂದು ಕೇಳಿದ್ದಾರೆ.

ಇದರ ಬಗ್ಗೆ ತಕರಾರುಗಳಿದ್ದರೆ ಲಿಖಿತ ದೂರು ಕೊಡಿ ಕ್ರಮ ಕೈಗೊಳ್ಳುತ್ತೇವೆ ಎಂದು ಚಂದನ್ ಹೇಳಿದ್ದಾರೆ. ಕೊನೆಗೆ ಪೊಲೀಸರು ಡಿಜೆ ಸೆಟ್ ವಶಪಡಿಸಿಕೊಂಡರು. ಪ್ರಮೋದ್ ಮುತಾಲಿಕ್ ಮನವೊಲಿಸಿ ಡಿಜೆ ಇಲ್ಲದೇ ಮೆರವಣಿಗೆ ಮಾಡಲು ಅವಕಾಶ ನೀಡಲಾಯಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments