Webdunia - Bharat's app for daily news and videos

Install App

ಘಟಾನುಘಟಿಗಳಿಗೆ ಜಾಮೀನು ಕೊಡಿಸಿದ್ದ ವಕೀಲ ಸಿವಿ ನಾಗೇಶ್ ಗೆ ಈಗ ದರ್ಶನ್ ಕಾಪಾಡುವ ಹೊಣೆ

Krishnaveni K
ಶುಕ್ರವಾರ, 21 ಜೂನ್ 2024 (14:00 IST)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಕೇಸ್ ನಲ್ಲಿ ಅರೆಸ್ಟ್ ಆಗಿರುವ ನಟ ದರ್ಶನ್ ರನ್ನು ಕಾಪಾಡುವ ಹೊಣೆ ಈಗ ಘಟಾನುಘಟಿಗಳ ಪರ ವಾದಿಸಿ ಜಾಮೀನು ಕೊಡಿಸಿದ್ದ ಖ್ಯಾತ ವಕೀಲ ಸಿವಿ ನಾಗೇಶ್ ಅವರ ಹೆಗಲಿಗೇರಿದೆ.

ರೇಣುಕಾಸ್ವಾಮಿ ಹತ್ಯೆ ಕೇಸ್ ನಲ್ಲಿ ದರ್ಶನ್ ವಿರುದ್ಧ ಪ್ರಬಲ ಸಾಕ್ಷ್ಯಗಳಿದ್ದು, ಅವರು ಇನ್ನು ಹೊರಬರುವುದು ಅನುಮಾನ ಎಂಬ ಸ್ಥಿತಿಯಲ್ಲಿರುವಾಗ ಪತ್ನಿ ವಿಜಯಲಕ್ಷ್ಮಿ ಶತಾಯಗತಾಯ ಅವರನ್ನು ಜಾಮೀನಿನ ಮೇಲೆ ಹೊರತರಲು ಪ್ರಯತ್ನ ಮಾಡುತ್ತಿದ್ದಾರೆ. ದರ್ಶನ್ ಪರವಾಗಿ ವಾದ ಮಂಡಿಸಲು ಈಗ ಹಿರಿಯ ವಕೀಲ  ಸಿವಿ ನಾಗೇಶ್ ಅವರನ್ನು ನೇಮಿಸಿದ್ದಾರೆ.

ಸಿವಿ ನಾಗೇಶ್ ಈ ಹಿಂದೆ ಹಲ್ಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ರನ್ನು ಅಂದು ಜಾಮೀನಿನ ಮೇಲೆ ಬಿಡುಗಡೆಯಾಗುವಂತೆ ಮಾಡಿದ್ದರು. ಬಿಎಸ್ ಯಡಿಯೂರಪ್ಪ ಅವರ ವಿರುದ್ಧದ ಭ್ರಷ್ಟಾಚಾರ ಪ್ರಕರಣದಲ್ಲೂ ಅವರೇ ಯಡಿಯೂರಪ್ಪ ಪರ ವಾದ ಮಂಡಿಸಿದ್ದರು. ಈ ಹಿಂದೆ ಶಾಸಕ ಮುನಿರತ್ನ ಪರವಾಗಿಯೂ ಅವರೇ ವಾದ ಮಂಡಿಸಿದ್ದರು. ಇತ್ತೀಚೆಗೆ ಶಾಸಕ ಎಚ್ ಡಿ ರೇವಣ್ಣ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾದಾಗ ಅವರನ್ನೂ ಬಿಡಿಸಿಕೊಂಡು ಬಂದಿದ್ದರು. ಹೀಗೆ ರಾಜ್ಯದ ಘಟಾನುಘಟಿ ರಾಜಕೀಯ ನಾಯಕರು, ಗಣ್ಯರೆನಿಸಿಕೊಂಡವರ ಕೇಸ್ ಗಳಲ್ಲಿ ವಾದ ಮಂಡಿಸಿದ ಹೆಗ್ಗಳಿಕೆ ನಾಗೇಶ್ ಅವರದ್ದು.

 
ಇದೀಗ ದರ್ಶನ್ ಪರವಾಗಿ ವಾದ ಮಂಡಿಸಲು ವಿಜಯಲಕ್ಷ್ಮಿ ಸಿವಿ ನಾಗೇಶ್ ಅವರಿಗೆ ಮನವಿ ಮಾಡಿದ್ದಾರೆ. ಅದರಂತೆ ನಾಗೇಶ್ ಈಗಾಗಲೇ ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆಯಲ್ಲಿ ಬಂಧನದಲ್ಲಿರುವ ನಟ ದರ್ಶನ್ ರನ್ನು ಭೇಟಿ ಮಾಡಿ ಬಂದಿದ್ದಾರೆ. ಮುಂದೆ ದರ್ಶನ್ ನ್ಯಾಯಾಂಗ ಬಂಧನಕ್ಕೊಳಗಾಗದ ಬಳಿಕ ಅವರ ಪರವಾಗಿ ಜಾಮೀನಿಗೆ ಅರ್ಜಿ ಸಲ್ಲಿಸಬಹುದು. ದರ್ಶನ್ ಗೆ ಜಾಮೀನು ಪಡೆಯಬೇಕೆಂದರೆ ಹೈಕೋರ್ಟ್ ಮೊರೆ ಹೋಗಬೇಕಾಗಬಹುದು. ಇದಕ್ಕೆ ಮೊದಲು ಸ್ಥಳೀಯ ನ್ಯಾಯಾಲಯ ಅವರನ್ನು ನ್ಯಾಯಾಂಗ ಬಂಧನಕ್ಕೊಪ್ಪಿಸಬೇಕು. ಇದಾದ ಬಳಿಕ ಸಿವಿ ನಾಗೇಶ್ ಹೈಕೋರ್ಟ್ ನಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸತ್ಯ ಹೊರಬರ್ಬೇಕು, ಇಲ್ಲದಿದ್ರೆ ಅನುಮಾನದ ಕತ್ತಿ ನೇತಾಡುತ್ತದೆ: ಸಿಎಂ ಸಿದ್ದರಾಮಯ್ಯ

ನಮಸ್ತೆ ಸೋನಿಯಾ ಅಂತಿದ್ರೆ ಡಿಕೆ ಶಿವಕುಮಾರ್‌ ಸಿಎಂ ಆಗ್ತಾ ಇದ್ರು: ಬಸನಗೌಡ ಪಾಟೀಲ್ ಯತ್ನಾಳ್

ಹಿಂದೂ ಶ್ರದ್ಧಾ ಕೇಂದ್ರದ ಮೇಲೆ ಅಪಮಾನ, ಅಪಪ್ರಚಾರವನ್ನು ಬಿಜೆಪಿ ಸಹಿಸುವುದಿಲ್ಲ – ಕ್ಯಾ. ಬ್ರಿಜೇಶ್ ಚೌಟ

ಧೈರ್ಯವಿದ್ದರೆ ಮಸೀದಿ ಹೋಗಿ ಮುಸ್ಲಿಮರದ್ದಲ್ಲ ಎಂದು ಹೇಳಲಿ: ಆರ್‌ ಅಶೋಕ್

ಧರ್ಮಸ್ಥಳದಲ್ಲಿ ಇಂತಹ ಕುಟುಂಬದಲ್ಲಿ ಹುಟ್ಟಿ ಬೆಳೆದಿರುವುದು ಪುಣ್ಯ: ವೀರೇಂದ್ರ ಹೆಗ್ಗಡೆ

ಮುಂದಿನ ಸುದ್ದಿ
Show comments