Webdunia - Bharat's app for daily news and videos

Install App

ಕಾಂಗ್ರೆಸ್ ಪರ ಮಂಡ್ಯದಲ್ಲಿ ಪ್ರಚಾರ ಮಾಡುತ್ತಿರುವುದಕ್ಕೆ ಸ್ಪಷ್ಟನೆ ಕೊಟ್ಟ ನಟ ದರ್ಶನ್

Krishnaveni K
ಗುರುವಾರ, 18 ಏಪ್ರಿಲ್ 2024 (12:12 IST)
ಮಂಡ್ಯ: ಕಳೆದ ಬಾರಿ ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಪರವಾಗಿ ಪ್ರಚಾರ ನಡೆಸಿದ್ದ  ನಟ ದರ್ಶನ್ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸುತ್ತಿದ್ದಾರೆ.

ಸುಮಲತಾ ಅವರನ್ನು ಅಮ್ಮ ಎಂದೇ ದರ್ಶನ್ ಗೌರವಿಸುತ್ತಾರೆ. ಸುಮಲತಾ ಏನೇ ಹೇಳಿದರೂ ಮಾಡುತ್ತೇನೆ ಎನ್ನುತ್ತಾರೆ. ಆದರೆ ಸುಮಲತಾಗೆ ಈ ಬಾರಿ ಮಂಡ್ಯದಲ್ಲಿ ಟಿಕೆಟ್ ಸಿಕ್ಕಿಲ್ಲ. ಜೊತೆಗೆ ಅವರು ಬಿಜೆಪಿಗೆ ಸೇರಿಕೊಂಡಿದ್ದಾರೆ. ಮಂಡ್ಯದಿಂದ ಸುಮಲತಾ ವಿರೋಧಿ ಕುಮಾರಸ್ವಾಮಿ ಬಿಜೆಪಿ-ಜೆಡಿಎಎಸ್ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿದ್ದಾರೆ. ಸುಮಲತಾಗೆ ಮಂಡ್ಯ ಟಿಕೆಟ್ ಕೈ ತಪ್ಪಿದ ಬೆನ್ನಲ್ಲೇ ದರ್ಶನ್ ಕಾಂಗ್ರೆಸ್ ಪರ ಪ್ರಚಾರಕ್ಕಿಳಿದಿದ್ದು ಎಲ್ಲರೂ ಅನುಮಾನಪಡುವಂತೆ ಮಾಡಿದೆ.

ಇದೀಗ ಸ್ವತಃ ದರ್ಶನ್ ಎಲ್ಲಾ ಅನುಮಾನಗಳಿಗೆ ಸ್ಪಷ್ಟನೆ ನೀಡಿದ್ದಾರೆ. ಈ ಬಾರಿ ಮಂಡ್ಯದಲ್ಲಿ ಕಾಂಗ್ರೆಸ್ ಪರ ಪ್ರಚಾರ ನಡೆಸುತ್ತಿರುವುದಕ್ಕೆ ಕಾರಣ ಕೊಟ್ಟಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ಪ್ರಚಾರ ನಡೆಸಿದ ದರ್ಶನ್, ‘ನಾನು ಪಕ್ಷದ ಪರ ಬರುವುದಿಲ್ಲ, ವ್ಯಕ್ತಿ ಪರ ನಿಲ್ಲುತ್ತೇನೆ. ಮಾಧ‍್ಯಮದವರು ಏನೇನೋ ಹಾಕಿದರೆ ಕಷ್ಟ. ಸುಮಲತಾಗೆ ಟಿಕೆಟ್ ಸಿಕ್ಕಿಲ್ಲ, ಹೀಗಾಗಿ ನೀವು ನಮ್ಮ ಪರವಾಗಿ ಪ್ರಚಾರಕ್ಕೆ ಬರಬೇಕು ಎಂದು ಉದಯ ಗೌಡ್ರು ಹೇಳಿದ್ರು ಅದಕ್ಕೆ ಸ್ಟಾರ್ ಚಂದ್ರು ಪರ ಪ್ರಚಾರಕ್ಕೆ ಬಂದಿದ್ದೇನೆ. ಸ್ಟಾರ್ ಚಂದ್ರುಗೆ ಮತ ನೀಡಿ ಉದಯ ಗೌಡ್ರು, ನರೇಂದ್ರ ಅವರ ಕೈ ಬಲಪಡಿಸಿ’ ಎಂದು ದರ್ಶನ್ ವಿವರಣೆ ನೀಡಿದ್ದಾರೆ.

ದರ್ಶನ್ ಈಗ ಕಾಂಗ್ರೆಸ್ ಪರವಾಗಿ ಪ್ರಚಾರಕ್ಕಿಳಿದಿರುವುದರಿಂದ ಸುಮಲತಾಗೆ ಕುಮಾರಸ್ವಾಮಿ ಮೇಲಿನ ಮುನಿಸು ಇದಕ್ಕೆ ಕಾರಣವೇನೋ ಎಂಬ ಅನುಮಾನ ಮೂಡಿತ್ತು. ಆದರೆ ಅವರ ಈ ಸ್ಪಷ್ಟನೆ ಎಲ್ಲಾ ಅನುಮಾನಗಳಿಗೆ ಉತ್ತರ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಣದೀಪ್ ಸುರ್ಜೇವಾಲಾ ರಾಜ್ಯಕ್ಕೆ ಬಂದಿರುವುದೇ ಕಪ್ಪ ಕೇಳಕ್ಕೆ: ಸಿಟಿ ರವಿ

ತೆಲಂಗಾಣದ ಎಲ್ಲ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ

ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಅತೃಪ್ತ ಶಾಸಕರ ಭೇಟಿ ಬಳಿಕ ಸುರ್ಜೇವಾಲಾ ಹೀಗಂದ್ರು

ಕಸ ಹಾಕಿದ್ದಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ, ಕ್ರೂರತೆಗೆ ಭಾರೀ ಆಕ್ರೋಶ

Video: ಏಕಾಏಕಿ ಉಕ್ಕಿ ಹರಿದ ಜಲಪಾತ, ಪವಾಡ ಸದೃಶ್ಯ 6 ಮಹಿಳೆಯರು ಪಾರು

ಮುಂದಿನ ಸುದ್ದಿ
Show comments