Select Your Language

Notifications

webdunia
webdunia
webdunia
webdunia

ದರ್ಶನ್ ಪಕ್ಷ ನೋಡಲ್ಲ, ವ್ಯಕ್ತಿ ನೋಡಿ ಪ್ರಚಾರಕ್ಕೆ ಹೋಗುತ್ತಾರೆ: ಸುಮಲತಾ ಅಂಬರೀಶ್

ದರ್ಶನ್ ಪಕ್ಷ ನೋಡಲ್ಲ, ವ್ಯಕ್ತಿ ನೋಡಿ ಪ್ರಚಾರಕ್ಕೆ ಹೋಗುತ್ತಾರೆ: ಸುಮಲತಾ ಅಂಬರೀಶ್

Sampriya

ಉಡುಪಿ , ಶುಕ್ರವಾರ, 19 ಏಪ್ರಿಲ್ 2024 (17:23 IST)
Photo Courtesy X
ಉಡುಪಿ: ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ಪ್ರಚಾರ ಮಾಡುತ್ತಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಗ್ಗೆ ಪ್ರತಿಕ್ರಿಯಿಸಿದ ಸುಮಲತಾ ಅಂಬರೀಶ್ ಅವರು ದರ್ಶನ್ ಅವರನ್ನು ಬೇರೆ ಪಕ್ಷದ ಪ್ರಚಾರಕ್ಕೆ ಹೋಗು ಅಥವಾ ಹೋಗ್ಬೇಡ ಎಂದು ನಾನು ಹೇಳಲ್ಲ ಎಂದರು.

ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ದರ್ಶನ್‌ನನ್ನು ಮಂಡ್ಯಕ್ಕೆ ನಾನು ಪ್ರಚಾರಕ್ಕೆ ಕಳುಹಿಸಿದ್ದೇನೆ ಎಂಬುದು  ಊಹಾಪೋಹ. ಇದರಲ್ಲಿ ಸೆನ್ಸ್ ಲಾಜಿಕ್ ಎರಡು ಇಲ್ಲ. ದರ್ಶನ್ ಅವರನ್ನು ಬೇರೆ ಪಕ್ಷದ ಪ್ರಚಾರಕ್ಕೆ ಹೋಗು ಅಥವಾ ಹೋಗಬೇಡ ಎಂದು ಹೇಳಲ್ಲ. ನಾನು ಸ್ಪರ್ಧಿಸುತ್ತಿದ್ದರೆ ನನ್ನ ಪರವಾಗಿ ಮತಯಾಚನೆ ಮಾಡುತ್ತಿದ್ದ. ಇನ್ನೂ ಬೇರೆಯವರ ರಾಜಕೀಯ ವಿಷಯವಾಗಿ ನಾನು, ದರ್ಶನ್ ಮಾತುಕತೆ ನಡೆಸಲ್ಲ ಎಂದು ಹೇಳಿದರು.

ದರ್ಶನ್ ಅವರು ಪಕ್ಷ ನೋಡಿ ಪ್ರಚಾರ ಮಾಡಲ್ಲ.  ವ್ಯಕ್ತಿ ನೋಡಿ ಪ್ರಚಾರಕ್ಕೆ ಹೋಗುತ್ತಾನೆ. ಇನ್ನು ರಾಜಕೀಯವಾಗಿ ನಾನು ಪ್ರತಿದಿನ ಫೋನು ಮಾಡಿ ನೀನು ಎಲ್ಲಿಗೆ ಹೋಗುತ್ತಿದ್ದೀಯ? ಯಾರ ಪರ ಪ್ರಚಾರ ಮಾಡುತ್ತಿದ್ದೀಯಾ? ಎಂದು ಕೇಳುವುದಿಲ್ಲ ಎಂದರು.

ಈ ಹಿಂದೆ ವಿಧಾನಸಭೆ ಚುನಾವಣೆಯಲ್ಲಿ ದರ್ಶನ್ ಮದ್ದೂರಿನಲ್ಲಿ ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದರು. ಹಾಗೇ ಶ್ರೀರಂಗಪಟ್ಟಣದಲ್ಲಿ ಬಿಜೆಪಿ ಪರ ಪ್ರಚಾರ ಮಾಡಿದ್ದರು. ಪಾಂಡವಪುರದಲ್ಲಿ ದರ್ಶನ್ ಪುಟ್ಟಣ್ಣಯ್ಯ ಪರ ಪ್ರಚಾರಕ್ಕೆ ಹೋಗಿದ್ದರು. ಪಕ್ಷ ಮುಖ್ಯ ಅಲ್ಲ. ನಿಂತಿರುವ ವ್ಯಕ್ತಿ ಮುಖ್ಯ ಎಂದು ದರ್ಶನ್ ಹೇಳುತ್ತಾ ಬಂದಿದ್ದಾರೆ ಎಂದು ಸುಮಲತಾ ಅಂಬರೀಶ್ ತಿಳಿಸಿದರು.


Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್ ಸರ್ಕಾರ ಬಡವರಿಗೆ ಕೊಟ್ಟಿದ್ದು ಖಾಲಿ ಜೇಬು: ಚೊಂಬು ಜಾಹೀರಾತಿಗೆ ಆರ್‌ ಅಶೋಕ್ ತಿರುಗೇಟು