Publish Date: Thu, 27 Sep 2018 (13:01 IST)
Updated Date: Thu, 27 Sep 2018 (13:03 IST)
ಬೆಂಗಳೂರು: ಕಾರು ಅಪಘಾತದಲ್ಲಿ ಕೈ ಮುರಿತಕ್ಕೊಳಗಾಗಿ ಸದ್ಯಕ್ಕೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳಿಗೆ ಬೇಸರ ತರುವ ಸುದ್ದಿಯೊಂದು ಬಂದಿದೆ.
ಕೈ ಮುರಿತಕ್ಕೊಳಗಾಗಿರುವ ದರ್ಶನ್ ಇನ್ನೂ ಕೊಲಂಬಿಯಾ ಏಷಿಯಾ ಆಸ್ಪತ್ರೆಯಿಂದ ಬಿಡುಗಡೆಯಾಗಿಲ್ಲ. ಇನ್ನೂ ಅವರಿಗೆ ತಜ್ಞ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ನಿನ್ನೆ ಅವರ ಆರೋಗ್ಯದ ಬಗ್ಗೆ ವೈದ್ಯರು ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದರು.
ಆದರೆ ಇದೀಗ ಬಂದ ಸುದ್ದಿಯ ಪ್ರಕಾರ ದರ್ಶನ್ ಗೆ ಇನ್ನು ಒಂದು ವರ್ಷಗಳ ಕಾಲ ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸಬೇಕಾಗುತ್ತದೆ. ಅವರು ಇನ್ನು ಒಂದು ವರ್ಷ ಕೈಯಲ್ಲಿ ಭಾರ ಎತ್ತುವಂತಿಲ್ಲ. ಜಿಮ್ ಮಾಡುವಂತೆಯೂ ಇಲ್ಲ. ಮುರಿತಕ್ಕೊಳಗಾದ ಕೈಗೆ ಶಸ್ತ್ರಚಿಕಿತ್ಸೆ ಮಾಡಲಾಗಿದ್ದು ಪ್ಲೇಟ್ ಅಳವಡಿಸಲಾಗಿದೆ. ಹೀಗಾಗಿ ದರ್ಶನ್ ಇನ್ನೂ ಒಂದು ವರ್ಷ ಎಚ್ಚರಿಕೆ ವಹಿಸಲೇಬೇಕಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.