Select Your Language

Notifications

webdunia
webdunia
webdunia
webdunia

ದರ್ಶನ್ ಅಭಿಮಾನಿಗಳಿಗೆ ಒಂದು ಬ್ಯಾಡ್ ನ್ಯೂಸ್

ದರ್ಶನ್ ಅಭಿಮಾನಿಗಳಿಗೆ ಒಂದು ಬ್ಯಾಡ್ ನ್ಯೂಸ್
ಬೆಂಗಳೂರು , ಗುರುವಾರ, 27 ಸೆಪ್ಟಂಬರ್ 2018 (13:01 IST)
ಬೆಂಗಳೂರು: ಕಾರು ಅಪಘಾತದಲ್ಲಿ ಕೈ ಮುರಿತಕ್ಕೊಳಗಾಗಿ ಸದ್ಯಕ್ಕೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳಿಗೆ ಬೇಸರ ತರುವ ಸುದ್ದಿಯೊಂದು ಬಂದಿದೆ.

ಕೈ ಮುರಿತಕ್ಕೊಳಗಾಗಿರುವ ದರ್ಶನ್ ಇನ್ನೂ ಕೊಲಂಬಿಯಾ ಏಷಿಯಾ ಆಸ್ಪತ್ರೆಯಿಂದ ಬಿಡುಗಡೆಯಾಗಿಲ್ಲ. ಇನ್ನೂ ಅವರಿಗೆ ತಜ್ಞ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ನಿನ್ನೆ ಅವರ ಆರೋಗ್ಯದ ಬಗ್ಗೆ ವೈದ್ಯರು ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದರು.

ಆದರೆ ಇದೀಗ ಬಂದ ಸುದ್ದಿಯ ಪ್ರಕಾರ ದರ್ಶನ್ ಗೆ ಇನ್ನು ಒಂದು ವರ್ಷಗಳ ಕಾಲ ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸಬೇಕಾಗುತ್ತದೆ. ಅವರು ಇನ್ನು ಒಂದು ವರ್ಷ ಕೈಯಲ್ಲಿ ಭಾರ ಎತ್ತುವಂತಿಲ್ಲ. ಜಿಮ್ ಮಾಡುವಂತೆಯೂ ಇಲ್ಲ. ಮುರಿತಕ್ಕೊಳಗಾದ ಕೈಗೆ ಶಸ್ತ್ರಚಿಕಿತ್ಸೆ ಮಾಡಲಾಗಿದ್ದು ಪ್ಲೇಟ್ ಅಳವಡಿಸಲಾಗಿದೆ. ಹೀಗಾಗಿ ದರ್ಶನ್ ಇನ್ನೂ ಒಂದು ವರ್ಷ ಎಚ್ಚರಿಕೆ ವಹಿಸಲೇಬೇಕಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

Share this Story:

Follow Webdunia kannada

ಮುಂದಿನ ಸುದ್ದಿ

ಅನೈತಿಕ ಸಂಬಂಧ ಅಪರಾಧವಾಗುವುದಿಲ್ಲ- ಸುಪ್ರೀಂ ಕೋರ್ಟ್