Webdunia - Bharat's app for daily news and videos

Install App

ದರ್ಶನ್ ಅಭಿಮಾನಿಗಳಿಗೆ ಒಂದು ಬ್ಯಾಡ್ ನ್ಯೂಸ್

Webdunia
ಗುರುವಾರ, 27 ಸೆಪ್ಟಂಬರ್ 2018 (13:01 IST)
ಬೆಂಗಳೂರು: ಕಾರು ಅಪಘಾತದಲ್ಲಿ ಕೈ ಮುರಿತಕ್ಕೊಳಗಾಗಿ ಸದ್ಯಕ್ಕೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳಿಗೆ ಬೇಸರ ತರುವ ಸುದ್ದಿಯೊಂದು ಬಂದಿದೆ.

ಕೈ ಮುರಿತಕ್ಕೊಳಗಾಗಿರುವ ದರ್ಶನ್ ಇನ್ನೂ ಕೊಲಂಬಿಯಾ ಏಷಿಯಾ ಆಸ್ಪತ್ರೆಯಿಂದ ಬಿಡುಗಡೆಯಾಗಿಲ್ಲ. ಇನ್ನೂ ಅವರಿಗೆ ತಜ್ಞ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ನಿನ್ನೆ ಅವರ ಆರೋಗ್ಯದ ಬಗ್ಗೆ ವೈದ್ಯರು ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದರು.

ಆದರೆ ಇದೀಗ ಬಂದ ಸುದ್ದಿಯ ಪ್ರಕಾರ ದರ್ಶನ್ ಗೆ ಇನ್ನು ಒಂದು ವರ್ಷಗಳ ಕಾಲ ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸಬೇಕಾಗುತ್ತದೆ. ಅವರು ಇನ್ನು ಒಂದು ವರ್ಷ ಕೈಯಲ್ಲಿ ಭಾರ ಎತ್ತುವಂತಿಲ್ಲ. ಜಿಮ್ ಮಾಡುವಂತೆಯೂ ಇಲ್ಲ. ಮುರಿತಕ್ಕೊಳಗಾದ ಕೈಗೆ ಶಸ್ತ್ರಚಿಕಿತ್ಸೆ ಮಾಡಲಾಗಿದ್ದು ಪ್ಲೇಟ್ ಅಳವಡಿಸಲಾಗಿದೆ. ಹೀಗಾಗಿ ದರ್ಶನ್ ಇನ್ನೂ ಒಂದು ವರ್ಷ ಎಚ್ಚರಿಕೆ ವಹಿಸಲೇಬೇಕಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments