ದರ್ಶನ್ ಕೊಲೆಗಡುಕನಲ್ಲ, ನಟನ ಪರ ಬ್ಯಾಟಿಂಗ್ ಮಾಡಿದ ಶಾಸಕ ಉದಯ್ ಗೌಡ

Sampriya
ಶುಕ್ರವಾರ, 21 ಜೂನ್ 2024 (15:17 IST)
Photo Courtesy X
ಬೆಂಗಳೂರು: ನಟ ದರ್ಶನ್ ಅವರದ್ದು, ಒಳ್ಳೆಯ ವ್ಯಕ್ತಿತ್ವ, ಸ್ವಲ್ಪ ಮುಂಗೋಪಿ ಬಿಟ್ಟರೆ, ಕೊಲೆ ಮಾಡುವ ಮನಸ್ಥಿತಿಯವರಲ್ಲ ಎಂದು ಮದ್ದೂರು ಶಾಸಕ ಕದಲೂರು ಉದಯ್ ಗೌಡ ಅವರು ನಟನ ನಡವಳಿಕೆಯನ್ನು ಸಮರ್ಥನೆ ಮಾಡಿಕೊಂಡರು.

ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿ ಪೊಲೀಸ್ ಕಸ್ಟಡಿಯಲ್ಲಿರುವ ದರ್ಶನ್ ಅವರ ಪರ ಬ್ಯಾಟಿಂಗ್ ಮಾಡಿದ ಉದಯ್ ಗೌಡ ಅವರು, ಕೊಲೆಮಾಡುವ ಬುದ್ದಿ ದರ್ಶನ್‌ಗಿಲ್ಲ ಎಂದರು.

ನಿನ್ನೆ ಸಿಎಂ ಸಿದ್ದರಾಮಯ್ಯ ಅವರು ಪಕ್ಷದ ನಾಯಕರಿಗೆ ದರ್ಶನ್ ಪರ ಯಾರು ಒತ್ತಡ ಹೇರಬಾರದೆಂದು ಖಡಕ್ ವಾರ್ನಿಂಗ್ ಕೊಟ್ಟಿದ್ದರು ಶಾಸಕ ಉದಯ್ ಗೌಡ ಅವರು ದರ್ಶನ್ ಬಗ್ಗೆ ಕ್ಯಾರೆಕ್ಟರ್ ಸರ್ಟಿಫಿಕೇಟ್ ನೀಡಿದ್ದಾರೆ.

ತುಂಬಾ ವರ್ಷಗಳಿಂದ ನಾನು ಮತ್ತು ದರ್ಶನ್‌ ಸ್ನೇಹಿತರಾಗಿದ್ದೇವೆ. ಇದು ಯಾಕೆ ಆಯ್ತು? ಏನಕ್ಕೆ ಆಯ್ತು ಅಂತ ನಮಗೆ ಮಾಹಿತಿ ಇಲ್ಲ. ತನಿಖೆಯಲ್ಲಿ ಸತ್ಯ ವಿಚಾರ ಗೊತ್ತಾಗುತ್ತದೆ. ಇಷ್ಟಂತೂ ಸತ್ಯ ದರ್ಶನ್ ಕೊಲೆಗಡುಕ ಅಲ್ಲ ಎಂದು ತಿಳಿಸಿದರು.

ನಾವು ಪ್ರಭಾವ ಬೀರುವ ಹಾಗೇ ಇದ್ದರೆ ಅವರು ಜೈಲಿನಲ್ಲಿ ಇರುತ್ತಿದ್ದರಾ ಹೇಳಿ? ಯಾರು ಕೇಸ್ ಮೇಲೆ ಪ್ರಭಾವ ಬೀರಿಲ್ಲ. ಬೀರಿದ್ದರೆ ಇಂತಹ ಸ್ಥಿತಿಗೆ ಬರುತ್ತಿರಲಿಲ್ಲ. ಯಾರು ಇದರಲ್ಲಿ ಭಾಗಿ ಆಗುತ್ತಿಲ್ಲ. ಪಾರದರ್ಶಕವಾಗಿ ತನಿಖೆ ಆಗುತ್ತಿದ್ದು ಸತ್ಯ ಹೊರಗೆ ಬರುತ್ತದೆ ಎಂದರು.

ಇನ್ನೂ ರೇಣುಕಸ್ವಾಮಿ ಕೊಲೆ ನಡೆದಿರುವುದು ಖಂಡನೀಯ. ಯಾರೇ ಕೊಲೆ ಮಾಡಿದ್ದರೂ ತಪ್ಪೇ, ಈ ಪ್ರಕರಣದಲ್ಲಿ ದರ್ಶನ್ ಪಾತ್ರ ಏನೆಂದು ತನಿಖೆಯಿಂದ ತಿಳಿದುಬರಬೇಕು ಅಷ್ಟೇ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೈಲಿನ ಎಸಿ ಕೋಚ್‌ನಲ್ಲಿ ಕೆಟಲ್‌ನಲ್ಲಿ ನೂಡಲ್ಸ್ ಮಾಡಿದ ಮಹಿಳೆಗೆ ಇದೀಗ ಢವಢವ

ನವೆಂಬರ್ ಕ್ರಾಂತಿ ಬಿಸಿ ನಡುವೆ ಹೊಸ ಬಾಂಬ್ ಸಿಡಿಸಿದ ಎಚ್ ಡಿ ಕುಮಾರಸ್ವಾಮಿ

ORS ಬ್ರ್ಯಾಂಡ್‌ನ ಪೇಯಗಳನ್ನು ಹಿಂಪಡೆಯಲು FSSAI ಸೂಚನೆ

ಡಿಕೆ ಬ್ರದರ್ಸ್ ತಲೆ ಮೇಲೆ ಕೈಯಿಟ್ಟು ಆಣೆ ಮಾಡಿದ್ರು ಸಿದ್ದರಾಮಯ್ಯ: ಎಚ್ ವಿಶ್ವನಾಥ್ ಹೊಸ ಬಾಂಬ್

ಎಟಿಎಂ ವ್ಯಾನ್‌ನ 7.11 ಕೋಟಿ ದರೋಡೆ ಪ್ರಕರಣ, ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments