Select Your Language

Notifications

webdunia
webdunia
webdunia
webdunia

ಸಂಕಷ್ಟದಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮೀ, ಏನಿದು ಪ್ರಕರಣ ಗೊತ್ತಾ

vijayalakshmi darshan

Sampriya

ಬೆಂಗಳೂರು , ಮಂಗಳವಾರ, 18 ಜೂನ್ 2024 (17:50 IST)
photo Courtesy Instagram
ಬೆಂಗಳೂರು: ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಎ 2 ಆರೋಪಿಯಾಗಿರುವ ನಟ ದರ್ಶನ್‌ ಅವರಿಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಅದಲ್ಲದೆ ಈ ಪ್ರಕರಣದಲ್ಲಿ ದರ್ಶನ್ ಅವರ  ಪತ್ನಿ ವಿಜಯಲಕ್ಷ್ಮೀ ಅವರಿಗೂ ಸಂಕಷ್ಟ ಎದುರಾಗಿದೆ.

ಮೈಸೂರಿನಲ್ಲಿರುವ ದರ್ಶನ್ ಅವರ ಫಾರ್ಮ್‌ಹೌಸ್‌ನಲ್ಲಿ ವಿವಿಧ ತಳಿಯ ಪ್ರಾಣಿ ಪಕ್ಷಿಗಳಿವೆ.  ಇನ್ನೂ ಈ ತೋಟ ವಿಜಯಲಕ್ಷ್ಮೀ ಅವರ ಹೆಸರಲ್ಲಿದ್ದು, ಕಾನೂನು ಬಾಹಿರವಾಗಿ ಸಾಕಿದ್ದಾರೆಂಬ ಆರೋಪದಲ್ಲಿ ದರ್ಶನ್​ ಪತ್ನಿ ವಿಜಯಲಕ್ಷ್ಮೀ ಎ1 ಆರೋಪಿಯಾಗಿ, ದರ್ಶನ್​ ಎ3 ಆರೋಪಿಯಾಗಿ ಪ್ರಕರಣ ದಾಖಲಾಗಿತ್ತು.

ಕಾನೂನು ಬಾಹಿರವಾಗಿ ವಿಶಿಷ್ಟ ಜಾತಿಯ ಬಾರ್​ ಹೆಡೆಡ್​ ಗೂಸ್​ ಬಾತುಕೋಳಿಯನ್ನು ಸಾಕಿದ್ದಾರೆಂಬ ಆರೋಪದಲ್ಲಿ ಈ ಪಕ್ಷಿಯನ್ನು ವಶಕ್ಕೆ ಪಡೆದಿದ್ದ ಅರಣ್ಯ ಇಲಾಖೆ ಎಫ್​ಐಆರ್​ ದಾಖಲಿಸಿದರು.

 ದರ್ಶನ್​ ಸೇರಿದಂತೆ ಸಂಬಂಧಪಟ್ಟವರಿಗೆ ವಿಚಾರಣೆಗೆ ಬರುವಂತೆ ನೋಟಿಸ್​ ನೀಡಲಾಗಿತ್ತು. ಹಲವು ಬಾರಿ ನೋಟಿಸ್​ ನೀಡಿದರೂ ವಿಚಾರಣೆಗೆ ದರ್ಶನ್​ ಹಾಜರಾಗದಿದ್ದಕ್ಕೆ ಇದೀಗ ದರ್ಶನ್​ ವಿರುದ್ಧ ಚಾರ್ಜ್​ಶೀಟ್​ ಸಲ್ಲಿಸಲು ಅರಣ್ಯ ಇಲಾಖೆ ನಿರ್ಧಾರ ಮಾಡಿದೆ ಎಂದು ತಿಳಿದುಬಂದಿದೆ. ಹೀಗಾಗಿ ದರ್ಶನ್​ ಮತ್ತು ಪತ್ನಿ ವಿಜಯಲಕ್ಷ್ಮೀಗೆ ಸಂಕಷ್ಟ ಎದುರಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಜೂನ್ 30ರಿಂದ 'ಮನ್‌ ಕಿ ಬಾತ್' ಮತ್ತೇ ಶುರು: ಪ್ರಧಾನಿ ಮೋದಿ