Webdunia - Bharat's app for daily news and videos

Install App

ಸಂಕಷ್ಟದಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮೀ, ಏನಿದು ಪ್ರಕರಣ ಗೊತ್ತಾ

Sampriya
ಮಂಗಳವಾರ, 18 ಜೂನ್ 2024 (17:50 IST)
photo Courtesy Instagram
ಬೆಂಗಳೂರು: ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಎ 2 ಆರೋಪಿಯಾಗಿರುವ ನಟ ದರ್ಶನ್‌ ಅವರಿಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಅದಲ್ಲದೆ ಈ ಪ್ರಕರಣದಲ್ಲಿ ದರ್ಶನ್ ಅವರ  ಪತ್ನಿ ವಿಜಯಲಕ್ಷ್ಮೀ ಅವರಿಗೂ ಸಂಕಷ್ಟ ಎದುರಾಗಿದೆ.

ಮೈಸೂರಿನಲ್ಲಿರುವ ದರ್ಶನ್ ಅವರ ಫಾರ್ಮ್‌ಹೌಸ್‌ನಲ್ಲಿ ವಿವಿಧ ತಳಿಯ ಪ್ರಾಣಿ ಪಕ್ಷಿಗಳಿವೆ.  ಇನ್ನೂ ಈ ತೋಟ ವಿಜಯಲಕ್ಷ್ಮೀ ಅವರ ಹೆಸರಲ್ಲಿದ್ದು, ಕಾನೂನು ಬಾಹಿರವಾಗಿ ಸಾಕಿದ್ದಾರೆಂಬ ಆರೋಪದಲ್ಲಿ ದರ್ಶನ್​ ಪತ್ನಿ ವಿಜಯಲಕ್ಷ್ಮೀ ಎ1 ಆರೋಪಿಯಾಗಿ, ದರ್ಶನ್​ ಎ3 ಆರೋಪಿಯಾಗಿ ಪ್ರಕರಣ ದಾಖಲಾಗಿತ್ತು.

ಕಾನೂನು ಬಾಹಿರವಾಗಿ ವಿಶಿಷ್ಟ ಜಾತಿಯ ಬಾರ್​ ಹೆಡೆಡ್​ ಗೂಸ್​ ಬಾತುಕೋಳಿಯನ್ನು ಸಾಕಿದ್ದಾರೆಂಬ ಆರೋಪದಲ್ಲಿ ಈ ಪಕ್ಷಿಯನ್ನು ವಶಕ್ಕೆ ಪಡೆದಿದ್ದ ಅರಣ್ಯ ಇಲಾಖೆ ಎಫ್​ಐಆರ್​ ದಾಖಲಿಸಿದರು.

 ದರ್ಶನ್​ ಸೇರಿದಂತೆ ಸಂಬಂಧಪಟ್ಟವರಿಗೆ ವಿಚಾರಣೆಗೆ ಬರುವಂತೆ ನೋಟಿಸ್​ ನೀಡಲಾಗಿತ್ತು. ಹಲವು ಬಾರಿ ನೋಟಿಸ್​ ನೀಡಿದರೂ ವಿಚಾರಣೆಗೆ ದರ್ಶನ್​ ಹಾಜರಾಗದಿದ್ದಕ್ಕೆ ಇದೀಗ ದರ್ಶನ್​ ವಿರುದ್ಧ ಚಾರ್ಜ್​ಶೀಟ್​ ಸಲ್ಲಿಸಲು ಅರಣ್ಯ ಇಲಾಖೆ ನಿರ್ಧಾರ ಮಾಡಿದೆ ಎಂದು ತಿಳಿದುಬಂದಿದೆ. ಹೀಗಾಗಿ ದರ್ಶನ್​ ಮತ್ತು ಪತ್ನಿ ವಿಜಯಲಕ್ಷ್ಮೀಗೆ ಸಂಕಷ್ಟ ಎದುರಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Cabinet reshuffle: ಸಿದ್ದರಾಮಯ್ಯ ಸಂಪುಟದಲ್ಲಿ ಇಷ್ಟು ಸಚಿವರಿಗೆ ಕೊಕ್, ಲಿಸ್ಟ್ ನಲ್ಲಿ ಯಾರೆಲ್ಲಾ ಇದ್ದಾರೆ

Indore Raja Raguvamshi Case: ಸೊಸೆಯ ಬಗ್ಗೆ ಇಂಚಿಂಚು ಮಾಹಿತಿ ಬಿಚ್ಚಿಟ್ಟ ರಾಜ ರಘುವಂಶಿ ತಾಯಿ

Coastal Karnataka: ಕರಾವಳಿಯ ಮಳೆಗಾಲದ ಅತಿಥಿ ಕಲ್ಲಣಬೆಗೆ ಭಾರೀ ಡಿಮ್ಯಾಂಡ್‌

Modi: ಮೋದಿ ಎಲ್ಲಿ ಪ್ರಚಾರ ಸಿಗುತ್ತೋ ಅಲ್ಲಿ ಮಾತ್ರ ಹೋಗ್ತಾರಾ: ಪ್ರಲ್ಹಾದ್ ಜೋಶಿ ಏನು ಹೇಳಿದ್ರು

ಕಾಂಗ್ರೆಸ್ ಸರ್ಕಾರ ಪತನವಾಗುತ್ತೆ, ಬಿಜೆಪಿ ಅಧಿಕಾರ ಹಿಡಿಯುತ್ತೆ: ವಿಶ್ವೇಶ್ವರ ಹೆಗಡೆ ಕಾಗೇರಿ

ಮುಂದಿನ ಸುದ್ದಿ
Show comments