Webdunia - Bharat's app for daily news and videos

Install App

ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ದರ್ಶನ್ ಪ್ರಚಾರ: ಕುಮಾರಸ್ವಾಮಿ ಪರ ಸುಮಲತಾ ಪರೋಕ್ಷ ವಾರ್!

Krishnaveni K
ಗುರುವಾರ, 18 ಏಪ್ರಿಲ್ 2024 (10:10 IST)
ಮಂಡ್ಯ: ಈ ಬಾರಿ ಮಂಡ್ಯ ಲೋಕಸಭೆ ಕ್ಷೇತ್ರದ ಟಿಕೆಟ್ ಕೈ ತಪ್ಪಿದರೂ ಬಿಜೆಪಿ ಪಕ್ಷಕ್ಕೆ ಅಧಿಕೃತವಾಗಿ ಸೇರಿಕೊಂಡಿದ್ದ ಸುಮಲತಾ ಅಂಬರೀಶ್ ಇದೀಗ ಪ್ರಚಾರ ಕಣದಿಂದ ದೂರವಿದ್ದಾರೆ. ಆದರೆ ಅವರ ದತ್ತುಪುತ್ರ ನಟ ದರ್ಶನ್ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಮಾಡಲಿದ್ದಾರೆ.

ಸುಮಲತಾ ಅಂಬರೀಶ್ ಇತ್ತೀಚೆಗೆ ಮಂಡ್ಯದಲ್ಲಿ ಕಾರ್ಯಕರ್ತರ ಸಭೆ ನಡೆಸಿದ್ದರು. ಈ ವೇಳೆ ತಾವು ಬಿಜೆಪಿ ಸೇರುತ್ತಿರುವುದಾಗಿ ಘೋಷಣೆ ಮಾಡಿದ್ದರು. ಈ ಸಭೆಯಲ್ಲಿ ಸುಮಲತಾರನ್ನು ಅಮ್ಮ ಎಂದೇ ಕರೆಯುವ ನಟ ದರ್ಶನ್ ಕೂಡಾ ಭಾಗಿಯಾಗಿದ್ದರು. ಅಮ್ಮ ಎಲ್ಲಿ ಇರುತ್ತಾರೋ ನಾನು ಅಲ್ಲೇ ಇರುತ್ತೇನೆ ಎಂದಿದ್ದರು.

ಮಂಡ್ಯದಲ್ಲಿ ಈ ಬಾರಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಎಚ್ ಡಿ ಕುಮಾರಸ್ವಾಮಿ ಸ್ಪರ್ಧಿಸುತ್ತಿದ್ದಾರೆ. ಕುಮಾರಸ್ವಾಮಿ ಮತ್ತು ಸುಮಲತಾ ನಡುವೆ ಕಳೆದ ಚುನಾವಣೆಯಲ್ಲೇ ಮಾತಿನ ಚಕಮಕಿ ಜೋರಾಗಿತ್ತು. ಇಬ್ಬರ ನಡುವೆ ಸಂಬಂಧ ಅಷ್ಟೇನೂ ಚೆನ್ನಾಗಿರಲಿಲ್ಲ. ಹಾಗಿದ್ದರೂ ಈ ಚುನಾವಣೆ ವೇಳೆಗೆ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದರಿಂದ ಇತ್ತೀಚೆಗೆ ಸುಮಲತಾ ಬೆಂಬಲ ಕೋರಲು ಕುಮಾರಸ್ವಾಮಿ ಅವರ ಮನೆಗೇ ತೆರಳಿದ್ದರು. ಮೇಲ್ನೋಟಕ್ಕೆ ಇಬ್ಬರೂ ಪ್ಯಾಚ್‍ ಅಪ್ ಮಾಡಿಕೊಂಡಿದ್ದರು.

ಆದರೆ ಒಳಗೊಳಗೆ ಮಂಡ್ಯ ಟಿಕೆಟ್ ಕೈ ತಪ್ಪಿದ ಬೇಸರ ಸುಮಲತಾರನ್ನು ಕಾಡುತ್ತಿರಬಹುದು. ಇದೇ ಕಾರಣಕ್ಕೆ ಅವರು ಈಗ ಮಂಡ್ಯದಲ್ಲಿ ಪ್ರಚಾರ ಮಾಡುತ್ತಿಲ್ಲ. ಬಿಜೆಪಿ ಹೈಕಮಾಂಡ್ ಹೇಳಿದರೆ ಪ್ರಚಾರಕ್ಕೆ ಸಿದ್ಧ ಎಂದಿದ್ದರು. ಆದರೆ ಈಗ ಪ್ರಚಾರದಿಂದ ದೂರವೇ ಉಳಿದಿದ್ದಾರೆ.

ಇನ್ನೊಂದೆಡೆ ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಸ್ಟಾರ್ ಚಂದ್ರು ಪರ ಸುಮಲತಾರನ್ನು ಅಮ್ಮ ಎಂದೇ ಕರೆಯುವ ನಟ ದರ್ಶನ್ ಪ್ರಚಾರ ನಡೆಸಲು ಮುಂದಾಗಿರುವುದು ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ. ಹಾಗಿದ್ದರೆ ಸುಮಲತಾ ಪರೋಕ್ಷವಾಗಿ ದರ್ಶನ್ ಮೂಲಕ ಕಾಂಗ್ರೆಸ್ ಗೆ ಬೆಂಬಲ ನೀಡುತ್ತಿದ್ದಾರೆಯೇ ಎಂಬ ಅನುಮಾನವೂ ಮೂಡಿದೆ. ಆದರೆ ದರ್ಶನ್ ಈ ಮೊದಲೂ ಪಕ್ಷ ಬೇಧವಿಲ್ಲದೇ ತಮ್ಮ ಪರಿಚಯದ ವ್ಯಕ್ತಿಗಳಿಗಾಗಿ ಪ್ರಚಾರ ನಡೆಸಿದ್ದು ಇದೆ. ಇದೂ ಅದೇ ರೀತಿಯ ಪ್ರಚಾರವೇ ಇಲ್ಲ, ಇದರ ಹಿಂದೆ ಬೇರೆ ಲೆಕ್ಕಾಚಾರವಿದೆಯೇ ಎಂದು ಸ್ಪಷ್ಟವಾಗಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದಿನಿಂದ ಹವಾಮಾನದ ಈ ಬದಲಾವಣೆಯನ್ನು ತಪ್ಪದೇ ಗಮನಿಸಿ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments