Webdunia - Bharat's app for daily news and videos

Install App

ಸುಮಲತಾ ಸಭೆಯಲ್ಲಿ ಡಿ ಬಾಸ್ ದರ್ಶನ್ ಭಾಗಿ ಸಾಧ್ಯತೆ

Krishnaveni K
ಸೋಮವಾರ, 1 ಏಪ್ರಿಲ್ 2024 (10:47 IST)
ಮಂಡ್ಯ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಬೇಕೋ, ಜೆಡಿಎಸ್ ಅಭ್ಯರ್ಥಿಯನ್ನು ಬೆಂಬಲಿಸಬೇಕೋ ಎಂಬ ಗೊಂದಲಗಳಿಗೆ ಹಾಲಿ ಸಂಸದೆ ಸುಮಲತಾ ಅಂಬರೀಶ್ ಏಪ್ರಿಲ್ 3 ರಂದು ತೆರೆ ಎಳೆಯುವ ಸಾಧ‍್ಯತೆಯಿದೆ.

ಈ ಸಭೆಯಲ್ಲಿ ಸುಮಲತಾ ಬೆಂಬಲಿಗ ನಾಯಕರು, ಕಾರ್ಯಕರ್ತರು ಭಾಗಿಯಾಗಲಿದ್ದಾರೆ. ಅವರ ಸಮ್ಮುಖದಲ್ಲಿ ತಮ್ಮ ಭವಿಷ್ಯದ ತೀರ್ಮಾನ ಮಾಡುವುದಾಗಿ ಸುಮಲತಾ ಈಗಾಗಲೇ ಹೇಳಿದ್ದಾರೆ. ತನ್ನ ರಾಜಕೀಯ ಭವಿಷ್ಯವೇನಿದ್ದರೂ ಮಂಡ್ಯದಿಂದಲೇ ಎಂದು ಅವರು ಈಗಾಗಲೇ ಸ್ಪಷ್ಟಪಡಿಸಿದ್ದಾರೆ.

ಆದರೆ ಬಿಜೆಪಿಯಿಂದ ಅವರಿಗೆ ಮಂಡ್ಯ ಟಿಕೆಟ್ ಸಿಕ್ಕಿಲ್ಲ. ಬಿಜೆಪಿ ಮಂಡ್ಯ ಕ್ಷೇತ್ರವನ್ನು ಮೈತ್ರಿ ಪಕ್ಷ ಜೆಡಿಎಸ್ ಗೆ ಬಿಟ್ಟುಕೊಟ್ಟಿದೆ. ಹೀಗಾಗಿ ಮಂಡ್ಯದಿಂದ ಎಚ್ ಡಿ ಕುಮಾರಸ್ವಾಮಿ ಕಣಕ್ಕಿಳಿಯುತ್ತಿದ್ದಾರೆ. ಹೀಗಾಗಿ ಸುಮಲತಾ ತಮ್ಮ ಮುಂದಿನ ನಡೆ ನಿರ್ಧರಿಸಲಿದ್ದಾರೆ.

ಮಂಡ್ಯದಲ್ಲಿ ಏಪ್ರಿಲ್ 3 ರಂದು ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್, ರಾಕ್ ಲೈನ್ ವೆಂಕಟೇಶ್ ಮುಂತಾದವರೂ ಭಾಗಿಯಾಗುವ ಸಾಧ‍್ಯತೆಯಿದೆ. ದರ್ಶನ್ ಈಹಿಂದೆ ಸುಮಲತಾ ಸಭೆ ನಡೆಸಿದಾಗಲೂ ಭಾಗಿಯಾಗಿದ್ದರು. ಇದಕ್ಕೆ ಮೊದಲು 2019 ರ ಲೋಕಸಭೆ ಚುನಾವಣೆಯಲ್ಲಿ ಸುಮಲತಾ ಗೆಲುವಿಗೆ ಪ್ರಚಾರ ಮಾಡಿ ಶ್ರಮಿಸಿದ್ದರು. ತಮ್ಮ ಇನ್ನೊಬ್ಬ ಮಗ ಎಂದೇ ದರ್ಶನ್ ರನ್ನು ಸುಮಲತಾ ಕರೆಯುತ್ತಾರೆ. ಹೀಗಾಗಿ ಈ ಸಭೆಯಲ್ಲಿ ದರ್ಶನ್ ಕೂಡಾ ಭಾಗಿಯಾಗುವ ಸಾಧ‍್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್: ಏಲ್ಲೆಲ್ಲಿ ಮಳೆ ಸಾಧ್ಯತೆ ಇಲ್ಲಿದೆ ಮಾಹಿತಿ

ಟ್ರಾಫಿಕ್‌ ಫೈನ್‌ ಆಫರ್‌ಗೆ ರಾಜಧಾನಿಯಲ್ಲಿ ಭರ್ಜರಿ ರೆಸ್ಪಾನ್ಸ್‌: ಮೊದಲ ದಿನ ವಸೂಲಿಯಾದ ದಂಡವೆಷ್ಟು ಗೊತ್ತಾ

ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನಕ್ಕಾಗಿ ತೆರಳುತ್ತಿದ್ದ ಎಂಟು ಮಂದಿ ಭೀಕರ ರಸ್ತೆ ಅಪಘಾತದಲ್ಲಿ ಬಲಿ

ಷರತ್ತುಬದ್ಧ ಜಾಮೀನು ಪಡೆದ ಮಹೇಶ್‌ ಶೆಟ್ಟಿ ತಿಮರೋಡಿಗೆ ಮತ್ತೆ ಬಂಧನದ ಭೀತಿ

ಗಾಜಿಯಾಬಾದ್‌: ಬೀದಿ ನಾಯಿಗಳಿಗೆ ಊಟ ಹಾಕುತ್ತಿದ್ದ ಮಹಿಳೆಗೆ ಅಟ್ಟಾಡಿಸಿ ಹೊಡದ ವ್ಯಕ್ತಿ, Viral Video

ಮುಂದಿನ ಸುದ್ದಿ
Show comments