ಧರ್ಮಸ್ಥಳ ಮಂಜುನಾಥನ ಮುಂದೆ ಪ್ರಮಾಣ ಮಾಡಲಿ: ಇಂದ್ರಜಿತ್ ಲಂಕೇಶ್ ಪ್ರತಿಸವಾಲು

Webdunia
ಶನಿವಾರ, 17 ಜುಲೈ 2021 (20:04 IST)
ನಟ ದರ್ಶನ್ ವಿಚಲಿತರಾಗಿದ್ದಾರೆ. ಹಾಗಾಗಿ ಗಂಡಸ್ತನದ ಬಗ್ಗೆ ಮಾತನಾಡುತ್ತಿದ್ದಾರೆ. ಅವರು ತಪ್ಪು ಮಾಡಿಲ್ಲ ಅನ್ನುವುದಾದರೆ ಧರ್ಮಸ್ಥಳ ಮಂಜುನಾಥನ ಮುಂದೆ ತಪ್ಪು ಮಾಡಿಲ್ಲ ಅಂತ ಪ್ರಮಾಣ ಮಾಡಲಿ ಎಂದು ನಿರ್ದೇಶಕ ಹಾಗೂ ಪತ್ರಕರ್ತ ಇಂದ್ರಜಿತ್ ಲಂಕೇಶ್ ಪ್ರತಿಸವಾಲು ಹಾಕಿದ್ದಾರೆ.
ಬೆಂಗಳೂರಿನಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದರ್ಶನ್ ಹೇಳಿದಂತೆ ನಾನು ಗಾಂಡೂಗಿರಿ ಎಂಬ ಶಬ್ಧ ಬಳಸಿಲ್ಲ. ಗೂಂಡಾಗಿರಿ ಎಂದು ಹೇಳಿದ್ದೇನೆ. ಲಾಯರ್ ನನ್ನ ಪಕ್ಕದಲ್ಲಿ ಕೂರಿಸಿಕೊಂಡಿದ್ದು ಗಂಡಸ್ತನ ಎಂದು ಅವರು ಪ್ರಶ್ನೆ ಮಾಡಿದ್ದಾರೆ. ಅವರು ಬಳಸಿರುವ ಭಾಷೆ ಅವರ ಸಂಸ್ಕೃತಿಯನ್ನು ತೋರಿಸುತ್ತದೆ ಎಂದರು.
ನಾನು ಅವರಿಗೆ ಕೇಳಿದ ಪ್ರಶ್ನೆಗಳಿಗೆ ಅವರು ಉತ್ತರ ಕೊಡಲಿ. ಅಷ್ಟೇ. ನನ್ನ ಬಳಿ ಇರುವ ಆಡಿಯೋ, ವೀಡಿಯೋ ಮುಂತಾದ ದಾಖಲೆಗಳನ್ನು ತನಿಖಾಧಿಕಾರಿಗಳ ಮುಂದೆ ಕೊಡುತ್ತೆನೆಯೇ ಹೊರತು ಬಹಿರಂಗಪಡಿಸಲ್ಲ. ಅವರ ಯಾವ ಮಾತಿನಿಂದಲೂ ನಾನು ವಿಚಲಿತ ಆಗಲ್ಲ ಎಂದು ಇಂದ್ರಜೀತ್ ಹೇಳಿದರು.
ಇದು ಗಂಡಸ್ತನದ ಪ್ರಶ್ನೆಯಲ್ಲ. ಬಡವನ ಪರ ಧ್ವನಿ. ಸಪ್ಲಯರ್ ಗೆ ಹೊಡೆದಿದ್ದೀರೋ ಇಲ್ಲವೋ? ಅರುಣಾಕುಮಾರಿಯನ್ನು ತೋಟಕ್ಕೆ ಕರೆಸಿಕೊಂಡಿದ್ದೀರೊ ಇಲ್ಲವೋ? ಮುಂತಾಗಿ ನಾನು ಕೇಳಿದ ಪ್ರಶ್ನೆಗಳಿಗೆ ಉತ್ತರ ಕೊಡಿ. ಇಲ್ಲವೇ ಧರ್ಮಸ್ಥಳ ಮಂಜುನಾಥನ ಮೇಲೆ ಆಣೆ ಮಾಡಲಿ ಎಂದು ಸವಾಲು ಹಾಕಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕುತೂಹಲಕ್ಕೆ ಕಾರಣವ ಆದ ಲಕ್ಕುಂಡಿ ಉತ್ಖನನ ಕಾರ್ಯ ಎಲ್ಲಿಗೆ ತಲುಪಿದೆ ಗೊತ್ತಾ

ಕಟ್ಟಡ ನಿರ್ಮಾಣಕ್ಕಾಗಿ ಅಗೆದಿದ್ದ ಗುಂಡಿಯಲ್ಲಿ ಬಿದ್ದು ಟೆಕ್ಕಿ ಸಾವು, ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ವಿಧಾನಸಭಾ ಚುನಾವಣೆ, ತಮಿಳುನಾಡಿಗೆ ಪ್ರಧಾನಿ ಮೋದಿ ಭೇಟಿ

ರಾಷ್ಟ್ರೀಯ ಅಧ್ಯಕ್ಷರಾಗುತ್ತಿದ್ದ ಹಾಗೇ ನಿತಿನ್ ನಬಿನ್‌ಗೆ ಸಿಕ್ಕಿದ ಭದ್ರತೆ ಯಾವುದು ಗೊತ್ತಾ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್, ಇವರು ಎಷ್ಟು ಬಾರಿ ಶಾಸಕರಾಗಿದ್ರು ಗೊತ್ತಾ

ಮುಂದಿನ ಸುದ್ದಿ
Show comments