Webdunia - Bharat's app for daily news and videos

Install App

ಧರ್ಮಸ್ಥಳ ಮಂಜುನಾಥನ ಮುಂದೆ ಪ್ರಮಾಣ ಮಾಡಲಿ: ಇಂದ್ರಜಿತ್ ಲಂಕೇಶ್ ಪ್ರತಿಸವಾಲು

Webdunia
ಶನಿವಾರ, 17 ಜುಲೈ 2021 (20:04 IST)
ನಟ ದರ್ಶನ್ ವಿಚಲಿತರಾಗಿದ್ದಾರೆ. ಹಾಗಾಗಿ ಗಂಡಸ್ತನದ ಬಗ್ಗೆ ಮಾತನಾಡುತ್ತಿದ್ದಾರೆ. ಅವರು ತಪ್ಪು ಮಾಡಿಲ್ಲ ಅನ್ನುವುದಾದರೆ ಧರ್ಮಸ್ಥಳ ಮಂಜುನಾಥನ ಮುಂದೆ ತಪ್ಪು ಮಾಡಿಲ್ಲ ಅಂತ ಪ್ರಮಾಣ ಮಾಡಲಿ ಎಂದು ನಿರ್ದೇಶಕ ಹಾಗೂ ಪತ್ರಕರ್ತ ಇಂದ್ರಜಿತ್ ಲಂಕೇಶ್ ಪ್ರತಿಸವಾಲು ಹಾಕಿದ್ದಾರೆ.
ಬೆಂಗಳೂರಿನಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದರ್ಶನ್ ಹೇಳಿದಂತೆ ನಾನು ಗಾಂಡೂಗಿರಿ ಎಂಬ ಶಬ್ಧ ಬಳಸಿಲ್ಲ. ಗೂಂಡಾಗಿರಿ ಎಂದು ಹೇಳಿದ್ದೇನೆ. ಲಾಯರ್ ನನ್ನ ಪಕ್ಕದಲ್ಲಿ ಕೂರಿಸಿಕೊಂಡಿದ್ದು ಗಂಡಸ್ತನ ಎಂದು ಅವರು ಪ್ರಶ್ನೆ ಮಾಡಿದ್ದಾರೆ. ಅವರು ಬಳಸಿರುವ ಭಾಷೆ ಅವರ ಸಂಸ್ಕೃತಿಯನ್ನು ತೋರಿಸುತ್ತದೆ ಎಂದರು.
ನಾನು ಅವರಿಗೆ ಕೇಳಿದ ಪ್ರಶ್ನೆಗಳಿಗೆ ಅವರು ಉತ್ತರ ಕೊಡಲಿ. ಅಷ್ಟೇ. ನನ್ನ ಬಳಿ ಇರುವ ಆಡಿಯೋ, ವೀಡಿಯೋ ಮುಂತಾದ ದಾಖಲೆಗಳನ್ನು ತನಿಖಾಧಿಕಾರಿಗಳ ಮುಂದೆ ಕೊಡುತ್ತೆನೆಯೇ ಹೊರತು ಬಹಿರಂಗಪಡಿಸಲ್ಲ. ಅವರ ಯಾವ ಮಾತಿನಿಂದಲೂ ನಾನು ವಿಚಲಿತ ಆಗಲ್ಲ ಎಂದು ಇಂದ್ರಜೀತ್ ಹೇಳಿದರು.
ಇದು ಗಂಡಸ್ತನದ ಪ್ರಶ್ನೆಯಲ್ಲ. ಬಡವನ ಪರ ಧ್ವನಿ. ಸಪ್ಲಯರ್ ಗೆ ಹೊಡೆದಿದ್ದೀರೋ ಇಲ್ಲವೋ? ಅರುಣಾಕುಮಾರಿಯನ್ನು ತೋಟಕ್ಕೆ ಕರೆಸಿಕೊಂಡಿದ್ದೀರೊ ಇಲ್ಲವೋ? ಮುಂತಾಗಿ ನಾನು ಕೇಳಿದ ಪ್ರಶ್ನೆಗಳಿಗೆ ಉತ್ತರ ಕೊಡಿ. ಇಲ್ಲವೇ ಧರ್ಮಸ್ಥಳ ಮಂಜುನಾಥನ ಮೇಲೆ ಆಣೆ ಮಾಡಲಿ ಎಂದು ಸವಾಲು ಹಾಕಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments