Webdunia - Bharat's app for daily news and videos

Install App

ಮೈಸೂರು ದಸರಾ ಸಿಎಂ ಸಿಟಿ ರೌಂಡ್ಸ್

Webdunia
ಸೋಮವಾರ, 26 ಸೆಪ್ಟಂಬರ್ 2022 (15:53 IST)
ದಸರಾ ಅಂಗವಾಗಿ ನಗರದಲ್ಲಿ ಮಾಡಿರುವ ವಿದ್ಯುತ್‌ ದೀಪಾಲಂಕಾರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್‌ ಮತ್ತು ಇಂಧನ ಸಚಿವ ಸುನೀಲ್‌ಕುಮಾರ್‌ ಭಾನುವಾರ ಮಧ್ಯರಾತ್ರಿವರೆಗೂ ವೀಕ್ಷಿಸಿದರು.
ರಾತ್ರಿ 10.30ರ ಸುಮಾರಿಗೆ ನಗರ ಪ್ರದಕ್ಷಿಣೆ ಆರಂಭಿಸಿದ ಅವರು, ರ‍್ಯಾಡಿಷನ್ ಬ್ಲೂ ಹೋಟೆಲ್‌ನಿಂದ ಕೆಎಸ್‌ಆರ್‌ಟಿಸಿಯ ಎರಡು ವೋಲ್ವೋ ಬಸ್ ಮೂಲಕ ಜೆಎಸ್‌ಎಸ್‌ ಮಹಾವಿದ್ಯಾಪೀಠ ವೃತ್ತಕ್ಕೆ ಬಂದರು. ಅಲ್ಲಿಂದ ಪ್ರವಾಸೋದ್ಯಮ ನಿಗಮದ 'ಅಂಬಾರಿ' ಡಬ್ಬಲ್ ಡೆಕ್ಕರ್ ಬಸ್‌ನಲ್ಲಿ ಸಂಚರಿಸಿದರು. ಆಕರ್ಷಕ ವಿದ್ಯುತ್‌ ದೀಪಾಲಂಕಾರವನ್ನು ಕಣ್ತುಂಬಿಕೊಂಡರು. ಅವರೊಂದಿಗೆ ಪಕ್ಷದ ಮುಖಂಡರು ಮತ್ತು ಅಧಿಕಾರಿಗಳು ಭಾಗವಹಿಸಿದ್ದರು.
 
ಹಾರ್ಡಿಂಗ್‌ ವೃತ್ತ- ಜಯಚಾಮರಾಜೇಂದ್ರ ಒಡೆಯರ್ ವೃತ್ತ-ಕೆ.ಆರ್.ವೃತ್ತ-ಸಯ್ಯಾಜಿರಾವ್‌ ರಸ್ತೆ ಮೂಲಕ ಹೈವೇ ವೃತ್ತದವರೆಗೆ ಸಾಗಿ ಆಯುರ್ವೇದ ಆಸ್ಪತ್ರೆ- ರೈಲು ನಿಲ್ದಾಣ- ಮೆಟ್ರೊಪೋಲ್‌ ವೃತ್ತ- ಹುಣಸೂರು ರಸ್ತೆ- ಸ್ಕೌಟ್ಸ್ ಅಂಡ್ ಗೈಡ್ಸ್ ಮೈದಾನದ ಎದುರಿನ ರಸ್ತೆ ಮೂಲಕ ಚಾಮರಾಜ ಜೋಡಿ ರಸ್ತೆ ಮೂಲಕ ಜೆಎಸ್‌ಎಸ್‌ ಮಹಾವಿದ್ಯಾಪೀಠದವರೆಗೆ ದೀಪಾಲಂಕಾರವನ್ನು ವೀಕ್ಷಿಸಿದರು. 12.10ರ ಸುಮಾರಿಗೆ 'ದೀಪಾಲಂಕಾರ ವೀಕ್ಷಣೆ ರೌಂಡ್ಸ್‌' ಮುಗಿಸಿದರು. ಮಾರ್ಗದಲ್ಲಿ ಎದುರಾದ ಸಾರ್ವಜನಿಕರಿಗೆ ಕೈಬೀಸುತ್ತಾ ಸಾಗಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments