ಮೈಸೂರು ದಸರಾ ಸಿಎಂ ಸಿಟಿ ರೌಂಡ್ಸ್

Webdunia
ಸೋಮವಾರ, 26 ಸೆಪ್ಟಂಬರ್ 2022 (15:53 IST)
ದಸರಾ ಅಂಗವಾಗಿ ನಗರದಲ್ಲಿ ಮಾಡಿರುವ ವಿದ್ಯುತ್‌ ದೀಪಾಲಂಕಾರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್‌ ಮತ್ತು ಇಂಧನ ಸಚಿವ ಸುನೀಲ್‌ಕುಮಾರ್‌ ಭಾನುವಾರ ಮಧ್ಯರಾತ್ರಿವರೆಗೂ ವೀಕ್ಷಿಸಿದರು.
ರಾತ್ರಿ 10.30ರ ಸುಮಾರಿಗೆ ನಗರ ಪ್ರದಕ್ಷಿಣೆ ಆರಂಭಿಸಿದ ಅವರು, ರ‍್ಯಾಡಿಷನ್ ಬ್ಲೂ ಹೋಟೆಲ್‌ನಿಂದ ಕೆಎಸ್‌ಆರ್‌ಟಿಸಿಯ ಎರಡು ವೋಲ್ವೋ ಬಸ್ ಮೂಲಕ ಜೆಎಸ್‌ಎಸ್‌ ಮಹಾವಿದ್ಯಾಪೀಠ ವೃತ್ತಕ್ಕೆ ಬಂದರು. ಅಲ್ಲಿಂದ ಪ್ರವಾಸೋದ್ಯಮ ನಿಗಮದ 'ಅಂಬಾರಿ' ಡಬ್ಬಲ್ ಡೆಕ್ಕರ್ ಬಸ್‌ನಲ್ಲಿ ಸಂಚರಿಸಿದರು. ಆಕರ್ಷಕ ವಿದ್ಯುತ್‌ ದೀಪಾಲಂಕಾರವನ್ನು ಕಣ್ತುಂಬಿಕೊಂಡರು. ಅವರೊಂದಿಗೆ ಪಕ್ಷದ ಮುಖಂಡರು ಮತ್ತು ಅಧಿಕಾರಿಗಳು ಭಾಗವಹಿಸಿದ್ದರು.
 
ಹಾರ್ಡಿಂಗ್‌ ವೃತ್ತ- ಜಯಚಾಮರಾಜೇಂದ್ರ ಒಡೆಯರ್ ವೃತ್ತ-ಕೆ.ಆರ್.ವೃತ್ತ-ಸಯ್ಯಾಜಿರಾವ್‌ ರಸ್ತೆ ಮೂಲಕ ಹೈವೇ ವೃತ್ತದವರೆಗೆ ಸಾಗಿ ಆಯುರ್ವೇದ ಆಸ್ಪತ್ರೆ- ರೈಲು ನಿಲ್ದಾಣ- ಮೆಟ್ರೊಪೋಲ್‌ ವೃತ್ತ- ಹುಣಸೂರು ರಸ್ತೆ- ಸ್ಕೌಟ್ಸ್ ಅಂಡ್ ಗೈಡ್ಸ್ ಮೈದಾನದ ಎದುರಿನ ರಸ್ತೆ ಮೂಲಕ ಚಾಮರಾಜ ಜೋಡಿ ರಸ್ತೆ ಮೂಲಕ ಜೆಎಸ್‌ಎಸ್‌ ಮಹಾವಿದ್ಯಾಪೀಠದವರೆಗೆ ದೀಪಾಲಂಕಾರವನ್ನು ವೀಕ್ಷಿಸಿದರು. 12.10ರ ಸುಮಾರಿಗೆ 'ದೀಪಾಲಂಕಾರ ವೀಕ್ಷಣೆ ರೌಂಡ್ಸ್‌' ಮುಗಿಸಿದರು. ಮಾರ್ಗದಲ್ಲಿ ಎದುರಾದ ಸಾರ್ವಜನಿಕರಿಗೆ ಕೈಬೀಸುತ್ತಾ ಸಾಗಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೀಟ್‌ ಪ್ರಶ್ನೆ ಪತ್ರಿಕೆ ಅಕ್ರಮ: ಆರ್‌ಎಸ್‌ಎಸ್‌, ಬಿಜೆಪಿ ಕೈವಾಡವೆಂದ ಪ್ರಿಯಾಂಕ್ ಖರ್ಗೆ

ಸರ್ಕಾರ ಸ್ಥಿರವಾಗಿದ್ದು, ಆಡಳಿತದಲ್ಲಿ ಯಾವುದೇ ಗೊಂದಲವಿಲ್ಲ: ಸಚಿವ ಈಶ್ವರ್ ಖಂಡ್ರೆ

ಸತೀಶನ್‌ ಪ್ರಮಾಣ ವಚನ: ಮಲ್ಲಿಕಾರ್ಜುನ್ ಖರ್ಗೆ, ರಾಹುಲ್‌ ಭಾಗಿ, ವಿಜಯ್‌ ಕೂಡಾ ಭಾಗಿಯಾಗುವ ಸಾಧ್ಯತೆ

ಬಹುಶಃ ಕಮಲ್ ಹಾಸನ್ ಸಿಎಂ ಆಗಿದ್ದರೆ ಅಸೂಯೆ ಪಡುತ್ತಿದ್ದೆ: ವಿಜಯ್ ಬಗ್ಗೆ ಅಸೂಯೆಗೆ ಸ್ಪಷ್ಟನೆ ಕೊಟ್ಟ ನಟ ರಜನಿಕಾಂತ್‌

ಬೆಲೆ ಏರಿಕೆಗೆ ಕೇಂದ್ರವನ್ನು ಟೀಕಿಸುವ ಕಾಂಗ್ರೆಸ್ ನಾಯಕರು ನೀವೆಷ್ಟು ದರ ಏರಿಸಿದ್ದೀರಿ ಪಟ್ಟಿ ನೀಡಿ: ಕುಮಾರಸ್ವಾಮಿ ಸವಾಲು

ಮುಂದಿನ ಸುದ್ದಿ
Show comments