Webdunia - Bharat's app for daily news and videos

Install App

ಪ್ರತಿವರ್ಷದಂತೆ ಧಾರ್ಮಿಕ ಕೈಂಕರ್ಯ ನಡೆಯುತ್ತವೆ: ಪ್ರಮೋದಾ ದೇವಿ ಒಡೆಯರ್

Webdunia
ಸೋಮವಾರ, 18 ಸೆಪ್ಟಂಬರ್ 2017 (19:16 IST)
ಮೈಸೂರು: ಪ್ರತಿ ವರ್ಷದಂತೆ ಈ ಬಾರಿಯೂ ಅರಮನೆಯಲ್ಲಿ ಧಾರ್ಮಿಕ ಕೈಂಕರ್ಯಗಳು ಮುಂದುವರೆಯುತ್ತವೆ ಎಂದು ರಾಜಮಾತೆ ಪ್ರಮೋದಾದೇವಿ ಒಡೆಯರ್ ಹೇಳಿದ್ದಾರೆ.

ಜಿಲ್ಲಾಡಳಿತ ವತಿಯಿಂದ ಆಮಂತ್ರಣ ಸ್ವೀಕರಿಸಿ ಮಾತನಾಡಿದ ಅವರು, ಖಾಸಗಿ ದರ್ಬಾರ್ ಹಾಗೂ ಜಂಬೂ ಸವಾರಿ ಚಾಲನೆ ವೇಳೆ ಈ ಬಾರಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪುಷ್ಪಾರ್ಚನೆ ಮಾಡಲಿದ್ದಾರೆ. ಖಾಸಗಿ ದರ್ಬಾರ್ ನಲ್ಲಿ ಯದುವೀರ್ ಒಡೆಯರ್ ಪತ್ನಿ, ಗರ್ಭಿಣಿ ತ್ರಿಷಿಕಾ ದೇವಿ ಒಡೆಯರ್ ಕೂಡ ಪಾಲ್ಗೊಳ್ಳಲಿದ್ದಾರೆ ಎಂದರು. ಈ ವರ್ಷ ಉತ್ತಮ ಮಳೆ-ಬೆಳೆ ಆಗಿದೆ. ತಾಯಿ ಚಾಮುಂಡೇಶ್ವರಿ ನಾಡಿನ ಜನರಿಗೆ ಶುಭವನ್ನುಂಟುಮಾಡಲಿ. ನಾಡಿನ ಜನತೆಗೆ ದಸರಾ ಶುಭಾಶಯ ತಿಳಿಸಿದರು.

ಇನ್ನು ನವರಾತ್ರಿ ಉತ್ಸವಕ್ಕೆ ಆಗುವ ಖರ್ಚುವೆಚ್ಚಕ್ಕೆ ಎಂದು ಸರ್ಕಾರದ ವತಿಯಿಂದ ಪ್ರತಿ ವರ್ಷ ಗೌರವಧನ ನೀಡಲಾಗುತ್ತೆ. ಈ ಬಾರಿ 36 ಲಕ್ಷದ  ರೂ. ಚೆಕ್ ನ್ನು ಜಿಲ್ಲಾಡಳಿತ ನೀಡಿದ್ದು, ಪ್ರಮೋದಾ ದೇವಿ ಒಡೆಯರ್ ಚೆಕ್ ಸ್ವೀಕರಿಸಿದ್ದಾರೆ. ಕಳೆದ ಬಾರಿ ಸಹ ಜಿಲ್ಲಾಡಳಿತ 35 ಲಕ್ಷ ರೂ. ಚೆಕ್ ನೀಡಿತ್ತು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments