ಪ್ರತಿವರ್ಷದಂತೆ ಧಾರ್ಮಿಕ ಕೈಂಕರ್ಯ ನಡೆಯುತ್ತವೆ: ಪ್ರಮೋದಾ ದೇವಿ ಒಡೆಯರ್

Webdunia
ಸೋಮವಾರ, 18 ಸೆಪ್ಟಂಬರ್ 2017 (19:16 IST)
ಮೈಸೂರು: ಪ್ರತಿ ವರ್ಷದಂತೆ ಈ ಬಾರಿಯೂ ಅರಮನೆಯಲ್ಲಿ ಧಾರ್ಮಿಕ ಕೈಂಕರ್ಯಗಳು ಮುಂದುವರೆಯುತ್ತವೆ ಎಂದು ರಾಜಮಾತೆ ಪ್ರಮೋದಾದೇವಿ ಒಡೆಯರ್ ಹೇಳಿದ್ದಾರೆ.

ಜಿಲ್ಲಾಡಳಿತ ವತಿಯಿಂದ ಆಮಂತ್ರಣ ಸ್ವೀಕರಿಸಿ ಮಾತನಾಡಿದ ಅವರು, ಖಾಸಗಿ ದರ್ಬಾರ್ ಹಾಗೂ ಜಂಬೂ ಸವಾರಿ ಚಾಲನೆ ವೇಳೆ ಈ ಬಾರಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪುಷ್ಪಾರ್ಚನೆ ಮಾಡಲಿದ್ದಾರೆ. ಖಾಸಗಿ ದರ್ಬಾರ್ ನಲ್ಲಿ ಯದುವೀರ್ ಒಡೆಯರ್ ಪತ್ನಿ, ಗರ್ಭಿಣಿ ತ್ರಿಷಿಕಾ ದೇವಿ ಒಡೆಯರ್ ಕೂಡ ಪಾಲ್ಗೊಳ್ಳಲಿದ್ದಾರೆ ಎಂದರು. ಈ ವರ್ಷ ಉತ್ತಮ ಮಳೆ-ಬೆಳೆ ಆಗಿದೆ. ತಾಯಿ ಚಾಮುಂಡೇಶ್ವರಿ ನಾಡಿನ ಜನರಿಗೆ ಶುಭವನ್ನುಂಟುಮಾಡಲಿ. ನಾಡಿನ ಜನತೆಗೆ ದಸರಾ ಶುಭಾಶಯ ತಿಳಿಸಿದರು.

ಇನ್ನು ನವರಾತ್ರಿ ಉತ್ಸವಕ್ಕೆ ಆಗುವ ಖರ್ಚುವೆಚ್ಚಕ್ಕೆ ಎಂದು ಸರ್ಕಾರದ ವತಿಯಿಂದ ಪ್ರತಿ ವರ್ಷ ಗೌರವಧನ ನೀಡಲಾಗುತ್ತೆ. ಈ ಬಾರಿ 36 ಲಕ್ಷದ  ರೂ. ಚೆಕ್ ನ್ನು ಜಿಲ್ಲಾಡಳಿತ ನೀಡಿದ್ದು, ಪ್ರಮೋದಾ ದೇವಿ ಒಡೆಯರ್ ಚೆಕ್ ಸ್ವೀಕರಿಸಿದ್ದಾರೆ. ಕಳೆದ ಬಾರಿ ಸಹ ಜಿಲ್ಲಾಡಳಿತ 35 ಲಕ್ಷ ರೂ. ಚೆಕ್ ನೀಡಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಿಳೆ ವಿವಸ್ತ್ರಗೊಳಿಸಿದ ಪ್ರಕರಣ, ಅಪರಾಧಿಗಳ ವಿರುದ್ಧ ಹೊರಬಿತ್ತು ಮಹತ್ವದ ತೀರ್ಪು

ಸಾಬೀತಾಗದೆ ಆರೋಪಗಳನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ: ಜಿ ಪರಮೇಶ್ವರ್‌

ಮೋದಿ ಕುರಿತ ಪುಸ್ತಕ ತಂದಿದ್ದೇನೆ ಎಂದ ರಾಹುಲ್ ಗಾಂಧಿ, ನಾನು ನೆಹರೂ, ಎಡ್ವಿನಾ ಕುರಿತ ಪುಸ್ತಕ ತಂದಿದ್ದೇನೆ ಎಂದ ನಿಶಿಕಾಂತ್ ದುಬೆ Video

ಕಮಲಾಕರ್‌ ಭಟ್‌ ಬೆಳೆಸಿದೆ ಎಂಬ ಆರೋಪಕ್ಕೆ ಎಸ್‌ ಸುರೇಶ್ ಕುಮಾರ್ ಕೌಂಟರ್‌

ಉಧಂಪುರ ಕಾರ್ಯಾಚರಣೆಯಲ್ಲಿ ಇಬ್ಬರು ಭಯೋತ್ಪಾದಕರು ಹತ್ಯೆ

ಮುಂದಿನ ಸುದ್ದಿ
Show comments